ಬಿ.ನಾಗೇಂದ್ರ ಕಾಂಗ್ರೆಸ್ಗೆ, ಶ್ರೀರಾಮುಲು ಹೇಳಿದ್ದೇನು?
ಬಳ್ಳಾರಿ, ಜನವರಿ 02 : 'ಕೂಡ್ಲಗಿ ಶಾಸಕ ಬಿ.ನಾಗೇಂದ್ರ ನನ್ನ ಸಹೋದರ ಇದ್ದಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಿಲ್ಲ ಎಂಬ ವಿಶ್ವಾಸವಿದೆ. ಅವರ ಮನವೊಲಿಸುವ ಪ್ರಯತ್ನ ಮಾಡುವೆ' ಎಂದು ಬಳ್ಳಾರಿ ಸಂಸದ ಬಿ.ಶ್ರೀರಾಮುಲು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಸೋಮವಾರ ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 'ಬಿ.ನಾಗೇಂದ್ರ ಅವರು ನಮ್ಮೊಂದಿಗೆ ಇದ್ದರೂ ಅವರು ಆಯ್ಕೆಯಾಗಿರುವುದು ಪಕ್ಷೇತರ ಶಾಸಕರಾಗಿ' ಎಂದರು.
'ನಾಗೇಂದ್ರ ಬೇರೆ ಪಕ್ಷ ಸೇರುತ್ತಾರೆ ಎಂಬ ಮಾಹಿತಿ ಸಿಕ್ಕಿದೆ. ಆದರೆ, ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ರಾಜಕಾರಣದಲ್ಲಿ ಈ ರೀತಿ ಆಗುತ್ತಿರುತ್ತದೆ. ಅವರ ಜೊತೆ ಮಾತನಾಡಿ ಮನವೊಲಿಸುವ ಕೆಲಸವನ್ನು ಮಾಡುವೆ' ಎಂದು ಶ್ರೀರಾಮುಲು ಹೇಳಿದರು.

'ಅವರು ಕಾಂಗ್ರೆಸ್ ಸೇರುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಹೋದರೆ ರಾಜಕೀಯದಲ್ಲಿ ಇದೆಲ್ಲ ಅನಿವಾರ್ಯ ಎಂದು, ಧೈರ್ಯದಿಂದ ಚುನಾವಣೆ ಎದುರಿಸುತ್ತೇವೆ' ಎಂದು ತಿಳಿಸಿದರು.
'ಇಂದಿನ ರಾಜಕಾರಣ ವ್ಯಕ್ತಿ ಕೇಂದ್ರಿತ ವಲ್ಲ, ಪಕ್ಷ ಕೇಂದ್ರಿತವಾಗಿದೆ. ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 9 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಜನವರಿ 4ರಂದು ಕೂಡ್ಲಗಿಯಲ್ಲಿ ಪಕ್ಷದ ಪರಿವರ್ತನಾ ಯಾತ್ರೆ ನಡೆಯಲಿದೆ. ಅಂದು ಅಲ್ಲಿನ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಣೆ ಮಾಡುತ್ತೇವೆ' ಎಂದು ಶ್ರೀರಾಮುಲು ಹೇಳಿದರು.
2013ರ ಚುನಾವಣೆಯಲ್ಲಿ ಕೂಡ್ಲಗಿ ಕ್ಷೇತ್ರದಲ್ಲಿ ಬಿ.ನಾಗೇಂದ್ರ ಅವರು 71,477 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಎಸ್.ವೆಂಕಟೇಶ 46,674 ಮತಗಳನ್ನು ಪಡೆದಿದ್ದರು. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಮಪ್ಪ ಕೇವಲ 2,632 ಮತ ಪಡೆದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications