Get Updates
Get notified of breaking news, exclusive insights, and must-see stories!

ಸಿಎಂ ಸಿದ್ದರಾಮಯ್ಯ ಮಾಧ್ಯಮ ಸಲಹೆಗಾರರಾಗಿ ಕೆವಿ ಪ್ರಭಾಕರ್ ನೇಮಕ

ಬೆಂಗಳೂರು, ಮೇ 22: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರರೂಢರಾಗಿರುವ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕಳೆದ ಅವಧಿಯಲ್ಲಿ ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತರಾದ ದಿನೇಶ್‌ ಅಮಿನ್‌ಮಟ್ಟು ಅವರು ನೇಮಕವಾಗಿದ್ದರು. ಈ ಬಾರಿ ಕೆವಿ ಪ್ರಭಾಕರ್‌ ಅವರು ಮಾಧ್ಯಮ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ.

KV Prabhakar

ಈ ಸಂಬಂಧ ಶ್ರೀ ಕೆ.ವಿ. ಪ್ರಭಾಕರ್‌, ಹಿರಿಯ ಪತ್ರಕರ್ತರು ನಂ.127/7 ಟೆಂಪಲ್‌ ಕೋರ್ಟ್‌ ಅಪಾರ್ಟ್‌ಮೆಂಟ್‌, ಬುಲ್‌ ಟೆಂಪಲ್‌ ರಸ್ತೆ, ಚಾಮರಾಜಪೇಟೆ, ಬೆಂಗಳೂರು- 18 ಇವರನ್ನು ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಿಸಲಾಗಿದೆ. ಇವರಿಗೆ ದಿನಾಂಕ 20.05.2023ರಿಂದ ಜಾರಿಗೆ ಬರುವಂತೆ ಹಾಗೂ ಮುಮದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಡಾ. ವೆಂಕಟೇಶಯ್ಯ ಕೆಎಎಸ್‌ (ಆಯ್ಕೆ ಶ್ರೇಣಿ) ಅಧಿಕಾರಿ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ದಿನಾಂಕ 20.5.2023ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಮಾನ್ಯ ಮುಖ್ಯಮಂತ್ರಿಯವರು ಆಪ್ತ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದು ಮೇ 13ರಂದು ಫಲಿತಾಂಶ ಹೊರ ಬಂದಿತ್ತು. ಈ ಬಾರಿ ಕಾಂಗ್ರೆಸ್‌ಗೆ 135 ಸ್ಥಾನಗಳನ್ನು ಪಡೆದುಕೊಂಡಿತ್ತು. ಬಿಜೆಪಿ 66, ಜೆಡಿಎಸ್‌ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+