ತಮ್ಮದೇ ಕ್ಷೇತ್ರದ ಬಡ ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ಕುಣಿಗಲ್ ಶಾಸಕ ಡಾ. ರಂಗನಾಥ್
ತುಮಕೂರು, ಜೂನ್ 28: ಕುಣಿಗಲ್ ಶಾಸಕ ಎಚ್.ಡಿ.ರಂಗನಾಥ್ ಬಡ ಮಹಿಳೆಯೊಬ್ಬರಿಗೆ ಜರ್ಮನಿಯಿಂದ ಕೃತಕ ಕೀಲು ತರಿಸಿ ತಾವೇ ಶಸ್ತ್ರಚಿಕಿತ್ಸೆ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಸ್ವತಃ ಮೂಳೆ ತಜ್ಞರಾಗಿರುವ ಕುಣಿಗಲ್ ಶಾಸಕ ಎಚ್ಡಿ ರಂಗನಾಥ್ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಮಹಿಳೆಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಿದ್ದಾರೆ.

ತಮ್ಮದೇ ಕುಣಿಗಲ್ ಕ್ಷೇತ್ರದ ಕುಂದೂರು ಗ್ರಾಮದ 42 ವರ್ಷದ ಆಶಾ ಎಂಬ ಮಹಿಳೆಯೊಬ್ಬರು ಕಾಲಿನ ಕೀಲು ಡಿಸ್ಲೊಕೇಟ್ ಸಮಸ್ಯೆಯಿಂದ ಬಳಲುತ್ತಿದ್ದರು. 10 ವರ್ಷದ ಹಿಂದೆ ಅವರಿಗೆ ಯಶಸ್ವಿನಿ ಯೋಜನೆಯಡಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿತ್ತು. ಆದರೂ ಸಮಸ್ಯೆ ಮತ್ತೆ ಮರುಕಳಿಸಿದ್ದರಿಂದ ವೈದ್ಯರ ಬಳಿ ತಪಾಸಣೆ ಮಾಡಿಸಿದಾಗ ಮರು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ಸಲಹೆ ಬಂದಿತ್ತು.
ಹಣವಿಲ್ಲದೆ ಈಗಾಗಲೇ ಸರ್ಕಾರಿ ಯೋಜನೆಯಡಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಡ ಮಹಿಳೆ ಆಶಾ ಅವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೊಂದು ಉಚಿತ ಶಸ್ತ್ರಚಿಕಿತ್ಸೆ ಅವಕಾಶ ಇರಲಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗೆ ಹೋಗಬೇಕಾಗಿತ್ತು. ಅಲ್ಲಿ ಈ ಶಸ್ತ್ರಚಿಕಿತ್ಸೆಗೆ 5 ರಿಂದ 6 ಲಕ್ಷ ರುಪಾಯಿ ಖರ್ಚು ತಗಲುತ್ತಿತ್ತು. ಗ್ರಾಮದಲ್ಲಿ ಪುಟ್ಟಕಿರಾಣಿ ಅಂಗಡಿ ಇಟ್ಟುಕೊಂಡಿದ್ದ ಅವರಿಗೆ ಇಷ್ಟೊಂದು ಹಣ ಹೊಂದಿಸುವುದು ಸಾಧ್ಯವಿರಲಿಲ್ಲ. ಅವರು ಕೊನೆಗೆ ಕ್ಷೇತ್ರದ ಶಾಸಕ ಡಾ.ರಂಗನಾಥ್ ಅವರನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಂಡಿದ್ದರು.
ಆಗ ಸ್ವತಃ ಕೀಲು ಮೂಳೆ ಸರ್ಜನ್ ಆಗಿರುವ ಶಾಸಕರೇ ತಾವೇ ಶಸ್ತ್ರಚಿಕಿತ್ಸೆ ಮಾಡಲು ನಿರ್ಧರಿಸಿದರು. ಅದರಂತೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಆಶಾ ಅವರನ್ನು ದಾಖಲಿಸಿದ್ದರು. ಕೃತಕ ಕೀಲನ್ನು ಅಳವಡಿಸಿದರೆ ಮಾತ್ರ ರೋಗಿ ಸಂಪೂರ್ಣ ಗುಣಮುಖರಾಗುತ್ತಾರೆ ಎಂಬುದು ಪರಿಶೀಲನೆ ವೇಳೆ ಸ್ಪಷ್ಟವಾಗಿತ್ತು. ಹೀಗಾಗಿ ಶಾಸಕರು ಜರ್ಮನಿಯಿಂದ ಈ ರೀತಿಯ ಕೃತಕ ಕೀಲುಗಳನ್ನು ಪೂರೈಸುವ ಅಂತಾರಾಷ್ಟ್ರೀಯ ಸಂಸ್ಥೆಯಾದ ಡೆಪ್ಯೂ ಕಂಪನಿಯನ್ನು ಸಂಪರ್ಕಿಸಿ ತಾವೇ ಹಣ (ಈ ಕೃತಕ ಕೀಲಿಗೆ ಸುಮಾರು 2 ಲಕ್ಷ ರು. ಇರುತ್ತದೆ) ಮತ್ತು ಆ ಕಂಪನಿಯ ನೆರವಿನೊಂದಿಗೆ ಕೃತಕ ಕೀಲು ತರಿಸಿ ಯಶಸ್ವಿಯಾಗಿ ಜೋಡಣೆ ಮಾಡಿಕೊಡ್ಡಿದ್ದಾರೆ.
ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಬರೋಬ್ಬರಿ 4 ಗಂಟೆಗಳ ಕಾಲ ಕೀಲು ಜೋಡಣಾ ಶಸ್ತ್ರಚಿಕಿತ್ಸೆ ನಡೆಯಿತು. ಶಾಸಕ ಡಾ.ರಂಗನಾಥ್ ಜೊತೆಯಲ್ಲಿ ಡಾ.ಮನೋಜ್, ಡಾ.ದೀಪಕ್ ಶಸ್ತ್ರ ಚಿಕಿತ್ಸೆಯಲ್ಲಿ ಪಾಲ್ಗೊಂಡಿದ್ದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications