ಕುಸ್ಮಾ ಶಾಲೆಗಳಲ್ಲಿ 1ನೇ ತರಗತಿಯಿಂದ ಕನ್ನಡ ಕಡ್ಡಾಯ
ಬೆಂಗಳೂರು, ಮೆ. 15: ರಾಜ್ಯದಲ್ಲಿರುವ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯ(ಕುಸ್ಮಾ) ವ್ಯಾಪ್ತಿಗೆ ಬರುವ ಎಲ್ಲಾ ಶಾಲೆಗಳಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಒಂದನೇ ತರಗತಿಯಿಂದ ಒಂದು ಕಡ್ಡಾಯ ಭಾಷೆಯಾಗಿ ಕನ್ನಡವನ್ನು ಕಲಿಸಲಾಗುತ್ತದೆ.
ಕುಸ್ಮಾ ಅಧ್ಯಕ್ಷ ಪ್ರೊ.ವಿ.ಆರ್.ರೆಡ್ಡಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮಗಳಿಗೂ ಈ ನೀತಿ ಅನ್ವಯವಾಗಲಿದೆ ಎಂದು ಹೇಳಿದರು.
ಸುಪ್ರೀಂ ತೀರ್ಪನ್ನು ಸ್ವಾಗತಿಸಿದ ಮೇಲೆ ಕುಸ್ಮಾ ಕನ್ನಡ ವಿರೋಧಿ ಸಂಘಟನೆ ಎಂಬ ತಪ್ಪು ಅಭಿಪ್ರಾಯ ರಾಜ್ಯದ ವಿದ್ವತ್ ವಲಯ, ಕನ್ನಡಪರ ಸಂಘಟನೆಗಳಲ್ಲಿ ಬಂದಿದೆ. ನಿಜವಾಗಿಯೂ ನಮ್ಮದು ಮಾಧ್ಯಮಕ್ಕಷ್ಟೇ ವಿರೋಧ. ಭಾಷಾ ಮಾಧ್ಯಮದ ಆಯ್ಕೆ ಪೋಷಕರಿಗೆ ಸಿಗಬೇಕೆಂಬುದಷ್ಟೇ ನಮ್ಮ ವಾದ. ಕನ್ನಡ ಭಾಷೆ ಕಲಿಸಲು ನಮ್ಮಲ್ಲಿ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಕುಸ್ಮಾ ವ್ಯಾಪ್ತಿಯಲ್ಲಿ 1800 ಶಾಲೆಗಳಲ್ಲದೇ 6800 ಖಾಸಗಿ ಶಾಲೆಗಳಿವೆ. ಈಗ ಕುಸ್ಮಾ ವ್ಯಾಪ್ತಿಗೆ ಬರುವ ಶಾಲೆಗಳ ಜತೆಗೆ ಇತರೆ ಖಾಸಗಿ ಶಾಲೆಗಳಲ್ಲೂ ಕನ್ನಡ ಕಲಿಸುವಂತೆ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಈಗಾಗಲೇ ತಿರಸ್ಕರಿಸಿದೆ. ಮತ್ತೊಮ್ಮೆ ರಾಜ್ಯ ಸರ್ಕಾರ ಈ ತೀರ್ಪನ್ನು ಪ್ರಶ್ನಿಸಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿ ವೃಥಾ ಸಮಯ ಮತ್ತು ಹಣ ಹಾಳು ಮಾಡಿಕೊಳ್ಳಲು ಹೊರಟಿದೆ ಎಂದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications