ಸರ್ಕಾರಿ ಬಸ್ ಚಾಲಕರಿಗೆ ಬಹುಮಾನ ಘೋಷಿಸಿದ ಸಚಿವರು
ಬೆಂಗಳೂರು, ಮೇ 01 : ಸಾರಿಗೆ ಸಚಿವ ಲಕ್ಷ್ಮಣ ಸವದಿ ಲಾಕ್ ಡೌನ್ ಸಂಕಷ್ಟದ ಕಾಲದಲ್ಲಿಯೂ ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಬಹುಮಾನ ಘೋಷಣೆ ಮಾಡಿದ್ದಾರೆ. ಲಾಕ್ ಡೌನ್ ಬಳಿಕ ಬಸ್ಗಳ ಸಂಚಾರ ರದ್ದುಗೊಂಡಿದ್ದು, ನಾಲ್ಕು ಸಾರಿಗೆ ನಿಗಮಗಳಿಗೆ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ.
Recommended Video
ಶುಕ್ರವಾರ ಸಾರಿಗೆಇಲಾಖೆ ಅಧಿಕಾರಿಗಳ ಜೊತೆ ಉಪ ಮುಖ್ಯಮಂತ್ರಿಯೂ ಆಗಿರುವ ಲಕ್ಷ್ಮಣ ಸವದಿ ಸಭೆ ನಡೆಸಿದರು. 41 ವಿಭಾಗೀಯ ನಿಯಂತ್ರಾಧಿಕಾರಿಗಳು ಸಹ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡಿದ್ದರು.
"4 ಸಾರಿಗೆ ನಿಗಮಗಳಲ್ಲಿ ಪ್ರತಿ ತಿಂಗಳು ಅತಿ ಹೆಚ್ಚು ಇಂಧನ ಕ್ಷಮತೆ ತೋರುವ ಒಬ್ಬ ಚಾಲಕನಿಗೆ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ" ಸಭೆಯಲ್ಲಿ ಸಚಿವರು ಘೋಷಣೆ ಮಾಡಿದರು.

"ಲಾಕ್ ಡೌನ್ನಿಂದಾಗಿ ಸಾರಿಗೆ ಸಂಸ್ಥೆಗಳು ಇಂದು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿವೆ. ನಾವೆಲ್ಲರೂ ಒಂದು ತಂಡವಾಗಿ ಮುಂದಿನ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು" ಎಂದು ಸಚಿವರು ಕರೆ ನೀಡಿದರು.
"ಮೇ 3ರಂದು ಲಾಕ್ ಡೌನ್ ಅಂತ್ಯಗೊಳ್ಳಲಿದೆ. ಮುಂದೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಿಗಮದ ಬಸ್ಗಳನ್ನು ಗುತ್ತಿಗೆ ನೀಡಲು ಇಂದು ನಡೆದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ" ಎಂದು ಲಕ್ಷ್ಮಣ ಸವದಿ ಹೇಳಿದರು.
ಪ್ರತಿಯೊಬ್ಬ ವಿಭಾಗೀಯ ನಿಯಂತ್ರಾಣಾಧಿಕಾರಿಗಳನ್ನು ಸಂಪರ್ಕಿಸಿ ಹಸಿರು, ಕೆಂಪು ವಲಯಗಳಲ್ಲಿ ಯಾವ ರೀತಿ ಬಸ್ ಕಾರ್ಯಾಚರಣೆ ಮಾಡಬೇಕು ಎಂಬುದರ ಬಗ್ಗೆ ಲಕ್ಷ್ಮಣ ಸವದಿ ಚರ್ಚೆ ನಡೆಸಿದರು.
ಕಾರ್ಮಿಕರ ಸ್ಥಳಾಂತರದ ವೇಳೆ ಸುರಕ್ಷತೆ ಬಗ್ಗೆ ಗಮನ ಹರಿಸುವುದು. ಬಸ್ ನಿಲ್ದಾಣಗಳನ್ನು ಸ್ವಚ್ಛ ಮಾಡುವುದು, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ವಿವಿಧ ಸೂಚನೆಗಳನ್ನು ಸಚಿವರು ನೀಡಿದರು.
ಲಾಕ್ ಡೌನ್ ಘೋಷಣೆ ಬಳಿಕ ಬಸ್ಗಳ ಸಂಚಾರ ಸಂಪೂರ್ಣವಾಗಿ ರದ್ದಾಗಿದೆ. ಏಪ್ರಿಲ್ 20ರ ತನಕ ನಾಲ್ಕು ನಿಗಮಗಳಿಗೆ 816.23 ಕೋಟಿ ನಷ್ಟವಾಗಿದೆ. ಲಾಕ್ ಡೌನ್ ಇನ್ನೂ 2 ವಾರಗಳ ಕಾಲ ವಿಸ್ತರಣೆಯಾಗಿದ್ದು, ಇನ್ನಷ್ಟು ನಷ್ಟವಾಗಲಿದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications