ಭೂ ಸ್ವಾಧೀನ ಕಾಯ್ದೆ : ತಿರುಗೇಟು ಕೊಡಲು ಬಿಜೆಪಿ ಸಿದ್ಧ
ಬೆಂಗಳೂರು, ಏ.4 : 2013ರ ಭೂ ಸ್ವಾಧೀನ ಮತ್ತು ಪುನರ್ವಸತಿ ಕಾಯಿದೆಗೆ ತಿದ್ದುಪಡಿ ತರಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಆರಂಭಿಸಿರುವ ಕಾಂಗ್ರೆಸ್ಗೆ ತಿರುಗೇಟು ನೀಡಲು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾರ್ಯಕರ್ತರು ಮತ್ತು ನಾಯಕರು ಗ್ರಾಮಗಳಿಗೆ ಭೇಟಿ ನೀಡಿ ಈ ಕಾಯ್ದೆ ಬಗ್ಗೆ ಜನರಿಗೆ ಮಾಹಿತಿ ನೀಡಲಿದ್ದಾರೆ.
ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯ ಎರಡನೇ ದಿನವಾದ ಶನಿವಾರ ಕೇಂದ್ರ ಸಚಿವ ನಿತಿನ್ ಗಡ್ಕರಿ ಈ ಕುರಿತು ಸಭೆಯಲ್ಲಿ ಮಾತನಾಡಿದರು. ಕಾಯ್ದೆ ಬಗ್ಗೆ ಜನರಿಗೆ ಮಾಹಿತಿ ನೀಡಿ ಪ್ರತಿಪಕ್ಷ ಕಾಂಗ್ರೆಸ್ ಈ ಬಗ್ಗೆ ಅಪಪ್ರಚಾರ ಮಾಡದಂತೆ ತಡೆಯಬೇಕು ಎಂದರು. [ಭೂ ಸ್ವಾಧೀನ ಕಾಯ್ದೆ ವಿರುದ್ಧ ಹೋರಾಟ]

ಪಕ್ಷ ಭೂ ಸ್ವಾಧೀನ ಕಾಯ್ದೆ ಬಗ್ಗೆ ಜನರಿಗೆ ಮಾಹಿತಿ ನೀಡಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಕಾರ್ಯಕರ್ತರು ಮತ್ತು ರಾಜ್ಯ ಮಟ್ಟದ ನಾಯಕರು ಪ್ರತಿ ಗ್ರಾಮಗಳಿಗೂ ಹೋಗಿ ಜನರಿಗೆ ಕಾಯ್ದೆ ಬಗ್ಗೆ ಮಾಹಿತಿ ನೀಡಲಿದ್ದಾರೆ. [ಮೋದಿಗೆ ಸದ್ಯದಲ್ಲೇ ಜನ ಪಾಠ ಕಲಿಸಲಿದ್ದಾರೆ]
ಪ್ರತಿಪಕ್ಷ ಕಾಂಗ್ರೆಸ್ ಭೂ ಸ್ವಾಧೀನ ಕಾಯ್ದೆಯ ಬಗ್ಗೆ ಅಪಪ್ರಚಾರವನ್ನು ಮಾಡುತ್ತಾ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಆದ್ದರಿಂದ ತಕ್ಷಣ ಕಾರ್ಯಕರ್ತರು ಈ ಬಗ್ಗೆ ಜನರಿಗೆ ಸರಿಯಾದ ಮಾಹಿತಿಯನ್ನು ತಲುಪಿಸಬೇಕು ಎಂದು ಗಡ್ಕರಿ ಹೇಳಿದರು. ['ಬಿಜೆಪಿ ತಪ್ಪು ಹುಡುಕುವ ಬದಲು ರಾಹುಲ್ ಗಾಂಧಿ ಹುಡುಕಿ']
ರೈತ ವಿರೋಧಿಯಲ್ಲ : ಭೂ ಸ್ವಾಧೀನ ಕಾಯ್ದೆ ಉದ್ಯಮಿಗಳ ಪರವಾಗಿದೆ. ಇದು ರೈತ ವಿರೋಧಿಯಾಗಿದೆ ಎಂಬ ತಪ್ಪು ಸಂದೇಶವನ್ನು ಪ್ರತಿಪಕ್ಷ ಜನರಿಗೆ ತಲುಪಿಸುತ್ತಿದೆ. ಆದ್ದರಿಂದ ರೈತರಿಗೆ ಈ ಕಾಯ್ದೆ ಹೇಗೆ ಸಹಾಯಕವಾಗುತ್ತದೆ ಎಂಬುದನ್ನು ತಿಳಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು.

ದೇಶಾದ್ಯಂತ ಸಮಾವೇಶಗಳು : ಪ್ರತಿರಾಜ್ಯ ಘಟಕಗಳು ಸಮಾವೇಶಗಳನ್ನು ಆಯೋಜಿಸುವ ಮೂಲಕ ಜನರಿಗೆ ಭೂ ಸ್ವಾಧ್ವೀನ ಕಾಯ್ದೆಯ ಬಗ್ಗೆ ಮಾಹಿತಿ ತಲುಪಿಸಲಿವೆ. ಏ.6ರಂದು ಮೊದಲ ಸಮಾವೇಶ ರಾಂಚಿಯಲ್ಲಿ ನಡೆಯಲಿದ್ದು, ನಂತರ ಪ್ರತಿ ರಾಜ್ಯದಲ್ಲಿ ಸಮಾವೇಶ ಆಯೋಜನೆ ಮಾಡಲಾಗುತ್ತದೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ











Click it and Unblock the Notifications