ಕುರುಬ ಸಮುದಾಯದ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಮೇಲೆ ಗರಂ
Recommended Video

ಬೆಂಗಳೂರು, ಜೂನ್ 07: ಸಿದ್ದರಾಮಯ್ಯ ಅವರು ಸೇರಿದಂತೆ ಒಟ್ಟು 9 ಮಂದಿ ಕುರುಬ ಸಮುದಾಯದ ಅಭ್ಯರ್ಥಿಗಳು ವಿಧಾನಸಭೆಗೆ ಆಯ್ಕೆಯಾಗಿದ್ದಾರೆ ಆದರೆ ಅವರಿಗೆ ಸಿಕ್ಕಿರುವುದು ಕೇವಲ 1 ಸಚಿವ ಸ್ಥಾನ ಹಾಗಾಗಿ ಕುರುಬ ಸಮುದಾಯದ ಶಾಸಕರು ಸಮುದಾಯದ ಮುಖಂಡ ಸಿದ್ದರಾಮಯ್ಯ ಮೇಲೆ ಸಿಟ್ಟಾಗಿದ್ದಾರೆ.
ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಸೇರಿ ಒಟ್ಟು 13 ಮಂದಿ ಕುರುಬ ಸಮುದಾಯದ ಶಾಸಕರು ಈ ಬಾರಿ ವಿಧಾನಸಭೆಯಲ್ಲಿದ್ದಾರೆ. ಅದರಲ್ಲಿ ಸಿಂಹಪಾಲು ಕಾಂಗ್ರೆಸ್ನದ್ದು ಅದಕ್ಕೆ ಸಿದ್ದರಾಮಯ್ಯ ಅವರ ಲಾಭಿಯೇ ಕಾರಣವಾಗಿತ್ತು. ಸಿದ್ದರಾಮಯ್ಯ ಹೆಚ್ಚಿನ ಜನ ಕುರುಬ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಸಫಲರಾಗಿದ್ದರು.
ಆದರೆ ಚುನಾವಣೆ ನಂತರ ಸಿದ್ದರಾಮಯ್ಯ ಅವರ ಪರಿಸ್ಥಿತಿ ಬದಲಾಗಿದ್ದು ಸಿದ್ದರಾಮಯ್ಯ ಅವರ ಪ್ರಭಾವ ಕಡಿಮೆ ಆದಂತೆ ಕಾಣುತ್ತಿದೆ ಹಾಗಾಗಿ ಕುರುಬ ಸಮುದಾಯದ ಇಬ್ಬರಿಗೆ ಮಾತ್ರವೇ ಸಂಪುಟದಲ್ಲಿ ಅವಕಾಶ ದೊರೆತಿದೆ. ಅದರಲ್ಲಿಯೂ ಕಾಂಗ್ರೆಸ್ನ ಒಬ್ಬ ಕುರುಬ ಶಾಸಕರಿಗೆ ಮಾತ್ರವೇ ಸಚಿವರಾಗುವ ಭಾಗ್ಯ ದೊರೆತಿದೆ.

ಅದರಲ್ಲಿಯೂ ಕಾಂಗ್ರೆಸ್ನಿಂದ ಮೂರು ಭಾರಿ ಗೆದ್ದಿರುವ ಹೊಸಕೋಟೆ ಶಾಸಕ ಎಂಟಿಬಿ ನಾಗರಾಜು ಅವರಂತೂ ಸಿದ್ದರಾಮಯ್ಯ ಅವರ ಮೇಲೆ ತೀವ್ರ ಅಸಮಾಧಾನಗೊಂಡಿದ್ದು, ಇಂದು ಎಂಬಿ ಪಾಟೀಲ್ ಅವರ ನಿವಾಸದಲ್ಲಿ ನಡೆದ ಅತೃಪ್ತರ ಸಭೆಯಲ್ಲಿ ಸಿದ್ದರಾಮಯ್ಯ ಅವರ ವಿರುದ್ಧವಾಗಿ ಖಾರವಾಗಿ ಮಾತನಾಡಿದ್ದಾರೆ.
ಕಳೆದ ಬಾರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಮೇಲೆ ಹಾಗೂ ರಾಜ್ಯ ಕಾಂಗ್ರೆಸ್ ಮೇಲೆ ಉತ್ತಮ ಹಿಡಿತವಿತ್ತು ಆಗ ಹಲವರಿಗೆ ಕುರುಬ ಸಮುದಾಯದವರಿಗೆ ಸಚಿವ ಸ್ಥಾನ ಕೊಡಿಸಿದ್ದರು. ಈ ಬಾರಿ ಚುನಾವಣೆಗೆ ಟಿಕೆಟ್ ಕೂಡ ಕೊಡಿಸುವಲ್ಲಿ ಸಫಲರಾಗಿದ್ದರು. ಆದರೆ ಈಗ ಪರಿಸ್ಥತಿ ಬದಲಾದಂತಿದೆ.
ಎಂಟಿಬಿ ನಾಗರಾಜು ಅವರು ಹೇಳುವ ಪ್ರಕಾರ, ಇನ್ನೂ ಅವಕಾಶ ಇದ್ದು ತಾಳ್ಮೆಯಿಂದ ಇರುವಂತೆ ಮುಕ್ಯಮಂತ್ರಿಗಳು ಸಲಹೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ. ಅವರ ಮಾತು ನಿಜವಾದಲ್ಲಿ ಇನ್ನೊಬ್ಬ ಕುರುಬ ಶಾಸಕ ಸಂಪುಟ ಸೇರುವ ಸಾಧ್ಯತೆ ಇದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications