ಮಂಡ್ಯದಿಂದ ನಿಖಿಲ್ ಸ್ಪರ್ಧೆ?, ಮೌನ ಮುರಿದ ಎಚ್.ಡಿ.ಕುಮಾರಸ್ವಾಮಿ
Recommended Video

ಬೆಂಗಳೂರು, ಫೆಬ್ರವರಿ 01 : 'ನಿಖಿಲ್ ಕುಮಾರಸ್ವಾಮಿ ರಾಜಕೀಯಕ್ಕೆ ಬರಬೇಕು ಎನ್ನುವುದಾದರೆ ಖಂಡಿತ ಚುನಾವಣೆಗೆ ನಿಲ್ಲಿಸುತ್ತೇವೆ. ಆದರೆ ಆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತು ಹಲವು ಸುದ್ದಿಗಳು ಹಬ್ಬಿವೆ. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಮೌನ ಮುರಿದರು.
ನಿಖಿಲ್ ಕುಮಾರಸ್ವಾಮಿ ಅವರನ್ನು ಮಂಡ್ಯದಿಂದ ಸ್ಪರ್ಧಿಸುವಂತೆ ಮಾಡಲು 'ಸೀತಾರಾಮ ಕಲ್ಯಾಣ' ಚಿತ್ರದ ಟಿಕೆಟ್ ಅನ್ನು ಉಚಿತ ಟಿಕೆಟ್ ವಿತರಿಸಲಾಗುತ್ತಿದೆ ಎಂಬ ಸುದ್ದಿಯನ್ನು ಕುಮಾರಸ್ವಾಮಿ ತಳ್ಳಿ ಹಾಕಿದರು. 'ಮಂಡ್ಯದಲ್ಲಿ ಉಚಿತ ಟಿಕೆಟ್ ಹಂಚಿದರೆ ರಾಜ್ಯದಲ್ಲಿ ಸಿನಿಮಾ ಹೇಗೆ ಓಡುತ್ತದೆ?' ಎಂದು ಪ್ರಶ್ನಿಸಿದರು.
'ನಾನು ಒಬ್ಬ ಮುಖ್ಯಮಂತ್ರಿಯಾಗಿ ಅಥವ ಅಪ್ಪನಾಗಿ ಈ ಮಾತನ್ನು ಹೇಳುತ್ತಿಲ್ಲ. ನಿಖಿಲ್ ಅಭಿನಯದ ಬಗ್ಗೆ ತುಂಬಾ ಜನ ಮಾತನಾಡುತ್ತಿದ್ದಾರೆ' ಎಂದು ಕುಮಾರಸ್ವಾಮಿ ಹೇಳಿದರು.

ರಾಜಕಾರಣ ಮಾಡುತ್ತಿದ್ದಾರೆ
ಸೀತರಾಮ ಕಲ್ಯಾಣ ಸಿನಿಮಾ ಟಿಕೆಟ್ ಉಚಿತವಾಗಿ ಹಂಚುತ್ತಿದ್ದಾರೆ ಎಂಬ ಸುದ್ದಿ ಬಗ್ಗೆ ಕಿಡಿಕಾರಿದ ಎಚ್.ಡಿ.ಕುಮಾರಸ್ವಾಮಿ, 'ಇಷ್ಟೊಂದು ಚೀಪ್ ಆಗಿ ರಾಜಕಾರಣ ಯಾರು ಮಾಡುತ್ತಿದ್ದಾರೆ ಅಂತ ಗೊತ್ತಿದೆ. ನಂಗೆ ಅಷ್ಟು ಗೊತ್ತಾಗೋದಿಲ್ವಾ. ಕೇವಲ ಮಂಡ್ಯದಲ್ಲಿ ಮಾತ್ರ ಫ್ರೀ ಟಿಕೆಟ್ ಹಂಚಿದ್ರೆ , ರಾಜ್ಯ ದ ಬೇರೆ ಬೇರೆ ಕಡೆ ಸಿನಿಮಾ ಹೇಗೆ ನಡೆಯುತ್ತಿದೆ? ಅಂತ ನೋಡಿಕೊಂಡು ಬನ್ನಿ' ಎಂದರು.

ರಾಜಕೀಯಕ್ಕೆ ಬರಬೇಕು
'ಆತ ಚಿತ್ರ ರಂಗದಲ್ಲಿ ಬೆಳೆಯುತ್ತಿದ್ದಾನೆ. ನಟನೆಯಲ್ಲಿ ಆಸಕ್ತಿ ಹೊಂದಿದ್ದಾನೆ. ಆತನನ್ನು ರಾಜಕೀಯಕ್ಕೆ ಎಳೆಯುವುದಕ್ಕೆ ಒಂದು ವರ್ಗದ ಮಾಧ್ಯಮದವರೇ ಉತ್ತೇಜಿಸುತ್ತಿದ್ದಾರೆ. ರಾಜಕೀಯಕ್ಕೆ ಬರಬೇಕು ಎನ್ನುವುದಾದರೆ ಖಂಡಿತ ಚುನಾವಣೆಗೆ ನಿಲ್ಲಿಸುತ್ತೇವೆ. ಆದರೆ, ಆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ' ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

ನಾವು ಎಲ್ಲೂ ಹೇಳಿಲ್ಲ
'ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಯಾರು ಹೇಳಿಲ್ಲ. ಮಂಡ್ಯದಲ್ಲಿ ದೇವೇಗೌಡರು ಸ್ಪರ್ಧಿಸಲಿ, ಅವರ ಪರ ಕೆಲಸ ಮಾಡುವೆ ಎಂದು ನಿಖಿಲ್ ಹೇಳಿದ್ದಾನೆ. ನಿಖಿಲ್ ಸ್ಪರ್ಧೆ ಮಾಡುತ್ತಾರೆ ಅಂತಾ ಹೇಳಿ ಹೇಳಿ, ನಿಲ್ಲುವಂತೆ ನೀವೇ ಪ್ರೋವೋಕ್ ಮಾಡುತ್ತಿದ್ದೀರಿ. ಮಂಡ್ಯದಲ್ಲಿ ನಿಖಿಲ್ ಅಥವ ನಾನು ಸ್ಪರ್ಧೆ ಮಾಡುತ್ತೀನಿ ಅಂತ ಎಲ್ಲೂ ಹೇಳಿಲ್ಲ' ಎಂದು ಕುಮಾರಸ್ವಾಮಿ ಹೇಳಿದರು.

ಮಂಡ್ಯ ನಮ್ಮ ಭದ್ರಕೋಟೆ
'ಮಂಡ್ಯ ನಮ್ಮ ಪಕ್ಷದ ಭದ್ರಕೋಟೆ. ನಮ್ಮ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ತರುವುದಿಲ್ಲ. ಅಂಬರೀಶ್ ಕುಟುಂಬದವರು ನಮ್ಮಪಕ್ಷಕ್ಜೆ ಸೇರಿದವರಲ್ಲ. ಅವರು ಒಂದು ವೇಳೆ ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ನಾವು ವಿರೋಧಿಸುವುದಿಲ್ಲ. ಅದು ಅವರ ವೈಯಕ್ತಿಕ ನಿರ್ಧಾರ' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications