600-700 ಕೋಟಿ ರು. ಅವ್ಯವಹಾರ ನಡೆಸಿದ ಸಿದ್ದರಾಮಯ್ಯ
ಬೆಂಗಳೂರು, ಜ. 19: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 500ರಿಂದ 600 ಎಕರೆ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟು 600-700 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ಶಾಸಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸೋಮವಾರ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ಈ ಕುರಿತು ನನ್ನ ಹತ್ತಿರ ದಾಖಲೆಗಳಿವೆ. ಅಧಿಕಾರಿಗಳಿಗೆ ಬೆದರಿಕೆ ಹಾಕಿ ಈ ದಾಖಲೆಗಳನ್ನು ಪಡೆದಿದ್ದೇನೆಂದು ತಿಳಿಸಿದ್ದಾರೆ. [ಏನಿದು ಅರ್ಕಾವತಿ ಬಡಾವಣೆ ವಿವಾದ?]
ರಿ ಡು ಹೆಸರಿನಲ್ಲಿ ಅರ್ಕಾವತಿ ಬಡಾವಣೆ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟು 500ರಿಂದ 600 ಎಕರೆಗಿಂತಲೂ ಅಧಿಕ ಡಿ ನೋಟಿಫಿಕೇಷನ್ ಮಾಡಿದ್ದಾರೆ. ಈ ಮೂಲಕ 600ರಿಂದ 700 ಕೋಟಿ ರು.ಗಿಂತ ಹೆಚ್ಚು ಮೊತ್ತದ ಅವ್ಯವಹಾರ ನಡೆಸಿದ್ದಾರೆಂದು ಕುಮಾರಸ್ವಾಮಿ ನೇರ ಆರೋಪ ಮಾಡಿದ್ದಾರೆ. [ಅರ್ಕಾವತಿ ಬಡಾವಣೆ ಫೈಟ್, ಯಾರೇನು ಹೇಳಿದರು?]

ಈಗಾಗಲೇ ಪ್ರತಿಪಕ್ಷ ಬಿಜೆಪಿ ಅರ್ಕಾವತಿ ಡಿ ನೋಟಿಫಿಕೇಶನ್ ಹಗರಣದ ತನಿಖೆಗೆ ರಾಜ್ಯಪಾಲರಿಂದಲೇ ಅನುಮತಿ ಪಡೆಯಲು ಮುಂದಾಗಿದೆ. ಇದೇ ಸಂದರ್ಭದಲ್ಲಿ ಕುಮಾರಸ್ವಾಮಿ ಕೂಡ ಆರೋಪ ಮಾಡಿದ್ದಾರೆ. ಇದರಿಂದ ಬಿಜೆಪಿಗೆ ಬಲ ಬಂದಂತಾಗಿದೆ. [ಸಿದ್ದರಾಮಯ್ಯ ವಿರುದ್ಧ ದೂರು ನೀಡಲು ಬಿಜೆಪಿ ಸಿದ್ಧತೆ]
ಡಿನೋಟಿಫಿಕೇಶನ್ ಮಾಡಿಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯ, ರಿ-ಡು ಹೆಸರಲ್ಲಿ 500ರಿಂದ 600 ಎಕರೆ ಭೂ ಸ್ವಾಧೀನ ಮಾಡಿದ್ದಾರೆ. ಅವರಲ್ಲಿ ನೈತಿಕತೆ ಇದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದರು. [ಡಿನೋಟಿಫಿಕೇಶನ್ ಮಾಡಿದ್ದು 707 ಎಕರೆ]
ಆಯೋಗಕ್ಕೆ ದಾಖಲೆ ನೀಡ್ತೇನೆ : ಡಿ ನೋಟಿಫಿಕೇಷನ್ ಹಗರಣ ಕುರಿತು ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ತನಿಖೆ ನಡೆಸುತ್ತಿದೆ. ಈ ಆಯೋಗಕ್ಕೆ ನಾನೇ ದಾಖಲೆ ಸಲ್ಲಿಸುತ್ತೇನೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ












Click it and Unblock the Notifications