ಬೆಳಗಾವಿ ವಿಭಜನೆಗಾಗಿಯೇ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಿದ್ದರು: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಕರ್ನಾಟಕದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ವಿಭಜನೆ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಸುಗಮ ಆಡಳಿತ ಹಿತದೃಷ್ಟಿಯಿಂದ ಜಿಲ್ಲೆ ವಿಭಜಿಸಿ ಹೊಸ ಜಿಲ್ಲೆ ಘೋಷಿಸುವ ಉದ್ದೇಶದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಗೆ ಆಗಮಿಸಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದರು. ಇದೆಲ್ಲ ನೋಡಿದರೆ ರಾಜ್ಯ ಸರ್ಕಾರ ಯಾವ ಕ್ಷಣದಲ್ಲಾದರೂ ನಿರ್ಧಾರ ಪ್ರಕಟಿಸಬಹುದು. ಹೊಸ ಜಿಲ್ಲೆ ಘೋಷಿಸುವ ಸಾಧ್ಯತೆ ಇದೆ.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈ ಭಾಗದ ಶಾಸಕರು ಸಚಿವರನ್ನು ಕರೆದು ಚರ್ಚಿಸೋಣ. ಹೊಸ ಜಿಲ್ಲೆ ಘೋಷಣೆ ಬಗ್ಗೆ ಮಾತನಾಡಲೆಂದರೆ ಎಲ್ಲರ ನಿಯೋಗ ಕರೆದುಕೊಂಡು ಸಿಎಂ ಬಂದಿದ್ದರು. ಬೆಳಗಾವಿ ವಿಭಜನೆ ಚಿಂತನೆ ಇನ್ನೂ ಮುಂದುವರಿದಿದೆ ಎಂದು ಅವರು ಹೇಳಿದರು.

ಬೆಳಗಾವಿ ಜಿಲ್ಲೆಯ ಜನರ ಅಭಿವೃದ್ಧಿ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಮಾಡಬೇಕೆಂಬ ಇರಾದೆಯು ಮುಖ್ಯಮಂತ್ರಿಗಳಲ್ಲಿದೆ. ಬೆಳಗಾವಿ ತಾಲೂಕು ಒಂದರಲ್ಲಿ ಸುಮಾರು 11.5 ಲಕ್ಷ ಜನರಿದ್ದಾರೆ. ಅವರಿಗೆ ಒಬ್ಬರೇ ತಹಶೀಲ್ದಾರ್ ಇದ್ದಾರೆ. ಎಲ್ಲ ಜವಾಬ್ದಾರಿ ಒಬ್ಬರೇ ನೋಡಿಕೊಳ್ಳುವುದು ಕಷ್ಟವಾಗುತ್ತದೆ. ಅಭಿವೃದ್ಧಿ ದೃಷ್ಟಿಯಿಂದ ಇದು ಸರಿಯಲ್ಲ. ಸಾಕಷ್ಟು ತೊಂದರೆ ಎದುರಿಸಬೇಕಾಗುತ್ತದೆ. ಇದೆಲ್ಲ ಗಮನಿಸಿ ಬೆಳಗಾವಿ ವಿಭಜಿಸಿ ಹೊಸ ಜಿಲ್ಲೆ ಘೋಷಣೆಗೆ ಮುಖ್ಯಮಂತ್ರಿಗಳು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದ್ದಾರೆ.
ಇನ್ನೂ ಇದೇ ವೇಳೆ ತಮ್ಮ ತಾಲೂಕನ್ನು ಜಿಲ್ಲೆಯನ್ನಾಗಿ ಮಾಡಬೇಕೆಂದು ಕೆಲವು ಶಾಸಕರು, ನಾಯಕರು ಮುಖ್ಯಮಂತ್ರಿ ಬಳಿ ಕೋರಿದ್ದಾರೆ. ಇದು ಸಹಜ. ಹೊಸ ಜಿಲ್ಲೆ ಆಗುತ್ತಿದೆ ಎಂದಾಗ ತಮ್ಮ ತಾಲೂಕನ್ನೇ ನೂತನ ಜಿಲ್ಲೆ ಆಗಿ ಮಾಡಬೇಕೆಂಬ ಆಸೆ ಎಲ್ಲರಲ್ಲಿಯೂ ಇರುತ್ತದೆ ಎಂದು ಅವರು ತಿಳಿಸಿದರು.
ಬೆಳಗಾವಿ ಜಿಲ್ಲೆ ವಿಭಜನೆ ಏಕೆ ಅಗತ್ಯ?
ಕರ್ನಾಟಕದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಭೌಗೋಳಿಕವಾಗಿ, ಜನಸಂಖ್ಯೆಯಲ್ಲಿಯೂ ದೊಡ್ಡದಿದೆ. 13ಕ್ಕೂ ಚದರ ಕಿಲೋ ಮೀಟರ್ ವ್ಯಾಪ್ತಿ ಹೊಂದಿದೆ. ತಾಲೂಕೊಂದರಲ್ಲೇ ಹನ್ನೊಂದುವರೆ ಲಕ್ಷ ಜನರಿದ್ದಾರೆ. ಸುತ್ತಮುತ್ತ ಐತಿಹಾಸಿಕ ಸ್ಥಳಗಳು ಮತ್ತು ಪ್ರವಾಸಿ ತಾಣಗಳು ಇವೆ. ಫಲವತ್ತಾದ ಭೂಮಿ ಇದೆ. ಇತರ ಎಲ್ಲ ಸೌಕರ್ಯಗಳು ಇವೆ. ಕೃಷಿ ಮತ್ತು ಕೈಗಾರಿಕೆಗೆ ಜಿಲ್ಲೆ ತನ್ನದೇ ಆದ ಕೊಡುಗೆ ನೀಡುತ್ತಿದೆ.
