ಸಿದ್ದರಾಮಯ್ಯ ಮಗನಿಗೆ ಸಿಕ್ಕಿದ್ದು ಇದೊಂದೇ ಪ್ರಾಜೆಕ್ಟಾ?
ಬೆಂಗಳೂರು, ಏಪ್ರಿಲ್ 15 : ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಿದ್ದರಾಮಯ್ಯನವರ ಮಗ ಡಾ. ಯತೀಂದ್ರ ಮಲ್ಟಿ ಸ್ಪೆಷಾಲಿಟಿ ಲ್ಯಾಬ್ ಸ್ಥಾಪಿಸುತ್ತಿರುವುದು ವಿರೋಧ ಪಕ್ಷಗಳಿಗೆ ಮುಖ್ಯಮಂತ್ರಿಗಳನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಸಿದ್ದರಾಮಯ್ಯನವರೂ ಸೋಲು ಒಪ್ಪಿಕೊಳ್ಳುತ್ತಿಲ್ಲ, ವಿರೋಧ ಪಕ್ಷದವರೂ ಬಿಡುತ್ತಿಲ್ಲ.
ಮ್ಯಾಟ್ರಿಕ್ಸ್ ಇಮೇಜಿಂಗ್ ಸಲ್ಯೂಷನ್ಸ್ ಲಿಮಿಟೆಡ್ ಸಂಸ್ಥೆಗೆ ಡಾ. ಯತೀಂದ್ರ ಸಿದ್ದರಾಮಯ್ಯ ನಿರ್ದೇಶಕರಾದ ನಂತರ ಇದೊಂದೇ ಪ್ರಾಜೆಕ್ಟ್ ಸಿಕ್ಕಿದೆಯಾ? ಅಥವಾ ಸಿದ್ದರಾಮಯ್ಯನವರ ಕೃಪೆಯಿಂದಾಗಿ ಇನ್ನೂ ಹಲವಾರು ಪ್ರಾಜೆಕ್ಟುಗಳು ಯತೀಂದ್ರ ಅವರ ಸಂಸ್ಥೆಗೆ ಮಂಜೂರಾಗಿದೆಯಾ?
ಇನ್ನೆರಡು ಪ್ರಾಜೆಕ್ಟ್ : ಈ ಸಂಗತಿಯನ್ನು ಕೆದಕುತ್ತ ಹೋದರೆ, ಸಿದ್ದರಾಮಯ್ಯನವರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸುವಂಥ ಮತ್ತಷ್ಟು ವಿಷಯಗಳು ಹೊರಬರುತ್ತಿವೆ. ಮೈಸೂರು ಮತ್ತು ಕಲಬುರಗಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಗಳಲ್ಲಿಯೂ ಡಾ. ಯತೀಂದ್ರ ಅವರ ಮ್ಯಾಟ್ರಿಕ್ಸ್ ಸಂಸ್ಥೆ ಪ್ರಯೋಗಾಲಯಗಳನ್ನು ಸ್ಥಾಪಿಸಿರುವುದು ಬೆಳಕಿಗೆ ಬಂದಿದೆ. [ಸಿದ್ದರಾಮಯ್ಯ ಪುತ್ರ ಯತೀಂದ್ರರ 'ಮ್ಯಾಟ್ರಿಕ್ಸ್' ಹಿನ್ನಲೆ ಏನು?]

2014ರ ಸೆಪ್ಟೆಂಬರ್ 8ರಂದು ಡಾ. ಯತೀಂದ್ರ ಅವರು ಮ್ಯಾಟ್ರಿಕ್ಸ್ ಸಲ್ಯೂಷನ್ಸ್ ಲಿಮಿಟೆಡ್ ಕಂಪನಿಗೆ ನಿರ್ದೇಶಕರಾಗಿ ಆಯ್ಕೆಯಾದರು. ಅದೇ ತಿಂಗಳಲ್ಲಿ ಮೈಸೂರು ಮತ್ತು ಕಲಬುರ್ಗಿಯ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಟೆಂಡರ್ ಕರೆಯಲಾಯಿತು ಮತ್ತು ನವೆಂಬರ್ ನಲ್ಲಿ ಟೆಂಡರ್ ಕ್ಲೋಸ್ ಮಾಡಲಾಯಿತು. ಎರಡೂ ಯೋಜನೆಗಳನ್ನು ಯತೀಂದ್ರ ತಮ್ಮದಾಗಿಸಿಕೊಂಡರು.
