ತೆಲಂಗಾಣ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಕರ್ನಾಟಕವನ್ನು ಕತ್ತಲೆಗೆ ತಳ್ಳಿದೆ: ಡಿಕೆಶಿ ವಿರುದ್ಧ ಕೆಟಿಆರ್ ಟೀಕೆ
ಕರ್ನಾಟಕಕ್ಕೆ ಭೇಟಿ ನೀಡಿ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿನ ಅಭಿವೃದ್ಧಿ ಮತ್ತು ಕಲ್ಯಾಣವನ್ನು ನೋಡುವಂತೆ ಕಾಂಗ್ರೆಸ್ ನಾಯಕ, ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ನೀಡಿದ 'ಕರ್ನಾಟಕಕ್ಕೆ ಬನ್ನಿ' ಹೇಳಿಕೆಯನ್ನು ತೆಲಂಗಾಣ ಐಟಿ ಸಚಿವ ಮತ್ತು ಬಿಆರ್ಎಸ್ ಪಕ್ಷದ ಕಾರ್ಯಾಧ್ಯಕ್ಷ ಕೆ ತಾರಕ ರಾಮರಾವ್ ಟೀಕಿಸಿದ್ದಾರೆ.
ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಟಿಆರ್, ಕಾಂಗ್ರೆಸ್ ಈಗಾಗಲೇ ಕರ್ನಾಟಕದ ಜನರನ್ನು ಸಂಪೂರ್ಣ ಕತ್ತಲೆಗೆ ತಳ್ಳಿದೆ ಎಂದು ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಎಷ್ಟು ಅಸಮರ್ಥವಾಗಿದೆ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಐದು ಗ್ಯಾರಂಟಿ ಹೆಸರಿನಲ್ಲಿ ಪಕ್ಷವು ಈಗಾಗಲೇ ರಾಜ್ಯವನ್ನು ಲೂಟಿ ಮಾಡುತ್ತಿದೆ. ಕರ್ನಾಟಕವು ಹಲವು ಸಮಸ್ಯೆಗಳಿಂದ ಹೋರಾಡುತ್ತಿರುವಾಗ ನೀವು ತೆಲಂಗಾಣಕ್ಕೆ ಮತ ಕೇಳಲು ಹೇಗೆ ಬಂದಿದ್ದೀರಿ? ಎಂದು ಡಿಕೆ ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ತಮ್ಮ ಸರ್ಕಾರದ ವೈಫಲ್ಯವನ್ನು ವ್ಯಕ್ತಪಡಿಸಲು ಕರ್ನಾಟಕದ ರೈತರು ತೆಲಂಗಾಣಕ್ಕೆ ಬಂದಿದ್ದಾರೆ ಎಂದು ಕೆಟಿಆರ್ ಹೇಳಿದರು. "ನೀವು ನಮ್ಮ ತೆಲಂಗಾಣ ಜನರನ್ನು ಕಲ್ಯಾಣ ನೋಡಲು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದೀರಿ. ಆದರೆ ನಿಮ್ಮ ರಾಜ್ಯದಲ್ಲಿ ನಿಮ್ಮ ದೌರ್ಜನ್ಯವನ್ನು ವಿವರಿಸಲು ಕರ್ನಾಟಕದ ರೈತರು ಈಗಾಗಲೇ ತೆಲಂಗಾಣದಲ್ಲಿದ್ದಾರೆ ಎಂಬುದು ಸತ್ಯ. ಒಂದು ವರ್ಷದೊಳಗೆ ನಿಮ್ಮ ರಾಜ್ಯವನ್ನು ದಿವಾಳಿಯಾಗುವಂತೆ ಮಾಡಿದ್ದೀರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತೆಲಂಗಾಣದ ಸ್ಥಿತಿಯೂ ಇದೇ ಆಗಿರುತ್ತದೆ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ
ಏತನ್ಮಧ್ಯೆ, ತೆಲಂಗಾಣದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲಿದೆ ಎಂದು ಡಿಕೆ ಶಿವಕುಮಾರ್ ಶನಿವಾರ ವಿಶ್ವಾಸ ವ್ಯಕ್ತಪಡಿಸಿದರು.
"ನನ್ನ ಮುಂದಿನ ಬಾರಿ ಭೇಟಿ ನೀಡಿದಾಗ ಎಷ್ಟು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ನಿಖರವಾಗಿ ಹೇಳುತ್ತೇನೆ. ನನಗೆ ತಿಳಿದಿದೆ, ಈಗಾಗಲೇ ಸೂಚನೆ ಇದೆ. ಖಂಡಿತವಾಗಿ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುತ್ತದೆ" ಎಂದು ತೆಲಂಗಾಣದ ವಿಕಾರಾಬಾದ್ನಲ್ಲಿ ಚುನಾವಣಾ ರ್ಯಾಲಿಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಹೇಳಿದರು.












Click it and Unblock the Notifications