ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಶಿವಮೊಗ್ಗ, ಚಿಕ್ಕಮಗಳೂರು ವೈಮಾನಿಕ ಸಮೀಕ್ಷೆ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 18: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಡೆಸಲು ಉದ್ದೇಶಿಸಿದ್ದ ವೈಮಾನಿಕ ಸಮೀಕ್ಷೆಯನ್ನು ಮುಂದೂಡಲಾಗಿದೆ.

ಮಳೆಯಿಂದ ಮನೆ ಕಳೆದುಕೊಂಡವರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂಮಳೆಯಿಂದ ಮನೆ ಕಳೆದುಕೊಂಡವರಿಗೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಯನ್ನು ವೀಕ್ಷಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಭಾನುವಾರ ಪ್ರವಾಸ ನಡೆಸಲು ಉದ್ದೇಶಿಸಿದ್ದರು.

ಆದರೆ, ಈ ವೈಮಾನಿಕ ಸಮೀಕ್ಷೆಯನ್ನು ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

kumaraswamy visit to shimoga and chikkamagaluru postponed

ಮೊದಲು ಚಿಕ್ಕಮಗಳೂರಿಗೆ ಭೇಟಿ ನೀಡಿ ಮಳೆಹಾನಿ ಸಮೀಕ್ಷೆ ನಡೆಸಲಿದ್ದ ಕುಮಾರಸ್ವಾಮಿ, ಸಂಜೆ ಐದು ಗಂಟೆಗೆ ಶಿವಮೊಗ್ಗಕ್ಕೆ ತೆರಳಿ ಅಧಿಕಾರಿಗಳ ಜತೆಗೆ ಸಭೆ ನಡೆಸಬೇಕಿತ್ತು.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧೆಡೆ ಮಳೆಯಿಂದ ಉಂಟಾಗಿರುವ ಮನೆ, ಬೆಳೆ ಮುಂತಾದವುಗಳ ಹಾನಿ ಸೇರಿದಂತೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬೇಕಿತ್ತು.

ಆಗಸ್ಟ್ 19ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಕುಮಾರಸ್ವಾಮಿಆಗಸ್ಟ್ 19ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಸಿಎಂ ಕುಮಾರಸ್ವಾಮಿ

ವೈಮಾನಿಕ ಸಮೀಕ್ಷೆಯ ದಿಢೀರ್ ಮುಂದೂಡುವಿಕೆಗೆ ಕಾರಣ ತಿಳಿದುಬಂದಿಲ್ಲ. ಮುಂದಿನ ಭೇಟಿಯ ದಿನಾಂಕವನ್ನು ಪ್ರಕಟಿಸಿಲ್ಲ.

English summary
Chief Minister HD Kumaraswamy Aerial inspection of flood situation in Chikkamagaluru and Shimoga program postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X