ಸಣ್ಣ ವ್ಯಾಪಾರಿಗಳಿಗೆ ಮೊಬೈಲ್ ಬ್ಯಾಂಕ್, ನ.22ರಂದು ಚಾಲನೆ
ಬೆಂಗಳೂರು, ನವೆಂಬರ್ 11 : ಬೀದಿ ಮತ್ತು ಸಣ್ಣ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ ನೀಡಲು ಮೊಬೈಲ್ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತದೆ. ಈ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್ 22ರಂದು ಚಾಲನೆ ನೀಡಲಿದ್ದಾರೆ.
ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ನವೆಂಬರ್ 22ರಂದು ಮೊಬೈಲ್ ಬ್ಯಾಂಕ್ ಉದ್ಘಾಟನೆಯಾಗಲಿದ್ದು, 'ಬಡವರ ಬಂಧು' ಎಂಬ ಹೆಸರಿನಲ್ಲಿ ಸಣ್ಣ ವ್ಯಾಪಾರಿಗಳಿಗೆ 10000 ರೂ. ಬಡ್ಡಿ ರಹಿತ ಸಾಲ ಸಿಗಲಿದೆ.
ಸಾಲವನ್ನು ಪಡೆದ ಫಲಾನುಭವಿಗಳು ದಿನಕ್ಕೆ 100 ರೂ. ಅಥವ ನೂರು ದಿನದಲ್ಲಿ ಸಂಪೂರ್ಣ ಹಣವನ್ನು ವಾಪಸ್ ಮಾಡಬಹುದು. ಸಣ್ಣ ವ್ಯಾಪಾರಿಗಳನ್ನು ಬಡ್ಡಿದಂಧೆ ನಡೆಸುವ ಜನರಿಂದ ಕಾಪಾಡಲು ಈ ಯೋಜನೆ ಜಾರಿಗೆ ತರಲಾಗುತ್ತಿದೆ.

ನವೆಂಬರ್ 22ರಂದು ಬೆಂಗಳೂರು ನಗರದಲ್ಲಿ 3 ಮೊಬೈಲ್ ಬ್ಯಾಂಕ್ಗಳನ್ನು ಆರಂಭ ಮಾಡಲಾಗುತ್ತದೆ. ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿಯೂ ಒಂದು ಮೊಬೈಲ್ ಯೂನಿಟ್ ಚಾಲನೆಗೊಳ್ಳಲಿದೆ. ಮೊದಲ ಹಂತದಲ್ಲಿ 53,000 ಫಲಾನುಭವಿಗಳನ್ನು ಗುರುತಿಸಲಾಗಿದೆ. ಬೆಂಗಳೂರಿನಲ್ಲಿಯೇ 5 ಸಾವಿರ ಫಲಾನುಭವಿಗಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರು 'ಕಾಯಕ' ಎಂಬ ಯೋಜನೆಯನ್ನು ಈ ತಿಂಗಳ ಅಂತ್ಯದಲ್ಲಿ ಆರಂಭಿಸಲಿದ್ದಾರೆ. ಸ್ವ-ಸಹಾಯ ಸಂಘಗಳು ಸ್ವಂತ ಉದ್ಯಮ ಆರಂಭಿಸಲು 10 ಲಕ್ಷದ ತನಕ ಸಾಲವನ್ನು ಯೋಜನೆಯಡಿ ನೀಡಲಾಗುತ್ತದೆ. ಇದರಲ್ಲಿ ಶೇ 50ರಷ್ಟು ಬಡ್ಡಿ ರಹಿತವಾಗಿರುತ್ತದೆ.
-
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
ಮಾರ್ಚ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್












Click it and Unblock the Notifications