ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾ ಅವಧಿ ಮುಂದುವರಿಕೆಗೆ ಎಚ್ಡಿಕೆ ಪತ್ರ
Recommended Video

ಬೆಂಗಳೂರು, ಜೂನ್ 19: ಇದೇ ತಿಂಗಳಾಂತ್ಯಕ್ಕೆ ಸೇವೆಯಿಂದ ನಿವೃತ್ತರಾಗುತ್ತಿರುವ ಕರ್ನಾಟಕ ರಾಜ್ಯ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಅವರ ಸೇವಾ ಅವಧಿಯನ್ನು ಆಡಳಿತ ಕಾರಣಗಳಿಗಾಗಿ ಇನ್ನೂ ಮೂರು ತಿಂಗಳು ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧಾರ ತಳೆದಿದೆ.
ಈ ಕುರಿತು ಕೇಂದ್ರಕ್ಕೆ ಪತ್ರ ಬರೆದಿದ್ದು, ಜುಲೈ ನಿಂದ ಸೆಪ್ಟೆಂಬರ್ ವರೆಗೆ ರತ್ನಪ್ರಭಾ ಅವರನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಮುಂದುವರೆಸಲು ಅನುಮತಿ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.
1981r ಬ್ಯಾಚ್ನ ಐಎಎಸ್ ಅಧಿಕಾರಿ ಕೆ.ರತ್ನಪ್ರಭಾ ಅವರು ರಾಜ್ಯದ ಆಡಳಿತದ ಬಗ್ಗೆ ಆಳವಾದ ಜ್ಞಾನ ಹೊಂದಿದ್ದು, ಮುಂಬರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅವರ ಅವಶ್ಯಕತೆ ಇದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಆಡಳಿತದಲ್ಲಿ ಅಪಾರ ಅನುಭವ ಇರುವ ಕೆ.ರತ್ನಪ್ರಭಾ ಅವರು ಸಿದ್ದರಾಮಯ್ಯ ಅವರ ಆಡಳಿತ ಸಮಯದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಆಯ್ಕೆ ಆಗಿದ್ದರು. ಕಳೆದ ವರ್ಷ ನವೆಂಬರ್ 30ರಂದು ರಾಜ್ಯದ ಮುಖ್ಯಕಾರ್ಯದರ್ಶಿಯಾಗಿ ಅವರು ಅಧಿಕಾರ ಸ್ವೀಕರಿಸಿದ್ದರು.

ಪ್ರಧಾನಿ ಅವರು ಕರೆದಿದ್ದ ಐಎಎಸ್ಗಳ ಸಭೆಯಲ್ಲಿ ಮೋದಿ ಅವರು ರತ್ನಪ್ರಭಾ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದನ್ನು ನೆನೆಯಬಹುದು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications