ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಒಳಗೆ ಗಜಲಕ್ಷ್ಮಿಯ ನೀರಾಟ: ಯಶಸ್ವಿಯ ತುಂಟಾಟ ಕಣ್ತುಂಬಿಕೊಂಡ ಭಕ್ತರು
ಮಂಗಳೂರು, ಡಿಸೆಂಬರ್ 25: ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ. ಜಾತ್ರೋತ್ಸವದ ಕೊನೆ ದಿನದ ಧಾರ್ಮಿಕ ಆಚರಣೆಯಾಗಿ ಸುಬ್ರಹ್ಮಣ್ಯ ಸ್ವಾಮಿಗೆ ಬಂಡಿ ಉತ್ಸವ ನೆರವೇರಿದೆ. ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುವ ಈ ಬಂಡಿ ಉತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಭಾಗವಹಿಸುವ ಮೂಲಕ ಈ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದರು.
ಬಂಡಿ ಉತ್ಸವದ ದಿನದಂದು ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯ ವೈದಿಕ ವಿಧಿ-ವಿಧಾನ ನೆರವೇರಿಸಿದರು. ಬಳಿಕ ಸುಮುಹೂರ್ತದಲ್ಲಿ ಕೊಪ್ಪರಿಗೆಯನ್ನು ಪೂರ್ವ ಶಿಷ್ಠ ಸಂಪ್ರದಾಯದ ಪ್ರಕಾರ ಇಳಿಸುವ ಮೂಲಕ ಈ ಬಾರಿಯ ಜಾತ್ರೋತ್ಸವಕ್ಕೆ ಅಧಿಕೃತ ತೆರೆ ಎಳೆಯಲಾಗಿದೆ.

ಉತ್ಸವದ ನಿಮಿತ್ತ ಶ್ರೀ ದೇವಳದ ಹೊರಾಂಗಣದ ಸುತ್ತಲೂ ನೀರನ್ನು ಮದ್ಯಾಹ್ನದ ನಂತರ ತುಂಬಿಸಲಾಗಿತ್ತು. ರಾತ್ರಿ ಮಹಾಪೂಜೆಯ ಬಳಿಕ ನೀರಿನಲ್ಲಿ ಶ್ರೀ ದೇವರ ದೀಪಾರಾಧನೆಯುಕ್ತ ಪಾಲಕಿ ಉತ್ಸವ ನಡೆಯುತ್ತದೆ. ನಂತರ ನೀರಿನಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ರಥೋತ್ಸವ ನಡೆಯುತ್ತದೆ. ವಿವಿಧ ಸಂಗೀತ ಸುತ್ತುಗಳ ಪಾಲಕಿ ಉತ್ಸವ ನೀರಿನಲ್ಲಿ ನಡೆದ ಬಳಿಕ ಕ್ಷೇತ್ರದಲ್ಲಿ ನಡೆಯುವ ಚಂಪಾಷಷ್ಠಿ ಉತ್ಸವಗಳು ಸಮಾಪ್ತಿಯಾಗುತ್ತದೆ.
ಬಂಡಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಹೊರಾಂಗಣ ತುಂಬಾ ತುಂಬಿದ ನೀರಿನಲ್ಲಿ ಬಂಡು ಉತ್ಸವ ನಡೆದ ಬಳಿಕ ಇನ್ನೊಂದು ಆಕರ್ಷಣೆ ಭಕ್ತರನ್ನು ಸಂತಸ ಕಡಲಲ್ಲಿ ತೇಲಿಸುತ್ತದೆ. ಅದೇನೆಂದರೆ ಹೊರಾಂಗಣದಲ್ಲಿರುವ ನೀರಿನಲ್ಲಿ ದೇವಸ್ಥಾನದ ಆನೆ ಯಶಸ್ವಿಯ ನೀರಾಟ ಮತ್ತು ತುಂಟಾಟ. ನೀರಿನಲ್ಲಿ ಹೊರಳಾಡಿ ಸಂತೋಷ ಪಡುವುದರೊಂದಿಗೆ, ಮಕ್ಕಳೊಂದಿಗೆ ನೀರಾಟವಾಡಿ ಒಂದು ಕಡೆ ಆನೆ ಸಂಭ್ರಮಿಸಿದರೆ, ಇನ್ನೊಂದೆಡೆ ಪುಟಾಣಿಗಳು ಆನೆಯ ತುಂಟಾಟಕ್ಕೆ ಸಂಭ್ರಮಿಸುತ್ತಾರೆ. ಅಲ್ಲದೆ ಆನೆಯೊಂದಿಗೆ ನೀರಿನಲ್ಲಿ ಪುಟಾಣಿ ಮಕ್ಕಳೂ ಒದ್ದೆಯಾಗಿ ಆಟವಾಡುವುದು ಬಂಡಿ ಉತ್ಸವದ ಸಂಭ್ರಮದ ಆಕರ್ಷಣೆಯೂ ಆಗಿದೆ.

ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಂದು ಕೋಟಿ ರೂ ದೇಣಿಗೆ ನೀಡಿದ ತೆಲಂಗಾಣದ ಸಚಿವ
ದಕ್ಷಿಣ ಭಾರತದ ಹೆಸರಾಂತ ನಾಗ ಕ್ಷೇತ್ರ ಕುಕ್ಕೆ ಶ್ರೀಸುಬ್ರಹ್ಮಣ್ಯಕ್ಕೆ ತೆಲಂಗಾಣ ಸರ್ಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯನಲ್ಲಿ ಪ್ರಾರ್ಥಿಸಿ ಇಷ್ಟಾರ್ಥ ಸಿದ್ಧಿಯಾದ ಹಿನ್ನಲೆಯಲ್ಲಿ ಸಚಿವರು ಕುಕ್ಕೆ ಸುಬ್ರಹ್ಮಣ್ಯದ ಅನ್ನದಾನ ಸೇವೆಯಾರ್ಥವಾಗಿ ಒಂದು ಕೋಟಿ ರೂಪಾಯಿಯನ್ನು ದೇಗುಲದ ವ್ಯವಸ್ಥಾಪನಾ ಸಮಿತಿಗೆ ಹಸ್ತಾಂತರಿಸಿದ್ದಾರೆ.
ಕುಕ್ಕೆಯಲ್ಲಿ ನಡೆಯ ಚಂಪಾಷಷ್ಠಿ ಸಂಭ್ರಮದಲ್ಲಿ ಕುಟುಂಬಪೂರ್ತಿ ಭಾಗವಹಿಸಿದ ಸಚಿವ ಶ್ರೀನಿವಾಸ ರೆಡ್ಡಿ ಕ್ಷೇತ್ರದ ಇತರ ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದಾರೆ. ಈ ಹಿಂದೆಯೂ ಕ್ಷೇತ್ರಕ್ಕೆ ಬಂದಿದ್ದ ಅವರು ಪ್ರಾರ್ಥನೆಯನ್ನು ಮಾಡಿಕೊಂಡಿದ್ದರು. ಪ್ರಾರ್ಥನೆಯ ಫಲ ಸಿದ್ಧಿಯಾಗಿದ್ದು, ಅಂದುಕೊಂಡತೇ ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಆಗಮಿಸಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಂ ಸುಳ್ಳಿಯವರಿಗೆ ಒಂದು ಕೋಟಿ ರೂಪಾಯಿ ಚೆಕ್ಅನ್ನು ಅನ್ನದಾನ ಸೇವೆಯಾರ್ಥವಾಗಿ ನೀಡಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications