ಕುಮಟಾ ಅವಘಡ: ಮೃತರ ಸಂಖ್ಯೆ 10ಕ್ಕೆ ಏರಿಕೆ
ಶಿರಸಿ, ಸೆಪ್ಟೆಂಬರ್, 06: ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಬರ್ಗಿಯಲ್ಲಿ ನಡೆದಿದ್ದ ಗ್ಯಾಸ್ ಟ್ಯಾಂಕರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತಿಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 10 ಕ್ಕೆ ಏರಿದೆ.
ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಯಕಾರಿಯಾಗದೇ ನಿರ್ಮಲಾ (26), ನವ್ಯ(4) ಮೃತಪಟ್ಟಿದ್ದಾರೆ, ಕಳೆದ ಮಂಗಳವಾರ ನಡೆದಿದ್ದ ದುರ್ಘಟನೆಯಲ್ಲಿ ಪ್ರೇಮ ಗಣಪತಿ(50), ನಾಗವೇಣಿ(84),ಭರತ್(26), ಜಯಶ್ರೀ(56), ಶಕೀಲಾ(32) ಶ್ರೀಕಾಂತ್(57), ಧೀರಜ್(18) ನಿರಂಜನ(3) ಮೃತಪಟ್ಟಿದ್ದರು. [ಚಿತ್ರಗಳು : ಕುಮಟಾದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ, 4 ಸಾವು]

ಕಳೆದ ಮಂಗಳವಾರ ಬೆಳಗ್ಗೆ 5.30ರ ಸುಮಾರಿಗೆ ಅವಘಡ ನಡೆದಿತ್ತು. ಮಂಗಳೂರಿನಿಂದ ಗೋವಾಕ್ಕೆ ಹೋಗುತ್ತಿದ್ದ ಗ್ಯಾಸ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಹತ್ತಿರದಲ್ಲಿದ್ದ 9 ಮನೆಗಳಿಗೆ ಹಾನಿಯಾಗಿತ್ತು.
ಮನೆಗಳಲ್ಲಿದ್ದ ಸಿಲಿಂಡರ್ ಸಹ ಸ್ಫೋಟಗೊಂಡು ಗೋಡೆಗಳು ಕುಸಿದು ಬಿದ್ದಿದ್ದವು. ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಮೃತಪಟ್ಟಿದ್ದವು. ಇದೀಗ ಅವಘಡದಿಂದ ಗಂಭೀರ ಗಾಯಗೊಂಡವರು ಒಬ್ಬಬ್ಬರೇ ಮೃತಪಡುತ್ತಿರುವುದು ಕುಟುಂಬದವರ ಶೀಕ ಹೆಚ್ಚಿಸಿದೆ.[ಉತ್ತರ ಕನ್ನಡ : ಗ್ಯಾಸ್ ಟ್ಯಾಂಕರ್ ಸ್ಫೋಟ]
ಜಿಲ್ಲಾ ಉಸ್ತುವಾರಿ ಸಚಿವ ಆರ್ ವಿ ದೇಶಪಾಂಡೆ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಿದ್ದರು. ಅಲ್ಲದೇ ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications