ಕುರುಬ ಸಮುದಾಯದ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಮೇಲೆ ಗರಂ
Recommended Video

ಬೆಂಗಳೂರು, ಜೂನ್ 07: ಸಿದ್ದರಾಮಯ್ಯ ಅವರು ಸೇರಿದಂತೆ ಒಟ್ಟು 9 ಮಂದಿ ಕುರುಬ ಸಮುದಾಯದ ಅಭ್ಯರ್ಥಿಗಳು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ ಆದರೆ ಅವರಿಗೆ ಸಿಕ್ಕಿರುವುದು ಕೇವಲ 1 ಸಚಿವ ಸ್ಥಾನ ಹಾಗಾಗಿ ಕುರುಬ ಸಮುದಾಯದ ಶಾಸಕರು ಸಮುದಾಯದ ಮುಖಂಡ ಸಿದ್ದರಾಮಯ್ಯ ಮೇಲೆ ಸಿಟ್ಟಾಗಿದ್ದಾರೆ.
ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿ ಒಟ್ಟು 13 ಮಂದಿ ಕುರುಬ ಸಮುದಾಯದ ಶಾಸಕರು ಈ ಬಾರಿ ವಿಧಾನಸಭೆಯಲ್ಲಿದ್ದಾರೆ. ಅದರಲ್ಲಿ ಸಿಂಹಪಾಲು ಕಾಂಗ್ರೆಸ್ನದ್ದು ಅದಕ್ಕೆ ಸಿದ್ದರಾಮಯ್ಯ ಅವರ ಲಾಭಿಯೇ ಕಾರಣವಾಗಿತ್ತು. ಸಿದ್ದರಾಮಯ್ಯ ಹೆಚ್ಚಿನ ಜನ ಕುರುಬ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಸಫಲರಾಗಿದ್ದರು.
ಆದರೆ ಚುನಾವಣೆ ನಂತರ ಸಿದ್ದರಾಮಯ್ಯ ಅವರ ಪರಿಸ್ಥಿತಿ ಬದಲಾಗಿದ್ದು ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆ ಆದಂತೆ ಕಾಣುತ್ತಿದೆ ಹಾಗಾಗಿ ಕುರುಬ ಸಮುದಾಯದ ಇಬ್ಬರಿಗೆ ಮಾತ್ರವೇ ಸಂಪುಟದಲ್ಲಿ ಅವಕಾಶ ದೊರೆತಿದೆ. ಅದರಲ್ಲಿಯೂ ಕಾಂಗ್ರೆಸ್ನ ಒಬ್ಬ ಕುರುಬ ಶಾಸಕರಿಗೆ ಮಾತ್ರವೇ ಸಚಿವರಾಗುವ ಭಾಗ್ಯ ದೊರೆತಿದೆ.

ಅದರಲ್ಲಿಯೂ ಕಾಂಗ್ರೆಸ್ನಿಂದ ಮೂರು ಭಾರಿ ಗೆದ್ದಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜು ಅವರಂತೂ ಸಿದ್ದರಾಮಯ್ಯ ಅವರ ಮೇಲೆ ತೀವ್ರ ಅಸಮಾಧಾನಗೊಂಡಿದ್ದು, ಇಂದು ಎಂಬಿ ಪಾಟೀಲ್ ಅವರ ನಿವಾಸದಲ್ಲಿ ನಡೆದ ಅತೃಪ್ತರ ಸಭೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಖಾರವಾಗಿ ಮಾತನಾಡಿದ್ದಾರೆ.
ಕಳೆದ ಬಾರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಮೇಲೆ ಹಾಗೂ ರಾಜ್ಯ ಕಾಂಗ್ರೆಸ್ ಮೇಲೆ ಉತ್ತಮ ಹಿಡಿತವಿತ್ತು ಆಗ ಹಲವರಿಗೆ ಕುರುಬ ಸಮುದಾಯದವರಿಗೆ ಸಚಿವ ಸ್ಥಾನ ಕೊಡಿಸಿದ್ದರು. ಈ ಬಾರಿ ಚುನಾವಣೆಗೆ ಟಿಕೆಟ್ ಕೂಡ ಕೊಡಿಸುವಲ್ಲಿ ಸಫಲರಾಗಿದ್ದರು. ಆದರೆ ಈಗ ಪರಿಸ್ಥತಿ ಬದಲಾದಂತಿದೆ.
ಎಂಟಿಬಿ ನಾಗರಾಜು ಅವರು ಹೇಳುವ ಪ್ರಕಾರ, ಇನ್ನೂ ಅವಕಾಶ ಇದ್ದು ತಾಳ್ಮೆಯಿಂದ ಇರುವಂತೆ ಮುಕ್ಯಮಂತ್ರಿಗಳು ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಅವರ ಮಾತು ನಿಜವಾದಲ್ಲಿ ಇನ್ನೊಬ್ಬ ಕುರುಬ ಶಾಸಕ ಸಂಪುಟ ಸೇರುವ ಸಾಧ್ಯತೆ ಇದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications