ಬಳ್ಳಾರಿಯಲ್ಲಿ ಬಿಜೆಪಿಗೆ ಆಘಾತ: ಕೈ ಹಿಡಿಯಲು ಮುಂದಾದ ಕೂಡ್ಲಿಗಿ ಶಾಸಕ ನಾಗೇಂದ್ರ
ಬಳ್ಳಾರಿ, ಜನವರಿ 01: 2013ರ ವಿಧಾನಸಭೆ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ ಬಿ.ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲು ಮುಂದಾಗಿರುವ ಸುದ್ದಿ ಬಂದಿದೆ. ಸಂಸದ ಶ್ರೀರಾಮುಲು ಅವರ ಅಪ್ತ ನಾಗೇಂದ್ರ ಅವರು ಇಂದಲ್ಲ ನಾಳೆ ಬಿಜೆಪಿಗೆ ಮತ್ತೆ ಸೇರ್ಪಡೆಯಾಗುತ್ತಾರೆ ಎಂಬ ಆಸೆ ಕಮರಿದೆ.
ಬಳ್ಳಾರಿಯಲ್ಲಿ ಕಮಲ ಮುದುಡುವಂತೆ ಮಾಡಲು ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ಪಡೆ ಸರ್ವಸನ್ನದ್ಧವಾಗಿ ಹೋರಾಟಕ್ಕೆ ಇಳಿದಿದೆ. ಇದರ ಮೊದಲ ನಡೆ ಈಗ ಬಹಿರಂಗವಾಗಿದ್ದು, ಬಿ ನಾಗೇಂದ್ರ ಅವರನ್ನು ಕಾಂಗ್ರೆಸ್ ನತ್ತ ಸೆಳೆದಿರುವ ಮಾಹಿತಿ ಸಿಕ್ಕಿದೆ.
ಜನವರಿ 29 ರಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ಎಸ್ಟಿ ಘಟಕದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಂದು ರಾಹುಲ್ಗಾಂಧಿ ಆಗಮಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಡಿ.ಕೆ ಶಿವಕುಮಾರ್, ಪಕ್ಷದ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಉಪಸ್ಥಿತರಿರುವ ಸಾಧ್ಯತೆಯಿದೆ.

ಕೂಡ್ಲಿಗಿ, ಬಳ್ಳಾರಿ ಗ್ರಾಮೀಣ ಮತ್ತು ಕಂಪ್ಲಿ ಕ್ಷೇತ್ರದ ಜವಾಬ್ದಾರಿ ನಾಗೇಂದ್ರ ಅವರಿಗೆ ನೀಡುವ ಮೂಲಕ ಬಿ. ಶ್ರೀರಾಮುಲು ಅವರಿಗೆ ಪರ್ಯಾಯ ಶಕ್ತಿಯಾಗಿ ಬೆಳೆಸಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸಿದೆ.
2013 ರ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮುಂದಾಗದೆ ಪಕ್ಷೇತರನಾಗಿ ಕಣಕ್ಕಿಳಿದ ನಾಗೇಂದ್ರ 71,477 ಮತಗಳನ್ನು ಪಡೆದು ಜಯಗಳಿಸಿದ್ದರು.
ಅಕ್ರಮ ಗಣಿಗಾರಿಕೆ ಮತ್ತು ಬೇಲೆಕೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ಅವರನ್ನು 3ನೇ ಬಾರಿಗೆ ಬಂಧಿಸಲಾಗಿತ್ತು. ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಈ ಬಾರಿಯೂ ಟಿಕೆಟ್ ಸಿಗದೆ ನಿರಾಶೆ ಅನುಭವಿಸುವುದರ ಬದಲು ಕಾಂಗ್ರೆಸ್ ಸೇರುವುದು ಉತ್ತಮ ಎಂದು ನಾಗೇಂದ್ರ ಅವರು ನಿರ್ಧರಿಸಿದ್ದಂತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications