ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಂಗಳೂರು, ಅಕ್ಟೋಬರ್ 5: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹಾಗೂ ಅವರ ಆಪ್ತರಿಗೆ ಸೇರಿದ ಹಲವು ನಿವಾಸಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
Recommended Video
ರಾಜ್ಯದ ವಿಧಾನಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಯಾರಿಗಳು ನಡೆಯುತ್ತಿರುವ ಬೆನ್ನಲ್ಲೇ ಈ ದಾಳಿ ನಡೆದಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ದ್ವೇಷದ ಕಾರಣ ಆಡಳಿತಾರೂಢ ಬಿಜೆಪಿ ಸರ್ಕಾರ ಈ ದಾಲಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.
ಈ ದಾಳಿ ರಾಜಕೀಯ ಪ್ರೇರಿತ. ಉಪ ಚುನಾವಣೆಗೆ ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸುತ್ತಿರುವ ವೇಳೆಯೇ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ಅನ್ನು ಮುಗಿಸಬೇಕೆಂಬ ಉದ್ದೇಶದಿಂದ ಈ ರೀತಿ ದಾಳಿಗಳ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ದೇಶದ ಜನತೆ ಇದನ್ನು ಗಮನಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಮುಂದೆ ಓದಿ.

ಚುನಾವಣೆ ವೇಳೆ ಮೊದಲ ಸಲವಲ್ಲ
'ಇದು ರಾಜಕೀಯ ಪ್ರೇರಿತ ದಾಳಿ, ಇದನ್ನು ಖಂಡಿಸುತ್ತೇನೆ. ನಮ್ಮ ನಾಯಕರು ಚುನಾವಣೆಗೆ ಸಿದ್ಧತೆ ನಡೆಸಿದ್ದರು. ಚುನಾವಣೆ ಸಂದರ್ಭದಲ್ಲಿ ಸಿಬಿಐ ದಾಳಿ ನಡೆಸುವುದು ಇದೇ ಮೊದಲ ಸಲವೇನಲ್ಲ. ಈ ಹಿಂದೆಯೂ ಚುನಾವಣೆ ಸಂದರ್ಭದಲ್ಲಿಯೇ ದಾಳಿ ನಡೆದಿದೆ' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಯಾರಿಗೂ ಮುಗಿಸಲು ಸಾಧ್ಯವಿಲ್ಲ
ಒಳ್ಳೆ ಟೈಂ ನೋಡಿಕೊಂಡು ಸಿಬಿಐ ದಾಳಿ ಮಾಡಿದ್ದಾರೆ. ಇಂತಹ ದಾಳಿಗಳಿಂದ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಅನ್ನು ಮುಗಿಸುತ್ತೇವೆ ಎಂದು ಬಿಜೆಪಿಯವರು ಅಂದುಕೊಂಡರೆ, ಬಿಜೆಪಿಯನ್ನು ಮುಗಿಸುತ್ತೇವೆ ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಸಾಧ್ಯವಾಗುವುದಿಲ್ಲ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾರನ್ನು ಮುಗಿಸಬೇಕು ಎಂಬುದನ್ನು ಮತದಾರ ತೀರ್ಮಾನಿಸಬೇಕು ಎಂದಿದ್ದಾರೆ.

ಕಳೆದ ವರ್ಷವೇ ಅನುಮತಿ ನೀಡಲಾಗಿತ್ತು
ಒಂದು ತಿಂಗಳಲ್ಲಿ ಉಪ ಚುನಾವಣೆ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಸಿಬಿಐ ತನಿಖೆ ನಡೆಸಲು ಬಿಜೆಪಿ ಸರ್ಕಾರ ಒಂದು ವರ್ಷದ ಹಿಂದೆಯೇ ಅನುಮತಿ ನೀಡಿತ್ತು. ಆದರೆ ಆಗಿನಿಂದ ಸುಮ್ಮನಿದ್ದ ಸಿಬಿಐ ಈಗ ಚುನಾವಣೆ ಹೊತ್ತಿಲಲ್ಲಿ ದಾಳಿ ಮಾಡಿದೆ. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಅಹ್ಮದ್ ಪಟೇಲ್ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಕಾನೂನು ಬದ್ಧ ಹೋರಾಟ ಮಾಡುತ್ತೇವೆ
ಕಾಂಗ್ರೆಸ್ ನಾಯಕರನ್ನು ಚುನಾವಣೆ ಸಂದರ್ಭದಲ್ಲಿ ಕಟ್ಟಿಹಾಕುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ನಾಯಕರಿಗೆ ಕಾನೂನಿನ ಮೇಲೆ ನಂಬಿಕೆ ಇದೆ. ಹೀಗಾಗಿ ಕಾನೂನು ಬದ್ಧವಾಗಿಯೇ ಅವರು ಹೋರಾಟ ಮಾಡಲಿದ್ದಾರೆ. ಚುನಾವಣೆಯಲ್ಲಿ ಸೋಲಿನ ಭಯದಿಂದ ಈ ದಾಳಿ ನಡೆಸಲಾಗಿದೆಯೇ ಎಂಬ ಬಗ್ಗೆ ಬಿಜೆಪಿ ಮುಖಂಡರನ್ನೇ ಕೇಳಬೇಕು ಎಂದು ಹೇಳಿದ್ದಾರೆ.
-
ಉಪಚುನಾವಣಾ ಅಖಾಡ ಸಜ್ಜು: ನಾಳೆ ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಮತದಾನ; ಇಂದು ಮನೆ ಮನೆ ಮತಯಾಚನೆ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್












Click it and Unblock the Notifications