ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 5: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹಾಗೂ ಅವರ ಆಪ್ತರಿಗೆ ಸೇರಿದ ಹಲವು ನಿವಾಸಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಸೋಮವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

Recommended Video

ಇದು ರಾಜಕೀಯ ಪ್ರೇರೇಪಿತ ,by - election ಹತ್ರ ಬಂತಲ್ಲಾ ? | Oneindia Kannada

ರಾಜ್ಯದ ವಿಧಾನಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಯಾರಿಗಳು ನಡೆಯುತ್ತಿರುವ ಬೆನ್ನಲ್ಲೇ ಈ ದಾಳಿ ನಡೆದಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ದ್ವೇಷದ ಕಾರಣ ಆಡಳಿತಾರೂಢ ಬಿಜೆಪಿ ಸರ್ಕಾರ ಈ ದಾಲಿ ನಡೆಸಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಸಿಬಿಐ ದಾಳಿಯ ಬಗ್ಗೆ ಡಿಕೆ ಶಿವಕುಮಾರ್‌ಗೆ ಮೊದಲೇ ಸುಳಿವು ಇತ್ತೇ?ಸಿಬಿಐ ದಾಳಿಯ ಬಗ್ಗೆ ಡಿಕೆ ಶಿವಕುಮಾರ್‌ಗೆ ಮೊದಲೇ ಸುಳಿವು ಇತ್ತೇ?

ಈ ದಾಳಿ ರಾಜಕೀಯ ಪ್ರೇರಿತ. ಉಪ ಚುನಾವಣೆಗೆ ಕಾಂಗ್ರೆಸ್ ನಾಯಕರು ಸಿದ್ಧತೆ ನಡೆಸುತ್ತಿರುವ ವೇಳೆಯೇ ಉದ್ದೇಶಪೂರ್ವಕವಾಗಿ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ಅನ್ನು ಮುಗಿಸಬೇಕೆಂಬ ಉದ್ದೇಶದಿಂದ ಈ ರೀತಿ ದಾಳಿಗಳ ಪ್ರಯತ್ನ ನಡೆಸಲಾಗಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ದೇಶದ ಜನತೆ ಇದನ್ನು ಗಮನಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಮುಂದೆ ಓದಿ.

ಚುನಾವಣೆ ವೇಳೆ ಮೊದಲ ಸಲವಲ್ಲ

ಚುನಾವಣೆ ವೇಳೆ ಮೊದಲ ಸಲವಲ್ಲ

'ಇದು ರಾಜಕೀಯ ಪ್ರೇರಿತ ದಾಳಿ, ಇದನ್ನು ಖಂಡಿಸುತ್ತೇನೆ. ನಮ್ಮ ನಾಯಕರು ಚುನಾವಣೆಗೆ ಸಿದ್ಧತೆ ನಡೆಸಿದ್ದರು. ಚುನಾವಣೆ ಸಂದರ್ಭದಲ್ಲಿ ಸಿಬಿಐ ದಾಳಿ ನಡೆಸುವುದು ಇದೇ ಮೊದಲ ಸಲವೇನಲ್ಲ. ಈ ಹಿಂದೆಯೂ ಚುನಾವಣೆ ಸಂದರ್ಭದಲ್ಲಿಯೇ ದಾಳಿ ನಡೆದಿದೆ' ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಯಾರಿಗೂ ಮುಗಿಸಲು ಸಾಧ್ಯವಿಲ್ಲ

ಯಾರಿಗೂ ಮುಗಿಸಲು ಸಾಧ್ಯವಿಲ್ಲ

ಒಳ್ಳೆ ಟೈಂ ನೋಡಿಕೊಂಡು ಸಿಬಿಐ ದಾಳಿ ಮಾಡಿದ್ದಾರೆ. ಇಂತಹ ದಾಳಿಗಳಿಂದ ಕಾಂಗ್ರೆಸ್ ಮುಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಅನ್ನು ಮುಗಿಸುತ್ತೇವೆ ಎಂದು ಬಿಜೆಪಿಯವರು ಅಂದುಕೊಂಡರೆ, ಬಿಜೆಪಿಯನ್ನು ಮುಗಿಸುತ್ತೇವೆ ಎಂದು ಕಾಂಗ್ರೆಸ್ ಅಂದುಕೊಂಡರೆ ಅದು ಸಾಧ್ಯವಾಗುವುದಿಲ್ಲ. ರಾಜ್ಯದ ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಯಾರನ್ನು ಮುಗಿಸಬೇಕು ಎಂಬುದನ್ನು ಮತದಾರ ತೀರ್ಮಾನಿಸಬೇಕು ಎಂದಿದ್ದಾರೆ.

ಹೈಕೋರ್ಟ್ ತಡೆಯಿದ್ದರೂ ದಾಳಿ: ಡಿಕೆ ಶಿವಕುಮಾರ್ ಪರ ವಕೀಲ ಆರೋಪಹೈಕೋರ್ಟ್ ತಡೆಯಿದ್ದರೂ ದಾಳಿ: ಡಿಕೆ ಶಿವಕುಮಾರ್ ಪರ ವಕೀಲ ಆರೋಪ

ಕಳೆದ ವರ್ಷವೇ ಅನುಮತಿ ನೀಡಲಾಗಿತ್ತು

ಕಳೆದ ವರ್ಷವೇ ಅನುಮತಿ ನೀಡಲಾಗಿತ್ತು

ಒಂದು ತಿಂಗಳಲ್ಲಿ ಉಪ ಚುನಾವಣೆ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಸಿಬಿಐ ತನಿಖೆ ನಡೆಸಲು ಬಿಜೆಪಿ ಸರ್ಕಾರ ಒಂದು ವರ್ಷದ ಹಿಂದೆಯೇ ಅನುಮತಿ ನೀಡಿತ್ತು. ಆದರೆ ಆಗಿನಿಂದ ಸುಮ್ಮನಿದ್ದ ಸಿಬಿಐ ಈಗ ಚುನಾವಣೆ ಹೊತ್ತಿಲಲ್ಲಿ ದಾಳಿ ಮಾಡಿದೆ. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಅಹ್ಮದ್ ಪಟೇಲ್ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಕಾನೂನು ಬದ್ಧ ಹೋರಾಟ ಮಾಡುತ್ತೇವೆ

ಕಾನೂನು ಬದ್ಧ ಹೋರಾಟ ಮಾಡುತ್ತೇವೆ

ಕಾಂಗ್ರೆಸ್ ನಾಯಕರನ್ನು ಚುನಾವಣೆ ಸಂದರ್ಭದಲ್ಲಿ ಕಟ್ಟಿಹಾಕುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ನಾಯಕರಿಗೆ ಕಾನೂನಿನ ಮೇಲೆ ನಂಬಿಕೆ ಇದೆ. ಹೀಗಾಗಿ ಕಾನೂನು ಬದ್ಧವಾಗಿಯೇ ಅವರು ಹೋರಾಟ ಮಾಡಲಿದ್ದಾರೆ. ಚುನಾವಣೆಯಲ್ಲಿ ಸೋಲಿನ ಭಯದಿಂದ ಈ ದಾಳಿ ನಡೆಸಲಾಗಿದೆಯೇ ಎಂಬ ಬಗ್ಗೆ ಬಿಜೆಪಿ ಮುಖಂಡರನ್ನೇ ಕೇಳಬೇಕು ಎಂದು ಹೇಳಿದ್ದಾರೆ.

English summary
KPCC Spokesperson Lakshmi Hebbalkar condemn the CBI raid on DK Shivakumar's house during by-election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X