ಚಿತ್ರಗಳು : ಕಡೂರಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ರಾಮ ವಾಸ್ತವ್ಯ
ಚಿಕ್ಕಮಗಳೂರು, ನವೆಂಬರ್ 19 : ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕರೆ ಗೊಲ್ಲಹರಟ್ಟಿ ಗ್ರಾಮದಲ್ಲಿ ವಾಸ್ತವ್ಯ ಮಾಡಿದರು.
ಶನಿವಾರ ಗ್ರಾಮ ವಾಸ್ತವ್ಯದ ಬಳಿಕ ಭಾನುವಾರ ಇಂದಿರಾ ಗಾಂಧಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ 'ಇಂದಿರಾ ನಮನ' ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.
ಕಡೂರು ತಾಲೂಕಿನಲ್ಲಿ ಸುಮಾರು 24 ಗೊಲ್ಲರಹಟ್ಟಿಗಳಿವೆ. ಗೊಲ್ಲರ ಸಮುದಾಯದ ಜನಸಂಖ್ಯೆ ಸುಮಾರು 12 ಸಾವಿರವಿದೆ. ಈ ಸಮುದಾಯವೂ ಆರ್ಥಿಕ, ಶೈಕ್ಷಣಿಕ ಮತ್ತುಸಾಮಾಜಿಕವಾಗಿ ಹಿಂದುಳಿದಿದೆ.
ಶುಕ್ರವಾರ ಸಂಜೆ 4 ಗಂಟೆ ವೇಳೆಗೆ ಕಡೂರಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಗೊಲ್ಲರಹಟ್ಟಿಗೆ 6 ಗಂಟೆಯ ವೇಳೆಗೆ ಆಗಮಿಸಿದರು. ಗ್ರಾಮಸ್ಥರ ಜೊತೆ ಸಭೆ ನಡೆಸಿದ ಬಳಿಕ ಜನರೊಂದಿಗೆ ಕುಳಿತು ಊಟ ಸವಿದರು.

ರಂಗಮ್ಮ ರೇವಣ್ಣ ದಂಪತಿ ಮನೆಯಲ್ಲಿ ವಾಸ್ತವ್ಯ
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಲ್ಕರೆ ಗೊಲ್ಲರಹಟ್ಟಿ ಗ್ರಾಮದ ರಂಗಮ್ಮ ರೇವಣ್ಣ ದಂಪತಿ ಮನೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ರಾಮ ವಾಸ್ತವ್ಯ ಮಾಡಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಮನವಿ
ಮಹಿಳೆ ಋತುಮತಿಯಾದಾಗ ಮನೆಯಿಂದ ಹೊರಗೆ ಗುಡಿಸಿಲಿನಲ್ಲಿ ಇಡುವುದು. ಹೆರಿಗೆ ನಂತರ ಬಾಣಂತಿಯನ್ನು ಮನೆಯಿಂದ ಹೊರಗೆ ಇಡುವ ಪದ್ಧತಿಗಳು ಈ ಸಮುದಾಯದಲ್ಲಿ ಜೀವಂತವಾಗಿದೆ. ಇಂತಹ ಪದ್ಧತಿಗಳನ್ನು ನಿಲ್ಲಿಸಿ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಜನರಿಗೆ ಮನವಿ ಮಾಡಿದರು.

ಭಾನುವಾರ ವಿವಿಧ ಕಾರ್ಯಕ್ರಮದಲ್ಲಿ ಭಾಗಿ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಮರುಜನ್ಮ ನೀಡಿದ ಜಿಲ್ಲೆಯಿಂದಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗ್ರಾಮ ವಾಸ್ತವ್ಯ ಆರಂಭಿಸಿದ್ದಾರೆ. ಇಂದು ಜಿಲ್ಲೆಯಲ್ಲಿ ನಡೆದ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಿದ್ದಾರೆ.

ಪ್ರತಿ ಜಿಲ್ಲೆಯಲ್ಲೂ ಗ್ರಾಮ ವಾಸ್ತವ್ಯ
ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಚಿಕ್ಕಮಗಳೂರಿನಿಂದ ಅವರು ಗ್ರಾಮ ವಾಸ್ತವ್ಯವನ್ನು ಆರಂಭಿಸಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications