ಪ್ರಾಣಿಗಳ ಪರ ಎಚ್ಡಿಕೆ ನಿಲವು, ಬಂಡಿಪುರ ಎಲಿವೇಟೆಡ್ ರಸ್ತೆಗೆ 'No Way'
ಬೆಂಗಳೂರು, ಆಗಸ್ಟ್ 04: ಕೇಂದ್ರದ ಪ್ರಸ್ತಾವಿತ ಬಂಡಿಪುರ ಎಲಿವೇಟೆಡ್ ರಸ್ತೆ ನಿರ್ಮಾಣ ಸಾಧ್ಯವೇ ಇಲ್ಲ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಆ ಮೂಲಕ ಪ್ರಾಣಿಪ್ರೇಮಿಗಳಿಗೆ ದೊಡ್ಡ ಸಮಾಧಾನ ನೀಡಿದ್ದಾರೆ.
ಕೇಂದ್ರ ಸರ್ಕಾರವು ಬಂಡಿಪುರದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂದು ಮನವಿ ಮಾಡಿತ್ತು. ಅಲ್ಲದೆ ಬಂಡಿಪುರದಲ್ಲಿ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ಒಪ್ಪಿಗೆಯನ್ನು ಕೇಳಿತ್ತು.
ಕೇಂದ್ರದ ಪ್ರಸ್ತಾವಕ್ಕೆ ವನ್ಯಜೀವಿ ಪರರು, ಅರಣ್ಯಾಧಿಕಾರಿಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು. ಕಾಡಿಗೆ ಈಗಾಗಲೇ ಮಾನವ ಹಸ್ತಕ್ಷೇಪ ಹೆಚ್ಚಾಗಿದೆ. ರಸ್ತೆ ನಿರ್ಮಾಣವಾದರೆ ವನ್ಯಜೀವಿಗಳ ಬದುಕು ಹಳಿ ತಪ್ಪುತ್ತದೆ, ರಾತ್ರಿ ವಾಹನ ಸಂಚಾರ ಪ್ರಾಣಿಗಳ ಜೀವಕ್ಕೆ ಕುತ್ತು ತರುತ್ತದೆ ಎಂದುದೊಡ್ಡ ಮಟ್ಟದಲ್ಲಿ ಕೂಗು ಎದ್ದಿತ್ತು.

ರಾತ್ರಿ ಸಂಚಾರ ನಿರ್ಭಂದ ತೆರವು ಸಾಧ್ಯವಿಲ್ಲ
ಈ ಬಗ್ಗೆ ನಿನ್ನೆ ತಮ್ಮ ನಿಲಲು ತಿಳಿಸಿದ ಕುಮಾರಸ್ವಾಮಿ ಅವರು, ಬಂಡಿಪುರದಲ್ಲಿ ವಾಹನಗಳ ರಾತ್ರಿ ಸಂಚಾರಕ್ಕೆ ಹೈಕೋರ್ಟ್ ನಿಶೇಧ ಹೇರಿದೆ, ಸರ್ಕಾರವು ಇದರ ಪರವಾಗಿದೆ. ಹಾಗೂ ಉದ್ದೇಶಿತ ಎಲಿವೇಟೆಡ್ ರಸ್ತೆ ನಿರ್ಮಾಣ ಕಾರ್ಯಸಾಧುವಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿರೋಧ
ಕೇಂದ್ರದ ಪ್ರಸ್ತಾವದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಪ್ರಾಣಿ ಪ್ರಿಯರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕೆಲವು ರಾಜಕಾರಣಿಗಳು ಸಹ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಅರಣ್ಯ ಸಚಿವರಿಂದಲೂ ನಿರಾಕರಣೆ
ಅರಣ್ಯ ಇಲಾಖೆ ಸಚಿವ ಆರ್.ಶಂಕರ್ ಸಹ ಕೇಂದ್ರದ ಪ್ರಸ್ತಾವದ ವಿರುದ್ಧ ನಿಂತಿದ್ದು, ಬಂಡಿಪುರದಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿಯನ್ನೂ ನೀಡುವುದಿಲ್ಲ ಜೊತೆಗೆ ಎಲಿವೇಟೆಡ್ ರಸ್ತೆ ನಿರ್ಮಾಣಕ್ಕೂ ಅವಕಾಶ ನೀಡಲಾಗದು ಎಂದು ಹೇಳಿದ್ದರು.

ಏನಿದು ಎಲಿವೇಟೆಡ್ ರಸ್ತೆ
ಬಂಡಿಪುರ ಅರಣ್ಯ ಪ್ರದೇಶದ ಮೇಲೆ ಫ್ಲೈ ಓವರ್ ರಸ್ತೆ ನಿರ್ಮಾಣ ಮಾಡುವುದೇ ಬಂಡಿಪುರ ಎಲಿವೇಟೆಡ್ ರಸ್ತೆ ನಿರ್ಮಾಣ. ಬಂಡಿಪುರ ಕಾಡಿನ ಕರ್ನಾಟಕದ ಭಾಗದಲ್ಲಿನ 24.20 ಕಿ.ಮೀ, ಕೇರಳ ರಾಜ್ಯದ 10.4 ಕಿ.ಮೀ ದೂರದವರೆಗೆ 5 ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡುವುದು ಕೇಂದ್ರದ ಯೋಜನೆಯಾಗಿತ್ತು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications