Gruha Lakshmi Scheme: 5 ತಿಂಗಳ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ? ಸದನಕ್ಕೆ ಮಾಹಿತಿ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ, ಡಿಸೆಂಬರ್ 10: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 2000 ಹಣ ನೀಡುವ ವಿಚಾರದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಗೊಂದಲಗಳಿಗೆ ಕಾರಣವಾಗಿದೆ. ಇದೀಗ ಮಹಿಳೆಯವರಿಗೆ ಪ್ರತಿ ತಿಂಗಳು ಹಣ ಜಮಾ ಆಗುತ್ತಿಲ್ಲ ಎಂದು ಮಹಿಳೆಯರು ಹಾಗೂ ವಿಪಕ್ಷಗಳು ಆಕ್ರೋಶ ಹೊರ ಹಾಕಿದ್ದು, ಸದನದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರ ಶಾಸಕ ಮಹೇಶ್ ಟೆಂಗಿನಕಾಯಿ ಅವರು 5 ತಿಂಗಳ ಗೃಹ ಲಕ್ಷ್ಮಿ ಹಣ ಬಂದಿಲ್ಲ. ಫೆಬ್ರವರಿ.. ಮಾರ್ಚ್.. ಸೆಪ್ಟೆಂಬರ್. ಅಕ್ಟೋಬರ್.. ನವಂಬರ್ ತಿಂಗಳ ಗೃಹ ಲಕ್ಷ್ಮಿ ಹಣ ಯಾವಾಗ ಬರುತ್ತೆ ಎಂದು ಗಮನ ಸೆಳೆಯುವ ಸೂಚನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರು, ವಿಕಲಚೇತನರ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಧಾನ ಸಭೆಗೆ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರದಿಂದ ಆಗಸ್ಟ್-2025 ವರೆಗಿನ ಗೃಹಲಕ್ಷ್ಮಿ ಕಂತುಗಳನ್ನು ಫಲಾನುಭವಿಗಳ ಖಾತೆ ಜಮೆ ಮಾಡಲಾಗಿದೆ. ಯೋಜನೆ ಆರಂಭವಾದಗಿನಿಂದ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ರೂ.54,000 ಕೋಟಿ ಗೃಹಲಕ್ಷ್ಮಿ ಹಣ ಸಂದಾಯವಾಗಿದೆ. ಒಟ್ಟು 23 ಕಂತುಗಳಲ್ಲಿ ನೊಂದಣಿಯಾದ ಪ್ರತಿ ಕುಟುಂಬದ ಯಜಮಾನಿಗೆ ತಲಾ ರೂ.46,000 ಲಭಿಸಿದೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ವಿಶ್ವದಲ್ಲಿಯೇ ವಿನೂತನ ಎನಿಸಿ ಗುರುತರ ಹೆಜ್ಜೆ ಇಟ್ಟಿದೆ. ಬೇರೆ ರಾಜ್ಯಗಳು ಕೂಡ ಗೃಹಲಕ್ಷ್ಮಿ ಯೋಜನೆ ಮಾದರಿಯಿಂದ ಪ್ರೇರಣೆ ಪಡೆದು ಯೋಜನೆ ರೂಪಿಸುತ್ತಿವೆ. ಸರ್ಕಾರ ಸ್ಪಷ್ಟತೆ ಹಾಗೂ ಬದ್ದತೆಯೊಂದಿಗೆ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಫಲಾನುಭವಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣದಿಂದ ಇಲಾಖೆಯಲ್ಲಿ ಸಕಾಲದಲ್ಲಿ ಕಡತವನ್ನು ಹಣಕಾಸು ಇಲಾಖೆ ಕಳುಹಿಸಿಕೊಡಲಾಗುತ್ತಿದೆ.
ಈ ಹಿಂದೆ ಇಲಾಖೆಯಿಂದಲೇ ಫಲಾನುಭವಿಗಳ ಖಾತೆ ರೂ.2000 ಹಣ ಜಮೆ ಮಾಡಲಾಗುತ್ತಿತ್ತು. ಸದ್ಯ ತಾಲ್ಲೂಕು ಪಂಚಾಯಿತಿಗಳಿಂದ ಫಲಾನುಭವಿಗಳ ಖಾತೆ ಹಣ ಜಮೆ ಮಾಡಲು ಬದಲಾವಣೆ ಮಾಡಿದ್ದರಿಂದ ಕೆಲ ತಿಂಗಳ ಕಂತು ಪಾವತಿಯಾಗುವಲ್ಲಿ ವಿಳಂಬವಾಗಿದೆ. ಕೂಡಲೇ ಆಗಸ್ಟ್ ನಂತರ ಕಂತುಗಳ ಪಾವತಿಗೂ ಕ್ರಮ ವಹಿಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಆರಂಭದಲ್ಲಿ ಯೋಜನೆಯನ್ನು ನಿಲ್ಲಿಸಲು ಹೇಳಿದವರು ನೀವು, ಯೋಜನೆ ಕುರಿತು ಹಾದಿ ಬೀದಿಯಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿಯವರಿಗೆ ಈಗ ಏಕಾಏಕಿ ಕಾಳಜಿ, ಪ್ರೀತಿ ಬಂತಾ ಎಂದು ಪ್ರಶ್ನಿಸಿದ ಸಚಿವರು, ನಮ್ಮದೇ ಯೋಜನೆ ಕಾಪಿ ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ ಲಾಡ್ಲಿ ಬೆಹೆನ್ ಯೋಜನೆ ಕಥೆ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಬೇರೆ ರಾಜ್ಯದ ಬಗ್ಗೆ ಮಾತಾನಾಡಬಾರದು ಎಂದು ಸುಮ್ಮನಿದ್ದೆ. ನಾವು ಒಂದೇ ಒಂದು ಅಪಾದನೆ ಬರದಂತೆ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications