ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆಗೆ ಲಕ್ಷ್ಮಣ ಸವದಿ ನಾಮಪತ್ರ; ಯಡಿಯೂರಪ್ಪ ಗೈರು

|
Google Oneindia Kannada News

ಬೆಂಗಳೂರು, ಫೆಬ್ರವರಿ 05 : ವಿಧಾನ ಪರಿಷತ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಸಿದರು. ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಫೆಬ್ರವರಿ 7ರಂದು ಚುನಾವಣೆ ನಡೆಯಲಿದೆ.

ಬುಧವಾರ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಸಚಿವರಾದ ಮಾಧುಸ್ವಾಮಿ, ಆರ್. ಅಶೋಕ, ಸಿ. ಸಿ. ಪಾಟೀಲ, ವಿ. ಸೋಮಣ್ಣ, ಡಿಸಿಎಂ ಅಶ್ವತ್ಥ ನಾರಾಯಣ ಮುಂತಾದವರು ಉಪಸ್ಥಿತರಿದ್ದರು.

ಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್; ಆರ್. ಶಂಕರ್‌ಗೆ ನಿರಾಸೆಲಕ್ಷ್ಮಣ ಸವದಿಗೆ ಬಿಜೆಪಿ ಟಿಕೆಟ್; ಆರ್. ಶಂಕರ್‌ಗೆ ನಿರಾಸೆ

ಫೆಬ್ರವರಿ 7ರಂದು ಉಪ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನವಾಗಿದೆ. ವಿಧಾನಸಭೆಯ ಶಾಸಕರು ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕಾಗಿ ನಡೆಯುವ ಉಪ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ.

ಲಕ್ಷ್ಮಣ ಸವದಿ ಗೆ ಡಿಸಿಎಂ ಸ್ಥಾನ ಕೊಡಿಸಿದ್ದು ಯಾರು? ಅವರೇ ಕೊಟ್ಟಿದ್ದಾರೆ ಉತ್ತರಲಕ್ಷ್ಮಣ ಸವದಿ ಗೆ ಡಿಸಿಎಂ ಸ್ಥಾನ ಕೊಡಿಸಿದ್ದು ಯಾರು? ಅವರೇ ಕೊಟ್ಟಿದ್ದಾರೆ ಉತ್ತರ

ಕಾಂಗ್ರೆಸ್ ಪಕ್ಷ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ. ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಉಪ ಚುನಾವಣೆಯಲ್ಲಿ ನಿರಾಯಾಸವಾಗಿ ಗೆದ್ದು ಬರಲಿದೆ. ಯಾವ ಅಭ್ಯರ್ಥಿಯೂ ಕಣಕ್ಕಿಳಿಯದಿದ್ದಲ್ಲಿ ಅವಿರೋಧವಾಗಿ ಲಕ್ಷ್ಮಣ ಸವದಿ ಗೆದ್ದು ಬರಲಿದ್ದಾರೆ.

ವಿಧಾನ ಪರಿಷತ್ ಉಪ ಚುನಾವಣೆ; ಕಾಂಗ್ರೆಸ್ ಸ್ಪರ್ಧೆ ಇಲ್ಲ! ವಿಧಾನ ಪರಿಷತ್ ಉಪ ಚುನಾವಣೆ; ಕಾಂಗ್ರೆಸ್ ಸ್ಪರ್ಧೆ ಇಲ್ಲ!

ಲಕ್ಷ್ಮಣ ಸವದಿ ಹೇಳಿದ್ದೇನು?

ಲಕ್ಷ್ಮಣ ಸವದಿ ಹೇಳಿದ್ದೇನು?

ಮಾಧ್ಯಮಗಳ ಜೊತೆ ಮಾತನಾಡಿದ ಲಕ್ಷ್ಮಣ ಸವದಿ, "ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ನಾನು ಕಳೆದ ಐದು ತಿಂಗಳಿಂದ‌ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದೇನೆ. ಮೇಲ್ಮನೆ ಅಥವಾ ಕೆಳಮನೆ ಸದಸ್ಯರಾಗಬೇಕಾದ ಅನಿವಾರ್ಯತೆ ಇತ್ತು. ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿದೆ.ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಎಲ್ಲಾ ಬಿಜೆಪಿ ಸದಸ್ಯರು ಬೆಂಬಲ ನೀಡಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಸದಸ್ಯರೂ ಬೆಂಬಲ ನೀಡುವ ವಿಶ್ವಾಸವಿದೆ" ಎಂದರು.

ಟಿಕೆಟ್ ಕೊಡುವುದು ಅನಿವಾರ್ಯವಾಗಿತ್ತು

ಟಿಕೆಟ್ ಕೊಡುವುದು ಅನಿವಾರ್ಯವಾಗಿತ್ತು

ಲಕ್ಷ್ಮಣ ಸವದಿ ಯಡಿಯೂರಪ್ಪ ಸಂಪುಟದಲ್ಲಿ ಸಾರಿಗೆ ಸಚಿವರು. ಅಥಣಿ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದ್ದರಿಂದ, ಫೆಬ್ರವರಿ 26ರೊಳಗೆ ಅವರು ವಿಧಾನಸಭೆ ಅಥವ ಪರಿಷತ್ ಸದಸ್ಯರಾಗುವುದು ಅನಿವಾರ್ಯವಾಗಿತ್ತು. ಇಲ್ಲವಾದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು.

ಯಡಿಯೂರಪ್ಪ ಗೈರು

ಯಡಿಯೂರಪ್ಪ ಗೈರು

ಬುಧವಾರ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ಆದರೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಗೈರಾಗಿದ್ದರು. ಕಲಬುರಗಿ ಪ್ರವಾಸದಲ್ಲಿ ಯಡಿಯೂರಪ್ಪ ಇದ್ದು, 85ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಇಲ್ಲ

ಕಾಂಗ್ರೆಸ್‌ ಅಭ್ಯರ್ಥಿ ಇಲ್ಲ

ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸುವುದಿಲ್ಲ. ಜೆಡಿಎಸ್ ಸಹ ಅಭ್ಯರ್ಥಿ ಹಾಕುವುದಿಲ್ಲ. ಆದ್ದರಿಂದ, ಲಕ್ಷ್ಮಣ ಸವದಿ ಅವರು ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

English summary
BJP candidate Lakshman Savadi filed nomination for the legislative council By elections. Election will be held on February 17, 2020. Post vacant after Rizwan Arshad elected in Shivajinagar by election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X