ಸಿದ್ದರಾಮಯ್ಯಗೆ ಎಚ್ಡಿಕೆ ಟಾಂಗ್, ಶಾಧಿ ಭಾಗ್ಯಕ್ಕೆ ಅನುದಾನ ಕಡಿತ
ಬೆಂಗಳೂರು, ಆಗಸ್ಟ್ 09: ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರ ತೆರೆಮರೆ ಯುದ್ಧ ಮುಂದುವರೆದಿದೆ. ಕುಮಾರಸ್ವಾಮಿ ಆಡಳಿತದಲ್ಲಿ, ಸಿದ್ದರಾಮಯ್ಯ ಅವರ ಯೋಜನೆಗಳು ಒಂದೊಂದಾಗಿ ನೇಪಥ್ಯಕ್ಕೆ ಸರಿಯುತ್ತಿವೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಮುಸ್ಲಿಂ ಸಮುದಾಯಕ್ಕಾಗಿ ನೀಡಿದ್ದ ಶಾದಿ ಭಾಗ್ಯ ಯೋಜನೆಗೆ ಕುಮಾರಸ್ವಾಮಿ ಸರ್ಕಾರ ಅನುದಾನ ಕಡಿತ ಮಾಡಿದೆ. ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ವಿವಾಹಕ್ಕಾಗಿ ಈ ಯೋಜನೆಯನ್ನು ಸಿದ್ದರಾಮಯ್ಯ ಜಾರಿಗೆ ತಂದಿದ್ದರು.
ಸಿದ್ದರಾಮಯ್ಯ ಅವರು ತಮ್ಮ ಅಂತಿಮ ಬಜೆಟ್ನಲ್ಲಿ ಶಾದಿ ಭಾಗ್ಯ ಯೋಜನೆಗೆಂದು 120 ಕೋಟಿ ಹಣ ಮೀಸಲಿಟ್ಟಿದ್ದರು. ಆದರೆ ಕುಮಾರಸ್ವಾಮಿ ಮಂಡಿಸಿದ ಬಜೆಟ್ನಲ್ಲಿ ಕೇವಲ 55 ಕೋಟಿ ಮೀಸಲಿಡಲಾಗಿದೆ. ಇದು ಅತ್ಯಂತ ಕಡಿಮೆ ಮೊತ್ತವಾಗಿದ್ದು ಯೋಜನೆಯ ಫಲಾನುಭವಿಗಳು ಹೆಚ್ಚಿದ್ದಾರೆ.

ಯೋಜನೆಗೆ ಸಾವಿರಾರು ಅರ್ಜಿಗಳು ಬಂದಿವೆ
ಯೋಜನೆಯ ಲಾಭಕ್ಕೆಂದು ಈಗಾಗಲೇ ಸಾವಿರಾರು ಅರ್ಜಿಗಳು ಬಂದಿದ್ದು, ಅವುಗಳಲ್ಲಿಯೇ 23,000ಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗದೇ ಬಾಕಿ ಇವೆ. ಇನ್ನೂ 10000 ಹೊಸ ಅರ್ಜಿ ಸಲ್ಲಿಕೆಯಾಗುವ ಅಂದಾಜಿದೆ ಆದರೆ ಈ ಹಂತದಲ್ಲಿ ಅನುದಾನ ಕಡಿತ ಮಾಡಿರುವುದರಿಂದ ಯೋಗ್ಯ ಫಲಾನುಭವಿಗಳಿಗೆ ನಷ್ಟ ಉಂಟಾಗಲಿದೆ.

ಬಜೆಟ್ಗೂ ಮುನ್ನಾ ಮನವಿ ಮಾಡಿದ್ದರು
ಬಜೆಟ್ಗೂ ಮುನ್ನಾ ಅಲ್ಪಸಂಖ್ಯಾತ ಸಮುದಾಯದವರು ಯೋಜನೆಯ ಅನುದಾನವನ್ನು ಕಡಿತ ಮಾಡದಂತೆ ಮನವಿ ಮಾಡಿದ್ದರು, ಆದರೂ ಮುಖ್ಯಮಂತ್ರಿಗಳು ಈ ಯೋಜನೆಗೆ ಅನುದಾನ ಕಡಿತ ಮಾಡಿದ್ದಾರೆ.

ಅನ್ನಭಾಗ್ಯ ಕಡಿತಕ್ಕೆ ಚಿಂತಿಸಲಾಗಿತ್ತು
ಈ ಮುಂಚೆ ಅನ್ನಭಾಗ್ಯ ಯೋಜನೆಯಲ್ಲಿ ವಿತರಿಸಲಾಗುವ ಅಕ್ಕಿಯ ಪ್ರಮಾಣವನ್ನು ಕಡಿಮೆ ಮಾಡುವ ಬಗ್ಗೆ ಕುಮಾರಸ್ವಾಮಿ ಹೇಳಿದ್ದರು. ಆದರೆ ಸಾರ್ವಜನಿಕರಿಂದ ಮತ್ತು ಸ್ವತಃ ಸಿದ್ದರಾಮಯ್ಯ ಅವರಿಂದ ವಿರೋಧ ವ್ಯಕ್ತವಾಗಿದ್ದರಿಂದ ಯೋಚನೆ ಕೈಬಿಟ್ಟಿದ್ದರು.

ಇಂದಿಯಾ ಕ್ಯಾಂಟೀನ್ಗೂ ಅನುದಾನ ಕಡಿತ
ಇಂದಿರಾ ಕ್ಯಾಂಟೀನ್ಗೆ ಸಹ ಅನುದಾನವನ್ನು ಕಡಿತ ಮಾಡಿರುವ ಬಗ್ಗೆಯೂ ಕೇಳಿಬರುತ್ತಿದ್ದು, ಸರ್ಕಾರ ಇನ್ನೂ ಇಂದಿರಾ ಕ್ಯಾಂಟೀನ್ಗಳಿಗೆ ಅನುದಾನ ಬಿಡುಗಡೆಯನ್ನೂ ಮಾಡಿಲ್ಲ. ಇದೆಲ್ಲಾ ಸಿದ್ದರಾಮಯ್ಯ.

ಅಧಿಕಾರಿಗಳ ವರ್ಗಾವಣೆ
ಅಧಿಕಾರಿಗಳ ವರ್ಗಾವಣೆಯಲ್ಲಿಯಂತೂ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಸರಿಯಾಗಿ ಟಾಂಗ್ ನೀಡುತ್ತಿದ್ದಾರೆ. ಇದೇ ವಿಷಯಕ್ಕೆ ಇಬ್ಬರ ನಡುವೆ ಮನಸ್ಥಾಪ ಏರ್ಪಟ್ಟಿದೆ. ಇದೇ ವಿಷಯ ಕುರಿತಂತೆ ಸಿದ್ದರಾಮಯ್ಯ ಅವರು ಹಲವು ಪತ್ರಗಳನ್ನೂ ಕುಮಾರಸ್ವಾಮಿಗೆ ಬರೆದಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications