65,00,000 ರೂಪಾಯಿ ಬೆಲೆಬಾಳುವ ಚಿನ್ನದ ನಿಧಿ ಕೊಟ್ಟು ಬೀದಿಗೆ ಬಿದ್ದ ಕುಟುಂಬ, ಅಧಿಕಾರಿಗಳ ವಿರುದ್ಧ ಆಕ್ರೋಶ... Gold Treasure
ರಸ್ತೆಯಲ್ಲಿ 500 ರೂಪಾಯಿ ನೋಟ್ ಬಿದ್ದರೂ ಅದನ್ನ ಪ್ರಾಮಾಣಿಕವಾಗಿ ಮರಳಿಸದ ಜನರು ಇರುವ ಈ ಕಾಲಘಟ್ಟದಲ್ಲಿ, ತಮ್ಮ ಮನೆ ಕಟ್ಟಲು ಗುಂಡಿ ತೋಡುವಾಗ ತಮ್ಮದೇ ಜಾಗದಲ್ಲಿ ಸಿಕ್ಕಿದ್ದ ಸುಮಾರು 65,00,000 ರೂಪಾಯಿ ಬೆಲೆ ಬಾಳುವ ನಿಧಿಯನ್ನು ಸರ್ಕಾರಕ್ಕೆ ಮರಳಿಸಿತ್ತು ಗದಗ ಜಿಲ್ಲೆ ಲಕ್ಕುಂಡಿ ಗ್ರಾಮದ ಕುಟುಂಬ. ಇಷ್ಟೆಲ್ಲಾ ಮಾಡಿ ಪ್ರಮಾಣಿಕತೆ ಮೆರೆದಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದ ಹಿನ್ನೆಲೆ ನಿಧಿ ಮರಳಿಸಿದ್ದ ಕುಟುಂಬ ಇದೀಗ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣ ಆಗಿದೆ. ತಮ್ಮ ಜಾಗವನ್ನೇ ಬಿಟ್ಟುಕೊಟ್ಟು ಬೇರೆಯವರ ಮನೆಯಲ್ಲಿ ಆಶ್ರಯ ಪಡೆಯುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಜನವರಿ 10 ರಂದು ಲಕ್ಕುಂಡಿ ಗ್ರಾಮದಲ್ಲಿ ಗಂಗವ್ವ ಬಸವರಾಜ ರಿತ್ತಿ ಎನ್ನುವವರು ಮನೆ ಕಟ್ಟಿಸಲು ಗುಂಡಿ ತೋಡುವಾಗ ನಿಧಿ ಸಿಕ್ಕಿತ್ತು. ನಿಧಿ ಸಿಕ್ಕಿದ್ದ ಬೆನ್ನಲ್ಲೇ ಗ್ರಾಮದಲ್ಲಿ ಉತ್ಖನನ ಆರಂಭವು ಆಗಿದೆ, ಇದಕ್ಕಿಂತ ಹೆಚ್ಚಾಗಿ ತಮ್ಮ ಜಾಗದಲ್ಲಿ ನಿಧಿ ಸಿಕ್ಕಿದ್ದ ವಿಚಾರವನ್ನು ಗಂಗವ್ವ ಕುಟುಂಬ ಅಧಿಕಾರಿಗಳಿಗೆ ತಿಳಿಸಿ ಆ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿತ್ತು. ಇಷ್ಟೆಲ್ಲಾ ಮಾಡಿದ್ದರೂ ಪ್ರಾಮಾಣಿಕ ರೀತಿಯಲ್ಲಿ ನಿಧಿ ಒಪ್ಪಿಸಿದ ಕುಟುಂಬಕ್ಕೆ ಸಿಗಬೇಕಾದ ಸೌಲಭ್ಯ ಸಿಕ್ಕೇ ಇಲ್ಲ. ಇದರ ಬದಲಾಗಿ ಗಂಗವ್ವ ಕುಟುಂಬ ತಮ್ಮ ಜಾಗವನ್ನೂ ತೊರೆದು, ಮನೆ ಕಟ್ಟುವ ಕೆಲಸವನ್ನೂ ಪೂರ್ಣಗೊಳಿಸಲು ಆಗದೆ ಬೀದಿಗೆ ಬೀಳುವ ಸ್ಥಿತಿಗೆ ತಲುಪಿದೆ.

ತಾಯಿ ಮನೆಯಲ್ಲಿ ನರಳುತ್ತಿರುವ ಕುಟುಂಬ
ತಮ್ಮ ಪರಿಸ್ಥಿತಿ ಬಗ್ಗೆ ಮಾತನಾಡಿರುವ, ನಿಧಿ ಒಪ್ಪಿಸಿದ್ದ ಗಂಗವ್ವ ಅವರು ಮನೆ ಅರ್ಧಕ್ಕೆ ನಿಂತಿರುವ ಬಗ್ಗೆ ಕಣ್ಣೀರು ಹಾಕಿದ್ದಾರೆ. ಅಲ್ಲದೇ, ನಿಧಿ ಸಿಕ್ಕಿದ್ದ ದಿನ ಬಂದ ಅಧಿಕಾರಿಗಳು ಮತ್ತೆ ಬಂದೇ ಇಲ್ಲ ಎಂದು ಗಂಗವ್ವ ಅವರು ತಮ್ಮ ಮನೆಯ ಪರಿಸ್ಥಿತಿ ನೆನಪು ಮಾಡಿಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಗ್ರಾಮಸ್ಥರು ಕೂಡ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸರ ಹೊರ ಹಾಕುತ್ತಿದ್ದು, ಅತ್ತ 65,00,000 ರೂಪಾಯಿ ಬೆಲೆಬಾಳುವ ಚಿನ್ನದ ನಿಧಿ ಒಪ್ಪಿಸಿದರೂ ಪ್ರಾಮಾಣಿಕತೆಗೆ ಬೆಲೆಯೇ ಇಲ್ಲವಾ? ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಇಷ್ಟೆಲ್ಲಾ ನಡೆದರೂ ಗಂಗವ್ವ ಕುಟುಂಬ ಮಾತ್ರ ನಿಧಿ ಕೊಟ್ಟಿದ್ದಕ್ಕೆ ತಮಗೆ ಯಾವುದೇ ಬೇಸರ ಇಲ್ಲ ಎಂದಿದೆ. ಮತ್ತೊಂದು ಕಡೆ ಇರಲು ಸೂರು ಇಲ್ಲದೆ ತಾಯಿ ಮನೆ ಸೇರಿದ್ದಾರೆ ಗಂಗವ್ವ ಮತ್ತು ಕುಟುಂಬ ಸದಸ್ಯರು.
ದೇವಾಲಯ ಬಳಿ ಬೃಹತ್ ಕಲ್ಲಿನ ರಚನೆ ಪತ್ತೆ
ಒಂದು ಕಡೆ ಗಂಗವ್ವ ಅವರ ಕುಟುಂಬ ಸೂರು ಇಲ್ಲದೆ ಪರದಾಡುವಾಗ, ಇನ್ನೊಂದು ಕಡೆ ಉತ್ಖನನ ನಡೆಯುತ್ತಿರುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನ ಜಾಗದಲ್ಲಿ ಬೃಹತ್ ಕಲ್ಲಿನ ರಚನೆ ಪತ್ತೆಯಾಗಿದೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇರುವ ಕೋಟೆ ವೀರಭದ್ರೇಶ್ವರ ದೇವಸ್ಥಾನ ಸುತ್ತಲಿನ ಪ್ರದೇಶದಲ್ಲಿ ಸರ್ಕಾರಿ ಅಧಿಕಾರಿಗಳ ನೇತೃತ್ವದಲ್ಲಿ ಉತ್ಖನನ ಕಾರ್ಯ ಆರಂಭವಾಗಿದೆ. ಈ ಜಾಗದಲ್ಲಿ ಮತ್ತಷ್ಟು ನಿಧಿಯ ಜೊತೆಗೆ ಐತಿಹಾಸಿಕ ಕುರುಹು ಸಿಗಬಹುದು ಎಂಬ ಭರವಸೆಯೊಂದಿಗೆ ಉತ್ಖನನ ಕಾರ್ಯ ಶುರು ಮಾಡಲಾಗಿತ್ತು.
ಹೀಗೆ ಉತ್ಖನನ ಆರಂಭವಾದ ನಂತರ ದೊಡ್ಡ ರಚನೆ ಭಾಗವೆಂದು ನಂಬಲಾಗಿರುವ ಬೃಹತ್ ಕಲ್ಲು ಪತ್ತೆ ಆಗಿದ್ದು, ಭಾರಿ ಅಚ್ಚರಿಗೆ ಕಾರಣವಾಗಿದೆ. ಬೃಹತ್ ಕಲ್ಲಿನ ರಚನೆಯು ಪತ್ತೆಯಾದ ಬಳಿಕ ಅಧಿಕಾರಿಗಳು ಮತ್ತಷ್ಟು ಅಲರ್ಟ್ ಆಗಿದ್ದು, ಮುತುವರ್ಜಿಯಿಂದ ಈ ಉತ್ಖನನ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆದರೆ ಇದೇ ಸಮಯದಲ್ಲಿ ನಿಧಿಯನ್ನು ಪ್ರಾಮಾಣಿಕವಾಗಿ ಒಪ್ಪಿಸಿದ್ದ ಗಂಗವ್ವ ಅವರ ಕುಟುಂಬಕ್ಕೆ ಸೂಕ್ತ ಸೌಲಭ್ಯ ಒದಗಿಸಬೇಕು ಎಂಬ ಆಗ್ರಹ ಕೂಡ ಕೇಳಿಬಂದಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ












Click it and Unblock the Notifications