ವರ್ಷದಿಂದ ವರ್ಷಕ್ಕೆ ಇಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಇಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ಆಗಲು, ವ್ಯವಸ್ಥಿತವಾಗಿ ಆಡಳಿತ ನಡೆಸಲು ಜಿಲ್ಲೆ ವಿಭಜಿಸಿ ಮತ್ತೊಂದು ಜಿಲ್ಲೆ ಮಾಡಲು ಸರ್ಕಾರ ಚಿಂತನೆ ನಡೆದಿದೆ. ಈ ವಿಭಜನೆಗೆ ಹಲವು ಕನ್ನಡಿಗರು, ಚಳವಳಿಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಖಂಡ ಬೆಳಗಾವಿ ಒಡೆಯದಂತೆ ಕೋರಿದ್ದಾರೆ.
ಗೃಹ ಲಕ್ಷ್ಮೀ ಯೋಜನೆ ಹಣ ಬಿಡುಗಡೆ
ಇದೇ ವೇಳೆ ರಾಜ್ಯದಲ್ಲಿ ಗೃಹ ಲಕ್ಷ್ಮೀ ಹಣ ಬಿಡುಗಡೆ ಬಗ್ಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, 24ನೇ ಕಂತಿನ 2000 ರೂಪಾಯಿ ಹಣವನ್ನು ಸೋಮವಾರದಿಂದ ಶನಿವಾರದ ಒಳಗಾಗಿ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗುವುದು. ಒಂದು ಕಂತಿನ ಹಣ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ ಎಂದು 2026 ಹೊಸ ವರ್ಷಕ್ಕೆ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದರು.
ಇನ್ನೂ ಗೃಹ ಲಕ್ಷ್ಮೀ ಯೋಜನೆ ಫಲಾನುಭವಿಗಳು ಆಗಿ, ಮೃತಪಟ್ಟವರ ಕೆಲವರ ಬ್ಯಾಂಕ್ ಖಾತೆಗೆ ಯೋಜನೆಯ ಹಣ ಜಮೆ ಆಗುತ್ತಿದೆ. ಈ ಮಾಹಿತಿ ತತ್ಕ್ಷಣಕ್ಕೆ ತಿಳಿಯುತ್ತಿಲ್ಲ. ಅದರ ಪರಿಶೀಲನೆ ನಡೆಸಿ, ಹಣ ವಾಪಾಸು ಪಡೆಯುವಂತೆ ಬ್ಯಾಂಕ್ ಸಿಬ್ಬಂದಿಗೆ ಸೂಚಿಸಲಾಗಿದೆ. ಅಲ್ಲದೇ ಮುಂದೆ ಈ ರೀತಿ ಹಣ ಮೃತಪಟ್ಟವರಿಗೆ ಹಣ ಹೋಗದಂತೆ ಬ್ರೇಕ್ ಹಾಕಲು ಜಾಲತಾಣ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
-
ಡಿಕೆಶಿ ನನ್ನದು ಹಾಲು-ಜೇನಿನಂತಹ ಸಂಬಂಧ, ಹುಳಿ ಹಿಂಡಲು ಬರಬೇಡಿ: ಅಶೋಕ್-ಕುಮಾರಸ್ವಾಮಿಗೆ ಸಿದ್ದರಾಮಯ್ಯ ಟಾಂಗ್ -
ಕರ್ನಾಟಕ ರಾಜಕೀಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಜೋರು: ಗೃಹ ಸಚಿವರು ಹೇಳಿದ್ದೇನು? -
ರಶ್ಮಿಕಾ ಮೊದಲ ಸಿನಿಮಾದಲ್ಲಿ ನಾನು ಹೀರೋ, ನೀನು ಬಾಲಿವುಡ್ಗೆ ಪಕ್ಕಾ ಹೋಗ್ತೀಯ ಎಂದಿದ್ದೆ: ನಟ ತ್ರಿವಿಕ್ರಮ್ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Horoscope March 2: ಈ ರಾಶಿಯವರಿಗೆ ಸಕಾರಾತ್ಮಕ ಪ್ರಗತಿ, ಮೇಷ-ಮೀನ ರಾಶಿಯವರೆಗೆ ಇಂದಿನ ದಿನ ಭವಿಷ್ಯ -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
Gold Rate : ಆಭರಣ ಪ್ರಿಯರಿಗೆ ಬಿಗ್ ಶಾಕ್; ಭಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ದರ, ಇಲ್ಲಿದೆ ಇಂದಿನ ಬೆಲೆ ಪಟ್ಟಿ -
Iran Vs America, Israel ಯುದ್ಧ ತೀವ್ರ: ಗಲ್ಫ್ ರಾಷ್ಟ್ರಗಳಿಗೂ ವ್ಯಾಪಿಸಿದ ಸಂಕಷ್ಟ; ಈ ಕ್ಷಣದ 10 ಪ್ರಮುಖ ಬೆಳವಣಿಗೆಗಳು












Click it and Unblock the Notifications