Get Updates
Get notified of breaking news, exclusive insights, and must-see stories!

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಒಳಗೆ ಗಜಲಕ್ಷ್ಮಿಯ ನೀರಾಟ: ಯಶಸ್ವಿಯ ತುಂಟಾಟ ಕಣ್ತುಂಬಿಕೊಂಡ ಭಕ್ತರು

ಮಂಗಳೂರು, ಡಿಸೆಂಬರ್ 25: ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ‌. ಜಾತ್ರೋತ್ಸವದ ಕೊನೆ ದಿನದ ಧಾರ್ಮಿಕ ಆಚರಣೆಯಾಗಿ ಸುಬ್ರಹ್ಮಣ್ಯ ಸ್ವಾಮಿಗೆ ಬಂಡಿ ಉತ್ಸವ ನೆರವೇರಿದೆ. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುವ ಈ ಬಂಡಿ ಉತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಭಾಗವಹಿಸುವ ಮೂಲಕ ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದರು.

ಬಂಡಿ ಉತ್ಸವದ ದಿನದಂದು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ವೈದಿಕ ವಿಧಿ-ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸುವ ಮೂಲಕ ಈ ಬಾರಿಯ ಜಾತ್ರೋತ್ಸವಕ್ಕೆ ಅಧಿಕೃತ ತೆರೆ ಎಳೆಯಲಾಗಿದೆ.

Kukke Shree Subrahmanya Temple Jatra Mahotsav Ends Today

ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದ ಸುತ್ತಲೂ ನೀರನ್ನು ಮದ್ಯಾಹ್ನದ ನಂತರ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆಯುತ್ತದೆ. ನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯುತ್ತದೆ. ವಿವಿಧ ಸಂಗೀತ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆದ ಬಳಿಕ ಕ್ಷೇತ್ರದಲ್ಲಿ ನಡೆಯುವ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಗುತ್ತದೆ.

ಬಂಡಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಹೊರಾಂಗಣ ತುಂಬಾ ತುಂಬಿದ ನೀರಿನಲ್ಲಿ ಬಂಡು ಉತ್ಸವ ನಡೆದ ಬಳಿಕ ಇನ್ನೊಂದು ಆಕರ್ಷಣೆ ಭಕ್ತರನ್ನು ಸಂತಸ ಕಡಲಲ್ಲಿ ತೇಲಿಸುತ್ತದೆ. ಅದೇನೆಂದರೆ ಹೊರಾಂಗಣದಲ್ಲಿರುವ ನೀರಿನಲ್ಲಿ ದೇವಸ್ಥಾನದ ಆನೆ ಯಶಸ್ವಿಯ ನೀರಾಟ ಮತ್ತು ತುಂಟಾಟ. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ಮಕ್ಕಳೊಂದಿಗೆ ನೀರಾಟವಾಡಿ ಒಂದು ಕಡೆ ಆನೆ ಸಂಭ್ರಮಿಸಿದರೆ, ಇನ್ನೊಂದೆಡೆ ಪುಟಾಣಿಗಳು ಆನೆಯ ತುಂಟಾಟಕ್ಕೆ ಸಂಭ್ರಮಿಸುತ್ತಾರೆ. ಅಲ್ಲದೆ ಆನೆಯೊಂದಿಗೆ ನೀರಿನಲ್ಲಿ ಪುಟಾಣಿ ಮಕ್ಕಳೂ ಒದ್ದೆಯಾಗಿ ಆಟವಾಡುವುದು ಬಂಡಿ ಉತ್ಸವದ ಸಂಭ್ರಮದ ಆಕರ್ಷಣೆಯೂ ಆಗಿದೆ.

Kukke Shree Subrahmanya Temple Jatra Mahotsav Ends Today

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಂದು ಕೋಟಿ ರೂ ದೇಣಿಗೆ ನೀಡಿದ ತೆಲಂಗಾಣದ ಸಚಿವ

ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯಕ್ಕೆ ತೆಲಂಗಾಣ ಸರ್ಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನಲ್ಲಿ ಪ್ರಾರ್ಥಿಸಿ ಇಷ್ಟಾರ್ಥ ಸಿದ್ಧಿಯಾದ ಹಿನ್ನಲೆಯಲ್ಲಿ ಸಚಿವರು ಕುಕ್ಕೆ ಸುಬ್ರಹ್ಮಣ್ಯದ ಅನ್ನದಾನ ಸೇವೆಯಾರ್ಥವಾಗಿ ಒಂದು ಕೋಟಿ ರೂಪಾಯಿಯನ್ನು ದೇಗುಲದ ವ್ಯವಸ್ಥಾಪನಾ ಸಮಿತಿಗೆ ಹಸ್ತಾಂತರಿಸಿದ್ದಾರೆ.

ಕುಕ್ಕೆಯಲ್ಲಿ ನಡೆಯ ಚಂಪಾಷಷ್ಠಿ ಸಂಭ್ರಮದಲ್ಲಿ ಕುಟುಂಬಪೂರ್ತಿ ಭಾಗವಹಿಸಿದ ಸಚಿವ ಶ್ರೀನಿವಾಸ ರೆಡ್ಡಿ ಕ್ಷೇತ್ರದ ಇತರ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದಾರೆ. ಈ ಹಿಂದೆಯೂ ಕ್ಷೇತ್ರಕ್ಕೆ ಬಂದಿದ್ದ ಅವರು ಪ್ರಾರ್ಥನೆಯನ್ನು ಮಾಡಿಕೊಂಡಿದ್ದರು. ಪ್ರಾರ್ಥನೆಯ ಫಲ ಸಿದ್ಧಿಯಾಗಿದ್ದು, ಅಂದುಕೊಂಡತೇ ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಆಗಮಿಸಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಂ ಸುಳ್ಳಿಯವರಿಗೆ ಒಂದು ಕೋಟಿ ರೂಪಾಯಿ ಚೆಕ್‌ಅನ್ನು ಅನ್ನದಾನ ಸೇವೆಯಾರ್ಥವಾಗಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+