ರೈತ ಚಳುವಳಿ: ಫೆಬ್ರವರಿ 6ರಂದು ರಾಜ್ಯಾದ್ಯಂತ ಹೆದ್ದಾರಿ ತಡೆ?
ಬೆಂಗಳೂರು, ಫೆ. 03: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಪೊಲೀಸ್ ಬಲದ ಮೂಲಕ ಸಾಕಷ್ಟು ಕಿರುಕುಳ ಕೊಡುತ್ತಿದೆ. ಮತ್ತೊಂದೆಡೆ ಚಳವಳಿ ಮಾಡುತ್ತಿರುವ ರೈತರೊಂದಿಗೆ ನಾವು ಮಾತುಕತೆಗೆ ಸಿದ್ಧ ಎನ್ನುವ ಸಂದೇಶವನ್ನೂ ಕೇಂದ್ರ ಸರ್ಕಾರ ಕೊಡುತ್ತಿದೆ. ಚಳುವಳಿ ನಡೆಯುತ್ತಿರುವ ಪ್ರದೇಶದಲ್ಲಿ ಇಂಟರ್ನೆಟ್ ಸೌಲಭ್ಯ ಸ್ಥಗಿತಗೊಳಿಸಿರುವುದು, ರಸ್ತೆಗಳಿಗೆ ಮುಳ್ಳುತಂತಿ ಹಾಕಿರುವುದು ಪ್ರಧಾನಿ ಮೋದಿ ಅವರ ಇಬ್ಬಗೆ ನೀತಿ ಆಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಕೇಂದ್ರ ಸರ್ಕಾರದ ನಿಲುವು ಖಂಡಿದ್ದಾರೆ.
ಇದರ ವಿರುದ್ಧ ಶಾಂತಿಯುತ ಹೋರಾಟ ನಡೆಸಲು ರಾಷ್ಟ್ರ ಮಟ್ಟದ ಕಿಸಾನ್ ಸಂಯುಕ್ತ ಮೋರ್ಚಾ ಕರೆ ಕೊಟ್ಟಿದೆ. ಅವರ ಕರೆ ಮೇರೆಗೆ ರಾಜ್ಯದಲ್ಲಿಯೂ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿ ಫೆ. 6 ರಂದು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಧ್ಯಾಹ್ನ 12 ಗಂಟೆಯಿಂದ 2 ಗಂಟೆಗಳ ಕಾಲ ರಸ್ತೆ ಬಂದ್ ಚಳುವಳಿ ನಡೆಸುವ ಮೂಲಕ ದೇಶದ ರೈತರ ಹೋರಾಟವನ್ನು ಬೆಂಬಲಿಸಬೇಕು. ಈ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡುತ್ತದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಪ್ರತಿಭಟನಾ ನಿರತ ರೈತರ ಮೇಲೆ ಹಾಗೂ ಈ ಹೋರಾಟದ ಬಗ್ಗೆ ಮಾಧ್ಯಮಗಳಿಗೆ ಸುದ್ದಿ ಮಾಡುತ್ತಿದ್ದ ವರದಿಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದು ಖಂಡನೀಯ. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿಯು ಸಹ ಇಂತಹ ಅತಿರೇಕದ ಕಾರ್ಯ ನಡೆದಿಲ್ಲ, ಜನತಂತ್ರ ವ್ಯವಸ್ಥೆಗೆ ಮಾಡಿದ ಅಪಮಾನ, ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಾಯ್ದೆಗಳನ್ನು ವಾಪಸ್ ಪಡಯಬೇಕು ಕೃಷಿ ಉತ್ಪನ್ನಗಳಿಗೆ ಶಾಸನಬದ್ದ ಖಾತರಿ ಬೆಂಬಲ ಬೆಲೆ ನಿಗದಿ ಮಾಡುವ ವ್ಯವಸ್ಥೆ ಜಾರಿಯಾಗಬೇಕು ಎಂದು ಎಂದು ಕುರಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications