"ಸ್ಥಿರ ಸರ್ಕಾರ ಯಾರಿಂದಲೂ ಸಾಧ್ಯವಿಲ್ಲ": ಹಂಗಾಮಿ ಸಿಎಂ ಘೋಷಣೆ
ಬೆಂಗಳೂರು, ಜುಲೈ 26: "ಯಾರಿಂದಲೂ ಸ್ಥಿರ ಸರ್ಕಾರ ನೀಡಲು ಸಾಧ್ಯವಿಲ್ಲ, ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಡಳಿತವೊಂದೇ ಪರಿಹಾರ" ಎಂದು ಕರ್ನಾಟಕದ ಹಂಗಾಮಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ರೆಬೆಲ್ ಶಾಸಕರ ರಾಜೀನಾಮೆಯಿಂದಾಗಿ 15ನೇ ವಿಧಾನಸಭೆಯಲ್ಲಿ ಕುಮಾರಸ್ವಾಮಿ ವಿಶ್ವಾಸಮತ ಕಳೆದುಕೊಂಡಿದ್ದು, ಮೈತ್ರಿ ಸರ್ಕಾರದ 14 ತಿಂಗಳ ಅವಧಿ ಅಧಿಕಾರ ಅಂತ್ಯಕಂಡಿತ್ತು.
ಇದಾದ ಕೆಲ ದಿನಗಳ ಬಳಿಕ ಮೂವರು ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶಿಸಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರು 4ನೇ ಬಾರಿಗೆ ಸಿಎಂ ಆಗಿ ಜುಲೈ 26ರಂದು ಸಂಜೆ 6 ಗಂಟೆ ನಂತರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ನಡುವೆ ಪ್ರಸಕ್ತ ರಾಜಕೀಯ ಸನ್ನಿವೇಶದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, "ಬಿಜೆಪಿ ಸೃಷ್ಟಿಸಿರುವ ರಾಜಕೀಯ ಗೊಂದಲದಿಂದಾಗಿ 20 ರಿಂದ 25 ಸ್ಥಾನದ ಉಪ ಚುನಾವಣೆ ಎದುರಿಸಬೇಕಾಗಬಹುದು, ಸರ್ಕಾರ ಇದಿಲ್ಲದೆಯೇ ಅಧಿಕಾರಕ್ಕೆ ಬಂದರೂ ಸ್ಥಿರ ಸರ್ಕಾರ ಇರಲಿದೆ ಎಂದು ಹೇಳಲು ಸಾಧ್ಯವಿಲ್ಲ, ಸದ್ಯದ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯೇ ಸೂಕ್ತ, ನಂತರ ಚುನಾವಣೆ ಎದುರಿಸಬಹುದು' ಎಂದು ಕುಮಾರಸ್ವಾಮಿ ಅವರು ಹೇಳಿದರು.
ರಾಮಲಿಂಗಾ ರೆಡ್ಡಿ ಭೇಟಿ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾ ರೆಡ್ಡಿ ಅವರನ್ನು ಹಂಗಾಮಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ ಬಳಿಕ ಕಾಂಗ್ರೆಸ್ ಅತೃಪ್ತ ಶಾಸಕರನ್ನು ವಾಪಸ್ ಕರೆಸಿಕೊಳ್ಳಲಾಗುತ್ತದೆ. ಈ ಮೂಲಕ ಬಿಜೆಪಿಗೆ ಸಂಖ್ಯಾಬಲದಲ್ಲಿ ಸೋಲುಂಟು ಮಾಡಲಾಗುತ್ತದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಇದೆಲ್ಲಾ ಸುಳ್ಳು ಸುದ್ದಿ ಎಂದು ಕುಮಾರಸ್ವಾಮಿ ಅಲ್ಲಗೆಳೆದಿದ್ದಾರೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ?












Click it and Unblock the Notifications