ಲ್ಯಾಬ್ನ ಅವಶ್ಯಕತೆಯೇನುತ್ತು? : ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿಯೇ ಅತ್ಯುತ್ತಮ ಪ್ರಯೋಗಾಲಯ ಇರುವಾಗ ಖಾಸಗಿ ಕಂಪನಿಯಿಂದ ಮತ್ತೊಂದು ಲ್ಯಾಬನ್ನು ಸ್ಥಾಪಿಸುವ ಅಗತ್ಯವಾದರೂ ಏನಿತ್ತು ಎಂದು ಕೆಲ ಹಿರಿಯ ವೈದ್ಯರು ಚಕಾರವೆತ್ತಿದ್ದಾರೆ. ಅಲ್ಲದೆ, ಸರಕಾರಿ ಆಸ್ತಿಯಲ್ಲಿ ಖಾಸಗಿ ಕಂಪನಿ ಲಾಭ ಮಾಡಿಕೊಳ್ಳಲು ಯಾಕೆ ಅವಕಾಶ ನೀಡಬೇಕು ಎಂಬುದು ಅವರ ವಾದ.
ಈ ವಾದವನ್ನು ತಳ್ಳಿಹಾಕುವ ಸಿದ್ದರಾಮಯ್ಯ ಬೆಂಬಲಿಗರು, ಹಿಂದೆ ಕೂಡ ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ಖಾಸಗಿ ಸಂಸ್ಥೆ ಲ್ಯಾಬ್ ಸ್ಥಾಪಿಸಲು ಅವಕಾಶ ಮಾಡಿಕೊಡಲಾಗಿತ್ತು. ಈಗ ಮತ್ತೊಂದು ಖಾಸಗಿ ಸಂಸ್ಥೆಗೆ ಅವಕಾಶ ಮಾಡಿಕೊಟ್ಟರೆ ತಪ್ಪೇನು ಎಂಬುದು. [ಸಿದ್ದರಾಮಯ್ಯಗೆ ಪೂಜಾರಿ ಮಂಗಳಾರತಿ]
ಈ ನಡುವೆ, ಯತೀಂದ್ರ ಹೇಳುವುದೇನೆಂದರೆ, ಇಲ್ಲಿ ಅವ್ಯವಹಾರ ನಡೆದಿಲ್ಲ. ಅಂತಿಮ ಹಂತದಲ್ಲಿ ಮ್ಯಾಟ್ರಿಕ್ಸ್ ಮತ್ತು ಎಚ್ಎಲ್ಎಲ್ ಕಂಪನಿಗಳು ಶಾರ್ಟ್ ಲಿಸ್ಟ್ ಆಗಿದ್ದವು. ಆದರೆ, ಎಚ್ಎಲ್ಎಲ್ ಕಂಪನಿ ಡಿಮಾಂಡ್ ಡ್ರಾಫ್ಟ್ ಸಲ್ಲಿಸದಿದ್ದರಿಂದ ಮ್ಯಾಟ್ರಿಕ್ಸ್ ಕಂಪನಿಗೆ ಈ ಪ್ರಾಜೆಕ್ಟ್ ದೊರೆಯಿತು. ಅಲ್ಲದೆ, ಅವ್ಯವಹಾರ ನಡೆದಿದೆ ಎಂಬುದು ಸಾಬೀತಾದರೆ ಸಂಸ್ಥೆಗೇ ರಾಜೀನಾಮೆ ನೀಡುವುದಾಗಿ ಯತೀಂದ್ರ ಹೇಳಿದ್ದಾರೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications