CT ರವಿ ಆಕ್ಷೇಪಾರ್ಹ ಪದ ಬಳಸಿದ ಪ್ರಕರಣ: 'ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೂ ದೂರು ನೀಡಿಲ್ಲ'
ಹುಬ್ಬಳ್ಳಿ, ಜನವರಿ 02: ವಿಧಾನ ಪರಿಷತ್ನಲ್ಲಿ ಸಿ.ಟಿ.ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಆರೋಪಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೆ ಯಾವುದೇ ದೂರು ಅಥವಾ ಸಾಕ್ಷ್ಯಾಧಾರ ನನಗೆ ನೀಡಿಲ್ಲ. ದೂರು ನೀಡಿದರೆ ಮುಂದಿನ ಕ್ರಮ ಕೈಗೊಳ್ಳುವೆ' ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಲ ದೃಶ್ಯ ಮಾಧ್ಯಮಗಳಲ್ಲಿ ವಿಡಿಯೋ ಪ್ರಸಾರ ಆಗಿದೆ ಎನ್ನಲಾಗಿದೆ. ಈ ವಿಡಿಯೋ ನನಗೆ ಸಿಕ್ಕಿಲ್ಲ. ವಿಡಿಯೋ ಅಥವಾ ಆಡಿಯೋ ಸಾಕ್ಷ್ಯಗಳನ್ನು ನಮಗೆ ನೀಡಿದರೆ ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಅವುಗಳ ನೈಜತೆ ಪರಿಶೀಲಿಸಲಾಗುವುದು ಎಂದರು.

ಪ್ರಯೋಗಾಲಯದ ವರದಿ ಆಧಾರದ ಮೇಲೆ ಪ್ರಕರಣವನ್ನು ಎಥಿಕ್ಸ್ ಸಮಿತಿಗೆ ನೀಡಬೇಕೇ, ಬೇಡವೇ ಎಂಬುದನ್ನು ತೀರ್ಮಾನಿಸುವೆ. ನನ್ನ ಮೇಲೆ ಬಿಜೆಪಿ ಅಥವಾ ಕಾಂಗ್ರೆಸ್ನ ಒತ್ತಡ ಇಲ್ಲ. ನಾನು ಯಾರ ಮಾತೂ ಕೇಳಲ್ಲ ಎಂದರು.
ಘಟನೆ ನಡೆದ ದಿನ ಡಿಸೆಂಬರ್ 19ರಂದು ಮಧ್ಯಾಹ್ನ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ವಾಗ್ವಾದ ಜೋರಾಗಿತ್ತು. ಆಗ ಕಲಾಪ ಮುಂದೂಡಿ, ನಾನು ಸದನದಿಂದ ಹೊರಬಂದಿದ್ದೆ. ಆ ನಂತರವೂ ಸದಸ್ಯರ ವಾಗ್ವಾದ ಮುಂದುವರಿದಿತ್ತು. ಆ ವೇಳೆ ಸಿ.ಟಿ. ರವಿ ತಮ್ಮ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಘಟನೆಯ ವಿವರವನ್ನು ನನಗೆ ನೀಡಿದರು. ಕಲಾಪ ಮುಂದೂಡಿದ್ದರಿಂದ ಆಡಿಯೋ- ವಿಡಿಯೋ ರೆಕಾರ್ಡಿಂಗ್ ಸ್ಥಗಿತ ಆಗಿದ್ದವು. ಹೀಗಾಗಿ ಈ ಘಟನೆಗೆ ನಮ್ಮಲ್ಲಿ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಅವರು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಿ.ಟಿ.ರವಿ ಕೂಡ ದೂರು ದಾಖಲಿಸಿದ್ದಾರೆ. ಪ್ರಕರಣವನ್ನು ಸರ್ಕಾರವು ಸಿಐಡಿಗೆ ನೀಡಿದೆ. ಸ್ಥಳದ ಪಂಚನಾಮೆ ನಡೆಸಲು ಸಿಐಡಿ ಅಧಿಕಾರಗಳು ನನ್ನ ಅನುಮತಿ ಕೇಳಿದ್ದಾರೆ. ಯಾವ ರೀತಿ ಪಂಚನಾಮೆ ನಡೆಸುತ್ತಾರೆ ಎನ್ನುವ ಬಗ್ಗೆ ವಿವರಿಸಬೇಕು. ನಾನು ಈವರೆಗೆ ಅನುಮತಿ ನೀಡಿಲ್ಲ ಎಂದರು.
ಸುದೀರ್ಘ ಇತಿಹಾಸವುಳ್ಳ ರಾಜ್ಯದ ವಿಧಾನ ಪರಿಷತ್ ಅಂಗಳದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ನಾನು 45 ವರ್ಷಗಳಿಂದ ಸದನದಲ್ಲಿದ್ದೇನೆ. ಇಂತಹ ಘಟನೆ ಬಗ್ಗೆ ಕೇಳಿಲ್ಲ, ನೋಡಿಲ್ಲ. ಈ ಪ್ರಕರಣಕ್ಕೆ ಅಂತ್ಯ ಹಾಡಲು ಸಿದ್ಧನಿದ್ದೇನೆ. ಲಕ್ಷ್ಮೀ ಮತ್ತು ಸಿ.ಟಿ. ರವಿ ಒಪ್ಪಿದರೆ ಇಬ್ಬರನ್ನೂ ಕರೆಸಿ ಮಾತನಾಡಿ, ಪ್ರಕರಣ ಕೊನೆಗಾಣಿಸಲು ಪ್ರಯತ್ನಿಸುವೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications