ಕಲ್ಲಪ್ಪ ಹಂಡಿಭಾಗ ಪತ್ನಿ ಬಗ್ಗೆ ಹೇಳಿಕೆ: ಕ್ಷಮೆ ಯಾಚಿಸಿದ ಕುಮಾರಸ್ವಾಮಿ
'ಕೆಟ್ಟ ಮೇಲೆ ಬುದ್ಧಿಬಂತು' ಎಂಬ ಗಾದೆಯಂತೆ ಮಾತಿನ ಭರದಲ್ಲಿ ಕಲ್ಲಪ್ಪ ಹಂಡಿಭಾಗ ಅವರ ಪತ್ನಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಅವರು ಈಗ ಕ್ಷಮಾಪಣೆ ಕೇಳಿದ್ದಾರೆ.
ಕಲ್ಲಪ್ಪ ಹಂಡಿಭಾಗ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದವನು ನಾನು, ನನ್ನ ಮಾತಿನಲ್ಲಿ ಅವರಿಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ, ಆದರೆ ನನ್ನ ಮಾತಿನಿಂದ ಅವರ ಕುಟುಂಬಕ್ಕೆ ಬೇಸರ ಆಗಿದ್ದರೆ ಕ್ಷಮಿಸಿ ಎಂದು ಅವರು ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
'ನಾನು ಸಹಾಯ ಮಾಡದೇ ಇದ್ದಿದ್ದರೆ ಕಲ್ಲಪ್ಪ ಹಂಡಿಭಾಗ ಅವರ ಪತ್ನಿ ಮೈ ಮಾರಿ ಜೀವನ ಸಾಗಿಸಬೇಕಿತ್ತು' ಎಂದು ಕುಮಾರಸ್ವಾಮಿ ಅವರು ಹೇಳಿದ್ದ ಮಾತು ಇದು ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಕುಮಾರಸ್ವಾಮಿ ಅವರು ತಮ್ಮ ಮಾತನ್ನು ವಾಪಾಸ್ ಪಡೆದಿದ್ದು, ಬೇಷರತ್ ಕ್ಷಮೆ ಯಾಚಿಸಿದ್ದಾರೆ.












Click it and Unblock the Notifications