ಪರಮೇಶ್ವರ್ ನಾಯಕ್ ವಿವಾದ, ವರದಿ ಕೇಳಿದ ಹೈಕಮಾಂಡ್!
ಬೆಂಗಳೂರು, ಜನವರಿ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ರಾಜೀನಾಮೆ ಪಡೆಯಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಅತ್ತ ಕಾಂಗ್ರೆಸ್ ಹೈಕಮಾಂಡ್ ಸಚಿವರ ವಿವಾದದ ಬಗ್ಗೆ ವಿವರವಾದ ವರದಿ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಸೂಚನೆ ನೀಡಿದೆ.
ಶನಿವಾರ ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಸೂಚನೆ ನೀಡಿರುವ ಕಾಂಗ್ರೆಸ್ ಹೈಕಮಾಂಡ್, ಕಾರ್ಮಿಕ ಮತ್ತು ಬಳ್ಳಾರಿ ಉಸ್ತುವಾರಿ ಸಚಿವ ಪರಮೇಶ್ವರ ನಾಯಕ್ ಅವರ ವಿವಾದದ ಬಗ್ಗೆ ಸಮಗ್ರವಾದ ವರದಿ ನೀಡುವಂತೆ ಹೇಳಿದೆ. [ಸಚಿವರನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ]

ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರ ವರ್ಗಾವಣೆ ವಿಚಾರ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದೆ. ಅನುಪಮಾ ಶೆಣೈ ಅವರ ವರ್ಗಾವಣೆ ರದ್ದುಗೊಳಿಸಿ, ಪರಮೇಶ್ವರ್ ನಾಯಕ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿ ಶನಿವಾರ ಕೂಡ್ಲಿಗಿ ಬಂದ್ಗೆ ನಡೆಸಲಾಗುತ್ತಿದೆ. [ಕೂಡ್ಲಿಗಿ ಬಂದ್ ವಿವರಗಳ ಇಲ್ಲಿವೆ]
ಈಗಾಗಲೇ ರಾಜ್ಯಾದ್ಯಂತ ಪರಮೇಶ್ವರ್ ನಾಯಕ್ ಅವರ ರಾಜೀನಾಮೆಗೆ ಒತ್ತಾಯ ಕೇಳಿಬರುತ್ತಿದೆ. ರಾಜೀನಾಮೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನವನ್ನು ಕೈಗೊಳ್ಳಬೇಕು. ಪರಮೇಶ್ವರ ಅವರು ನೀಡುವ ವರದಿಯನ್ನು ಆಧಾರವಾಗಿಟ್ಟುಕೊಂಡು ಸಚಿವರ ರಾಜೀನಾಮೆ ಪಡೆಯುವ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. [ಡಿವೈಎಸ್ಪಿ ಅನುಪಮಾ ಪರಿಚಯ]
ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರು ತಮ್ಮ ಪೋನ್ ಕರೆಯನ್ನು ಸ್ವೀಕರಿಸಲಿಲ್ಲ ಎಂದು ಪರಮೇಶ್ವರ್ ನಾಯಕ್ ಅವರು ತನ್ನ ಪ್ರಭಾವ ಬಳಸಿ ಅವರನ್ನು ವರ್ಗಾವಣೆ ಮಾಡಿಸಿದ್ದಾರೆ ಎಂಬ ಆರೋಪವಿದೆ. ಅನುಪಮಾ ಶೆಣೈ ಅವರು ಮಾತ್ರವಲ್ಲದೇ ತಮ್ಮ ಕೆಲಸಕ್ಕೆ ಅಡ್ಡಿಪಡಿಸಿದ ಇತರ ಅಧಿಕಾರಿಗಳನ್ನು ಅವರು ಬಳ್ಳಾರಿಯಿಂದ ವರ್ಗಾವಣೆ ಮಾಡಿಸಿದ್ದಾರೆ ಎಂಬ ಆರೋಪಗಳಿವೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications