ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಳ್ಳರ ಪಾಲಾದ ರಾಷ್ಟ್ರಕವಿ ಕುವೆಂಪು ಅವರ 'ಜ್ಞಾನಪೀಠ'

By Mahesh
|
Google Oneindia Kannada News

ಕುಪ್ಪಳ್ಳಿ, ನ.24: ರಾಷ್ಟ್ರಕವಿ ಕುವೆಂಪು(ಕೆ.ವಿ ಪುಟ್ಟಪ್ಪ) ಅವರ ಬಾಲ್ಯದ ಮನೆ ಹಾಗೂ ಮ್ಯೂಸಿಯಂ ಆಗಿರುವ ಕುಪ್ಪಳ್ಳಿಯ ಮನೆಯಲ್ಲಿ ಸೋಮವಾರ ರಾತ್ರಿ ಕಳ್ಳತನವಾಗಿದೆ. ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಪ್ರಮುಖ ಪ್ರಶಸ್ತಿಗಳನ್ನು ಕಾಣೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿಯಲ್ಲಿರುವ ಕುವೆಂಪು ಅವರ ನಿವಾಸ ಕವಿಶೈಲದಲ್ಲಿ ಕಳ್ಳತನವಾಗಿದೆ. ಸೋಮವಾರ ರಾತ್ರಿ ದುಷ್ಕರ್ಮಿಗಳು ಮನೆಯ ಸುತ್ತಾ ಇರುವ ಸಿಸಿಟಿವಿ ಕ್ಯಾಮೆರಾಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ.

Kuppalli Rashtrakavi Kuvempu's house burgled, Jnanapith award stolen

ನಂತರ ಮಹಡಿಯಲ್ಲಿ ಪ್ರದರ್ಶನಕ್ಕಿಟ್ಟಿರುವ ಜ್ಞಾನಪೀಠ, ಪದ್ಮಭೂಷಣ ಪ್ರಶಸ್ತಿಗಳನ್ನು ಕದ್ದೊಯ್ದಿದ್ದಾರೆ. ಇನ್ನೂ ಕೆಲವು ಅಮೂಲ್ಯ ವಸ್ತುಗಳು ಕಾಣೆಯಾಗಿವೆ. ಈ ಬಗ್ಗೆ ದೂರು ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ತೀರ್ಥಹಳ್ಳಿ ಪೊಲೀಸರು ಹೇಳಿದ್ದಾರೆ.

ಕವಿಶೈಲದಲ್ಲಿ ಸಿಬ್ಬಂದಿಗಳು ಕಡಿಮೆ ಇದ್ದ ಸಮಯವನ್ನು ನೋಡಿಕೊಂಡು ಈ ಕೃತ್ಯ ಎಸಗಲಾಗಿದೆ. ಅಲ್ಲದೆ, ಮನೆಯಲ್ಲಿ ಎಲ್ಲೆಲ್ಲಿ ಸಿಸಿಟಿವಿ ಕ್ಯಾಮೆರಾ ಇದೆ. ಎಷ್ಟು ಪ್ರಮಾಣದ ಭದ್ರತೆ ಇದೆ ಎಂಬ ವಿಷಯವನ್ನು ಚೆನ್ನಾಗಿ ಅರಿತವರೇ ಈ ಕೃತ್ಯ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

English summary
The childhood house of Kuvempu at Kuppali, Thirthahalli, Shivamogga has been burgled. Kuppalli house is also a museum in which Jnanpeeth, Padmabhushan and many awards were displayed. Miscreants stole awards and valuables from the house.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X