ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀವ್ ಗಾಂಧಿ ಪುಣ್ಯ ತಿಥಿ: ಕುಮಾರಸ್ವಾಮಿ ಪ್ರಮಾಣ ವಚನ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಮೇ 19: ಸೋಮವಾರ (ಮೇ 21)ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಆಗಿರುವ ಕಾರಣ ಕುಮಾರಸ್ವಾಮಿ ಅವರ ಪ್ರಮಾಣ ವಚನ ಮುಂದೂಡಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮವನ್ನು ಬುಧವಾರಕ್ಕೆ ಮುಂದೂಡಲಾಗಿದೆ, ಸಮಯ ಇನ್ನೂ ನಿರ್ಧರಿಸಿಲ್ಲ ಎಂದರು.

Kumaraswamy oath taking ceremony postponed

ಈಗಾಗಲೇ ಕಂಠೀರವ ಕ್ರೀಡಾಂಗಣವನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆಂದು ಕಾಯ್ದಿರಸಲಾಗಿದೆ. ಕಾರ್ಯಕ್ರಮಕ್ಕೆ ಕರೆಯಬೇಕಿರುವ ಅತಿಥಿಗಳ ಪಟ್ಟಿಯನ್ನೂ ಎರಡೂ ಪಕ್ಷಗಳ ನಾಯಕರು ಅಂತಿಮಗೊಳಿಸಿದ್ದಾರೆ.

ನೂರಕ್ಕೆ ನೂರು ಸತ್ಯವಾಯಿತು ಕೋಡಿಶ್ರೀಗಳ ಚುನಾವಣಾ ಭವಿಷ್ಯನೂರಕ್ಕೆ ನೂರು ಸತ್ಯವಾಯಿತು ಕೋಡಿಶ್ರೀಗಳ ಚುನಾವಣಾ ಭವಿಷ್ಯ

ಅಶೋಕ ಹೋಟೆಲ್‌ನಲ್ಲಿ ಎರಡೂ ಪಕ್ಷದ ಶಾಸಕರು, ಮುಖಂಡರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಅಲ್ಲದೆ ಸಭೆಯಲ್ಲಿ ಶಿಸ್ತು ಸಮಿತಿ ಹಾಗೂ ಸಮನ್ವಯ ಸಮಿತಿಯ ಬಗ್ಗೆಯೂ ನಿರ್ಣಯ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಡಿಕೆಶಿ, ಪರಮೇಶ್ವರ್, ಸಿಂಧ್ಯ, ಗುಲಾಂ ನಬಿ ಆಜಾದ್ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

ಜೆಡಿಎಸ್-ಕಾಂಗ್ರೆಸ್‌ ಮೈತ್ರಿ ಹೆಚ್ಚು ದಿನ ಬಾಳದು: ಅನಂತ್‌ಕುಮಾರ್‌ಜೆಡಿಎಸ್-ಕಾಂಗ್ರೆಸ್‌ ಮೈತ್ರಿ ಹೆಚ್ಚು ದಿನ ಬಾಳದು: ಅನಂತ್‌ಕುಮಾರ್‌

ಸಚಿವ ಸಂಪುಟದ ಬಗ್ಗೆಯೂ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಬುಧವಾರದಂದು ಎಷ್ಟು ಜನ ಸಚಿವ ಸಂಪುಟ ಸೇರಬೇಕು ಹಾಗೂ ಯಾರ್ಯಾರು ಸೇರಬೇಕು ಎಂಬ ಬಗ್ಗೆಯೂ ನಿರ್ಣಯ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಭಾನುವಾರದಂದು ಹೊರಬೀಳಲಿದೆ.

ಸೋಮವಾರದಂದು ಕುಮಾರಸ್ವಾಮಿ ಅವರು ದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

English summary
HD Kumaraswamy oath taking ceremony has been postponed Monday to Wednesday because Monday is ex prime minister Late Rajeev Gandhi's death anniversary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X