ಕೃಷ್ಣ ಅಳಿಯನ ಕೊರಳಿಗೆ ಸುತ್ತಿಕೊಂಡ ಭೂ ಹಗರಣ

ಹುಬ್ಬಳ್ಳಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಎಸ್.ಆರ್.ಹಿರೇಮಠ್, ಎಸ್.ಎಂ.ಕೃಷ್ಣ ಅಳಿಯ ಮತ್ತು ಉದ್ಯಮಿ ಸಿದ್ದಾರ್ಥ ಅವರು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವುದಕ್ಕೆ ದಾಖಲೆ ಬಿಡುಗಡೆ ಮಾಡಿದರು. ಬೆಂಗಳೂರಿನ ಭೈರಸಂದ್ರದ ಸರ್ವೆ ನಂ 65ರಲ್ಲಿ 5 ಎಕರೆ ಸರ್ಕಾರಿ ಭೂಮಿಯನ್ನು ಪೆಟ್ರೋಲ್ ಬಂಕ್ ನಿರ್ಮಿಸುತ್ತೇವೆ ಎಂದು ಪಡೆದು, ಸಿದ್ದಾರ್ಥ ಅವರು ಕಾಫಿ ಡೇ ಮತ್ತು ಮೆಕ್ ಡೋನಾಲ್ಡ್ ನಿರ್ಮಾಣ ಮಾಡಿದ್ದಾರೆ ಎಂದು ಹಿರೇಮಠ್ ಆರೋಪಿಸಿದರು.
ಸಿದ್ದಾರ್ಥ ಅವರ ಜೊತೆಗೆ ರಾಜ ಭಾಗಮನೆ ಸಹ ಈ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ ಎಂದು ಹಿರೇಮಠ್ ಆರೋಪಿಸಿದ್ದಾರೆ. ಎಸ್.ಎಂ.ಕೃಷ್ಣ ಕರ್ನಾಟಕದ ಸಿಎಂ ಆಗಿದ್ದಾಗ ಈ ಭೂ ಒತ್ತುವರಿ ನಡೆದಿದೆ. ಅಂದಿನ ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸಹ ಇದಕ್ಕೆ ಸಹಕಾರ ನೀಡಿದ್ದಾರೆ ಎಂದು ಹಿರೇಮಠ್ ಗಂಭೀರ ಆರೋಪ ಮಾಡಿದ್ದಾರೆ.
ಅಂದು ಬಿಡಿಎ ಆಯುಕ್ತರಾಗಿದ್ದ ಜೈಕರ್ ಜರೋಮ್ ಸಹ ಈ ಒತ್ತುವರಿಗೆ ಸಹಾಯ ಮಾಡಿದ್ದು, ಅವರು ಎಸ್.ಎಂ.ಕೃಷ್ಣ ಅವರಿಗೆ ಆಪ್ತರಾಗಿದ್ದರು. ಇದಕ್ಕೆ ಪ್ರತಿಫಲವಾಗಿ ಕೃಷ್ಣ ಅವರು ವಿದೇಶಾಂಗ ಸಚಿವರಾದ ನಂತರ ಜೈರೋಮ್ ಅವರನ್ನು ವಿವಿಧ ದೇಶಗಳಿಗೆ ರಾಯಭಾರಿಯಾಗಿ ಕಳಿಸಿದ್ದರು ಎಂದು ಹಿರೇಮಠ್ ತಿಳಿಸಿದರು.
ಸರ್ಕಾರ ಈ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಾರ್ಥ ಅವರು ಭೂ ಒತ್ತುವರಿ ಮಾಡಿಕೊಂಡಿರುವುದಕ್ಕೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹಿರೇಮಠ್ ಹೇಳಿದ್ದರು ಅದರಂತೆ ದಾಖಲೆ ನೀಡಿ, ಹೋರಾಟ ಆರಂಭಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications