ಮುಸ್ಲಿಂ ಮತ್ತು ಅಲ್ಪಸಂಖ್ಯಾತರಿಗೆ ಕುಮಾರಣ್ಣ ಭರ್ಜರಿ ಬಳುವಳಿ
Recommended Video

ಬೆಂಗಳೂರು, ಫೆಬ್ರವರಿ 8 : ವಿಶ್ರಾಂತಿ ಕೂಡ ತೆಗೆದುಕೊಳ್ಳದೆ ಸತತ ಮೂರು ಗಂಟೆಗಳ ಕಾಲ ಮ್ಯಾರಾಥಾನ್ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಿಂದುಳಿದ ವರ್ಗಗಳನ್ನು ಸಂತೃಪ್ತಿಪಡಿಸಲು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಾಕಷ್ಟು ಅನುದಾನವನ್ನು ಮೀಸಲಿಟ್ಟಿದ್ದಾರೆ.
ಮಠ ಮಾನ್ಯಗಳಿಗೆಂದೇ 60 ಕೋಟಿ ರುಪಾಯಿ ಅನುದಾನ ನೀಡಿದ್ದು, ಎಲ್ಲ ಸಮುದಾಯದ ಧಾರ್ಮಿಕ ಸಂಸ್ಥೆಗಳಿಗೆ ಅನುದಾನ ನೀಡಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ಸ್ಥಾಪಿಸಿದ ಸಿದ್ದಗಂಗಾ ಮಠಕ್ಕೆ ಕೂಡ ಭರ್ಜರಿ ಅನುದಾನ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಚ್ ಡಿ ಕುಮಾರಸ್ವಾಮಿ ಅವರು 2019-20ನೇ ಸಾಲಿನ ಆಯವ್ಯಯ ಮಂಡಿಸಿದ್ದು ಸುಸ್ಪಷ್ಟವಾಗಿದೆ.
ಜಾತ್ಯತೀತ ಜನತಾದಳದ ನಾಯಕರಾಗಿರುವ ಕುಮಾರಸ್ವಾಮಿಯವರು ಹಿಂದುಳಿದ ವರ್ಗಗಳ ಜೊತೆಗೆ ಸಹಜವಾಗಿ ಮುಸ್ಲಿಂ ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಕ್ಕೂ ಬಜೆಟ್ಟಿನಲ್ಲಿ ಒಂದಿಷ್ಟು ಹಣವನ್ನು ಮೀಸಲಿಟ್ಟಿದ್ದಾರೆ. ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ಸಿಕ್ಕಿದೆಯಾದರೂ ಇತರ ಸಮುದಾಯಗಳಿಗೂ ಕುಮಾರಣ್ಣ ಬಜೆಟ್ಟಿನಲ್ಲಿ ಒಂದಿಷ್ಟು ವಿನಿಯೋಗಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಮುಸ್ಲಿಂರಿಗೆಂದು ನೀಡಿರುವ ಅನುದಾನದ ವಿವರಗಳು ಕೆಳಗಿನಂತಿವೆ.

ಮುಸ್ಲಿಂ ಸಮುದಾಯಕ್ಕೆ ಆಧುನಿಕ ಶಿಕ್ಷಣ
ಮುಸ್ಲಿಂ ಸಮುದಾಯದಲ್ಲಿ ಆಧುನಿಕ ಶಿಕ್ಷಣ ಹಾಗೂ ವೈಜ್ಞಾನಿಕ ಮನೋಭಾವ ಉತ್ತೇಜನಕ್ಕೆ ಮೌಲಾನಾ ಆಜಾದ್ ಟ್ರಸ್ಟ್ ಸ್ಥಾಪನೆಗೆ ಒಂದಾವರ್ತಿಯಾಗಿ 25 ಕೋಟಿ ರುಪಾಯಿ ಅನುದಾನ.

ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆ
ದಾವಣಗೆರೆ, ತುಮಕೂರು, ಗದಗ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೊಸದಾಗಿ 5 ಮೊರಾರ್ಜಿ ದೇಸಾಯಿ ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆ ಪ್ರಾರಂಭಿಸಲು 20 ಕೋಟಿ ರುಪಾಯಿ ಅನುದಾನ.

ಮುಸ್ಲಿಂ ಕಬರಸ್ಥಾನಗಳ ಅಭಿವೃದ್ಧಿ
ರಾಜ್ಯದಲ್ಲಿನ ಮುಸ್ಲಿಂ ಕಬರಸ್ಥಾನಗಳಲ್ಲಿ (ರುದ್ರ ಭೂಮಿಗಳಲ್ಲಿ) ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ. (ಹಿಂದೂ ರುದ್ರಭೂಮಿಗಳ ಅಭಿವೃದ್ಧಿಗೆ 20 ಕೋಟಿ ರುಪಾಯಿ ಅನುದಾನ.

ಅಲ್ಪಸಂಖ್ಯಾತರು ವಾಸಿಸುವ ಪ್ರದೇಶದ ಅಭಿವೃದ್ಧಿ
ರಾಜ್ಯದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಕೈಗೆತ್ತಿಕೊಳ್ಳಲಾಗಿದ್ದ ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲು 400 ಕೋಟಿ ರುಪಾಯಿ ಅನುದಾನ.

ಮೊರಾರ್ಜಿ ದೇಸಾಯಿ ವಸತಿ ಶಾಲೆ
ರಾಜ್ಯದ 25 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಳ. ಮತ್ತು 20 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ದಾಖಲಾತಿ ಸಂಖ್ಯಾಬಲ 60ಕ್ಕೆ ಹೆಚ್ಚಳ.

ಗುರುದ್ವಾರಕ್ಕೆ 10 ಕೋಟಿ ರುಪಾಯಿ
ಶ್ರೀ ಗುರುನಾನಕ್ ದೇವ್ರವರ 550ನೇ ಜನ್ಮ ದಿನೋತ್ಸವ ಅಂಗವಾಗಿ ಬೀದರ್ನ ಐತಿಹಾಸಿಕ ಗುರುನಾನಕ್ ಜೀರಾ ಗುರುದ್ವಾರಕ್ಕೆ 10 ಕೋಟಿ ರುಪಾಯಿ ಹಾಗೂ ಬೆಂಗಳೂರಿನ ಹಲಸೂರು ಗುರುದ್ವಾರಕ್ಕೆ 25 ಕೋಟಿ ರೂ. ಅನುದಾನ.

ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿ
ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ; 200 ಕೋಟಿ ರುಪಾಯಿ ಅನುದಾನ. (ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ ೨೫ ಕೋಟಿ ರುಪಾಯಿ ಅನುದಾನ. ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರುಪಾಯಿ ಅನುದಾನ.)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications