ಅಮಾಯಕರನ್ನು ಬಜರಂಗದಳ ಬಳಸಿಕೊಳ್ಳುತ್ತಿದೆ, ಇದರ ನಿಷೇಧದಿಂದ ಸಮಸ್ಯೆ ಬಗೆಹರಿಯುತ್ತದೆಯೇ? ಎಚ್‌ಡಿಕೆ ಪ್ರಶ್ನೆ

ಬೆಂಗಳೂರು, ಮೇ 4: ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಕೇಂದ್ರ ಬಿಜೆಪಿ ನಾಯಕರು ಕರ್ನಾಟಕಕ್ಕೆ ಚುನಾವಣೆಗೆ ಮುನ್ನವೇ ಭೇಟಿ ನೀಡುತ್ತಾರೆಯೇ ಹೊರತು ಪ್ರವಾಹ, ಬರ ಮತ್ತು ಇತರ ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅಲ್ಲ ಎಂದು ಜನತಾ ದಳ (ಜಾತ್ಯತೀತ) ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ವಾಗ್ದಾಳಿ ನಡೆಸಿದರು.

ಚುನಾವಣೆ ಸಮೀಪಿಸುತ್ತಿರುವುದರಿಂದ ದೆಹಲಿಯ ಬಿಜೆಪಿ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಕರ್ನಾಟಕ ಸಂಕಷ್ಟದಲ್ಲಿದ್ದಾಗ ಅವರು ಬರಬೇಕಿತ್ತು. ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನು? ಎಂದು ಎಚ್‌ಡಿ ಕುಮಾರಸ್ವಾಮಿ ಕೇಳಿದ್ದಾರೆ.

Kumaraswamy says Innocents are being exploited by Bajrang Dal, will its ban solve the problem?

ನೀರಾವರಿ ಕ್ಷೇತ್ರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕೊಡುಗೆ ಏನು ಎಂದು ಪ್ರಶ್ನಿಸಿದ ಮಾಜಿ ಸಿಎಂ, 'ಕೃಷ್ಣಾ ನ್ಯಾಯಮಂಡಳಿ ತೀರ್ಪು ಹೊರಬಿದ್ದು 10 ವರ್ಷಗಳಾಗಿವೆ. ನೀರಾವರಿಗೆ ಕಾಂಗ್ರೆಸ್ ಮತ್ತು ಬಿಜೆಪಿ ಏನು ಮಾಡಿದೆ? ಜೆಡಿಎಸ್ ರೈತರಿಗೆ ಅನ್ಯಾಯ ಮಾಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ರೈತರಿಗಾಗಿ ಏನು ಮಾಡಿದ್ದಾರೆ ಎಂದು ಅವರು ಹೇಳಬೇಕಲ್ಲವೇ?' ಎಂದು ಎಚ್‌ಡಿಕೆ ಪ್ರಶ್ನಿಸಿದ್ದಾರೆ.

ಅಧಿಕಾರಕ್ಕೆ ಬಂದರೆ ಪಿಎಫ್‌ಐ ಮತ್ತು ಬಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯ ವಿವಾದದ ಕುರಿತು ಜೆಡಿಎಸ್ ನಾಯಕ, 'ನಿಷೇಧ ಮಾಡುವುದರಿಂದ ಸಮಸ್ಯೆ ಪರಿಹಾರವಾಗುತ್ತದೆಯೇ? ಎರಡೂ ಪಕ್ಷಗಳು ಈ ಬಗ್ಗೆ ಯೋಚಿಸಬೇಕು. ಅಮಾಯಕರನ್ನು ಬಜರಂಗದಳ ಬಳಸಿಕೊಳ್ಳುತ್ತಿದೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Kumaraswamy says Innocents are being exploited by Bajrang Dal, will its ban solve the problem?

ಅವರ ಮನಸ್ಸು ಭ್ರಷ್ಟಗೊಂಡು ನಾಶವಾಗುತ್ತಿದೆ. ಅಮಾಯಕರಿಗೆ ತೊಂದರೆ ಕೊಡುವವರನ್ನು ಮೊದಲು ಹತ್ತಿಕ್ಕಬೇಕು. ಐದು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಅವರನ್ನು ಏಕೆ ನಿಷೇಧಿಸಲಿಲ್ಲ? ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ನಮಗೆ ಸಿದ್ಧಾಂತವಿಲ್ಲ ಎಂದು ಪ್ರಧಾನಿ ಮೋದಿ ಟೀಕಿಸುತ್ತಿದ್ದಾರೆ. ಆದರೆ ನಾವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ, ನಮ್ಮ ಸಿದ್ಧಾಂತವು ಇದ್ದಕ್ಕಿದ್ದಂತೆ ಅವರ ಅನುಮೋದನೆಯನ್ನು ಗಳಿಸುತ್ತದೆಯೇ? ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಮುಂಬರುವ ವಿಧಾನಸಭಾ ಚುನಾವಣೆಗೆ 148 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ರಾಜ್ಯ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸುವ ಗುರಿಯನ್ನು ಪಕ್ಷ ಹೊಂದಿದೆ.

ಜೆಡಿಎಸ್ ನಾಯಕರು ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸದಲ್ಲಿದ್ದರೂ, ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಈಗಾಗಲೇ ಜೆಡಿಎಸ್‌ನೊಂದಿಗೆ ದೂರ ಉಳಿದಿವೆ. ಅಧಿಕಾರ ಗದ್ದುಗೆ ಏರುವ ಸಂದರ್ಭದಲ್ಲಿ ಯಾವುದೇ ಮೈತ್ರಿ ಬಯಸುವುದಿಲ್ಲ ಎಂದು ಹೇಳಿಕೊಂಡಿವೆ.

Kumaraswamy says Innocents are being exploited by Bajrang Dal, will its ban solve the problem?

ಈ ಹಿಂದೆ ಹೆಚ್.ಡಿ.ಕುಮಾರಸ್ವಾಮಿ ಅವರು ಒಂದು ಬಾರಿ ಬಿಜೆಪಿ ಹಾಗೂ ಎರಡು ಬಾರಿ ಕಾಂಗ್ರೆಸ್ ಪಕ್ಷದೊಂದಿಗೆ ಕೈ ಜೋಡಿಸಿ ಎರಡು ಬಾರಿ ಸಿಎಂ ಆಗಿದ್ದರು.

ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಈ ಬಾರಿ ರಾಜ್ಯ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ತಂದೆ ಕುಮಾರಸ್ವಾಮಿ ಗೆದ್ದಿದ್ದ ರಾಮನಗರ ಕ್ಷೇತ್ರದಿಂದ ಅವರು ಸ್ಪರ್ಧಿಸಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಚಿತ್ರದುರ್ಗದಿಂದ ಕಾಂಗ್ರೆಸ್ ಪಕ್ಷದ ಮಾಜಿ ಎಂಎಲ್‌ಸಿ ರಘು ಆಚಾರ್ ಅವರನ್ನು ಜೆಡಿಎಸ್‌ ಕಣಕ್ಕಿಳಿಸಿದೆ. ಮಾಜಿ ಶಾಸಕ ಡಾ ಭಾರತಿ ಶಂಕರ್ ವರುಣಾದಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ನಿಂದ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದ ಡಾ.ದೇವರಾಜ್‌ ಪಾಟೀಲ ಬಾಗಲಕೋಟೆ ಕ್ಷೇತ್ರದಿಂದ ಟಿಕೆಟ್‌ ಪಡೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+