ಕಲ್ಲಪ್ಪ ಹಂಡಿಭಾಗ ಪತ್ನಿ ಬಗ್ಗೆ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ
ಬೆಳಗಾವಿ, ಏಪ್ರಿಲ್ 09: ತಮ್ಮ ರಾಜಕೀಯ ತುತ್ತೂರಿ ಊದಿಕೊಳ್ಳುವ ಭರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ಮೃತ ಪೊಲೀಸ್ ಅಧಿಕಾರಿ ಕಲ್ಲಪ್ಪ ಹಂಡಿಭಾಗ ಅವರ ಮಡದಿಗೆ ಅವಮಾನವಾಗುವಂತೆ ಮಾತನಾಡಿದ್ದಾರೆ.
Recommended Video

ಬೆಳಗಾವಿಯಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ 'ನಾನು ಸಹಾಯ ಮಾಡದೇ ಇದ್ದಿದ್ದರೆ ಕಲ್ಲಪ್ಪ ಹಂಡಿಭಾಗ ಅವರ ಪತ್ನಿ 'ವೇಶ್ಯಾವೃತ್ತಿಗೆ ಇಳಿಯಬೇಕಿತ್ತು' ಎನ್ನುವ ಮೂಲಕ ಮಹಿಳೆಯ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ.
ಸಿದ್ದರಾಮಯ್ಯ ಅಹಿಂದ ದ್ವೇಷಿ ಎಂದು ನಿರೂಪಿಸಲು ಕಲ್ಲಪ್ಪ ಹಂಡಿಭಾಗ ಅವರ ವಿಷಯ ತೆಗೆದ ಕುಮಾರಸ್ವಾಮಿ ಅವರು, ಕಲ್ಲಪ್ಪ ಕೂಡಾ ಸಿದ್ದರಾಮಯ್ಯ ಅವರ ಜಾತಿಯವರೇ ಆದರೆ ಸಿದ್ದರಾಮಯ್ಯ ಸರ್ಕಾರವೇ ಕಲ್ಲಪ್ಪ ಹಂಡಿಭಾಗ ಅವರಿಗೆ ಕಿರುಕುಳ ನೀಡಿತು, ಕಾಂಗ್ರೆಸ್ ಮತ್ತು ಬಿಜೆಪಿ ಸೇರಿ ಅವರ ಮೇಲೆ ಅಪಹರಣದ ಆರೋಪ ಹೊರಿಸಿತು' ಎಂದು ಕಲ್ಲಪ್ಪ ಹಂಡಿಭಾಗ ಅವರ ಬಗ್ಗೆ ಮಾತು ಪ್ರಾರಂಭಿಸಿದರು.

ಕಲ್ಲಪ್ಪ ಹಂಡಿಭಾಗ ಅವರ ಬಗ್ಗೆ ಏಕವಚನದಲ್ಲಿಯೇ ಮಾತನಾಡಿದ ಕುಮಾರಸ್ವಾಮಿ ಅವರು 'ಕಲ್ಲಪ್ಪ ಹಂಡಿಭಾಗ ನೇಣಿಗೆ ಶರಣಾದ ನಂತರ ನಾನು ವಿಧಾನಸಭೆಯಲ್ಲಿ ಆ ಬಗ್ಗೆ ಮಾತನಾಡಿ ಆತನ 20 ವರ್ಷ ವಯಸ್ಸಿನ ಮಡದಿಗೆ ಸಬ್ರಿಜಿಸ್ಟಾರ್ ಕಚೇರಿಯಲ್ಲಿ ಕೆಲಸ ಕೊಡಿಸಿಕೊಟ್ಟೆ, ನಾನು ಸಹಾಯ ಮಾಡದೇ ಇದ್ದಿದ್ದರೆ ಆ ಹೆಣ್ಣು ಮಗಳು ಕುಟುಂಬ ಭಿಕ್ಷೆ ಬೇಡಬೇಕಿತ್ತು ಅಥವಾ ಮೈ ಮಾರಿ ಬದುಕಬೇಕಿತ್ತು' ಎಂದು ಹೀನವಾಗಿ ಕುಮಾರಸ್ವಾಮಿ ಅವರು ಮಾತನಾಡಿದರು.
ಕುಮಾರಸ್ವಾಮಿ ಅವರು ಹೀಗೆ 'ಸೆಲೆಕ್ಟಿವ್ ಸಹಾಯ' ಮಾಡಿದ್ದು ಬಹಳಷ್ಟು, ಅವನ್ನು ಅಷ್ಟೆ ನಾಜೂಕಾಗಿ ತಮ್ಮ ಭಾಷಣಗಳಲ್ಲಿ ಪ್ರಸ್ತಾಪಿಸಿ ಮೈಲೇಜ್ ಗಿಟ್ಟಿಸಿಕೊಳ್ಳುವ ಕಲೆಯೂ ಅವರಿಗೆ ಕರಗತ, ಆದರೆ ಇಂದು ಮಾತಿನ ಭರದಲ್ಲಿ ತಮ್ಮ ರಾಜಕೀಯ ತುತ್ತೂರಿ ಊದಿಕೊಳ್ಳಲು ಹೋಗಿ ಒಬ್ಬ ಮಹಿಳೆಯ ಬಗ್ಗೆ ಕೀಳಾಗಿ ಮಾತನಾಡಿಬಿಟ್ಟಿದ್ದಾರೆ.
ಕುಮಾರಸ್ವಾಮಿ ಅವರು ಕಲ್ಲಪ್ಪ ಹಂಡಿಭಾಗ ಅವರ ಮಡದಿಯ ಬಗ್ಗೆ ಮಾತನಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕುಮಾರಸ್ವಾಮಿ ಅವರ ಬೇಜವಾಬ್ದಾರಿಯುತ ಮಾತಿಗೆ ಆಕ್ರೋಶ ವ್ಯಕ್ತವಾಗಿದೆ. ಕುಮಾರಸ್ವಾಮಿ ಅವರು ಕಲ್ಲಪ್ಪ ಹಂಡಿಭಾಗ ಅವರ ಪತ್ನಿಯ ಕ್ಷಮಾಪಣೆ ಕೇಳಬೇಕು ಎಂದೂ ಒತ್ತಾಯಗಳು ವ್ಯಕ್ತವಾಗುತ್ತಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
Prem: ಸರ್ಸೆ ಸೆರಗ ಹಾಡನ್ನ ಎಲ್ರೂ ತಪ್ಪಾಗಿ ಅರ್ಥ ಮಾಡ್ಕೊಂಡಿದ್ದಾರೆ, ನನ್ನ ಉದ್ದೇಶ ಅದಾಗಿರಲಿಲ್ಲ: ಪ್ರೇಮ್ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಕಡಿವಾಣ ಹಾಕಿ: ಪ್ರೇಮ್ ವಿವಾದದ ಬೆನ್ನಲ್ಲೇ ಫಿಲ್ಮ್ ಚೇಂಬರ್ಗೆ ಮಹಿಳಾ ಆಯೋಗ ಪತ್ರ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications