ಕೃಷ್ಣ ಅಳಿಯನ ಕೊರಳಿಗೆ ಸುತ್ತಿಕೊಂಡ ಭೂ ಹಗರಣ

ಹುಬ್ಬಳ್ಳಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ ಎಸ್.ಆರ್.ಹಿರೇಮಠ್, ಎಸ್.ಎಂ.ಕೃಷ್ಣ ಅಳಿಯ ಮತ್ತು ಉದ್ಯಮಿ ಸಿದ್ದಾರ್ಥ ಅವರು ಸರ್ಕಾರಿ ಭೂಮಿ ಒತ್ತುವರಿ ಮಾಡಿಕೊಂಡಿರುವುದಕ್ಕೆ ದಾಖಲೆ ಬಿಡುಗಡೆ ಮಾಡಿದರು. ಬೆಂಗಳೂರಿನ ಭೈರಸಂದ್ರದ ಸರ್ವೆ ನಂ 65ರಲ್ಲಿ 5 ಎಕರೆ ಸರ್ಕಾರಿ ಭೂಮಿಯನ್ನು ಪೆಟ್ರೋಲ್ ಬಂಕ್ ನಿರ್ಮಿಸುತ್ತೇವೆ ಎಂದು ಪಡೆದು, ಸಿದ್ದಾರ್ಥ ಅವರು ಕಾಫಿ ಡೇ ಮತ್ತು ಮೆಕ್ ಡೋನಾಲ್ಡ್ ನಿರ್ಮಾಣ ಮಾಡಿದ್ದಾರೆ ಎಂದು ಹಿರೇಮಠ್ ಆರೋಪಿಸಿದರು.
ಸಿದ್ದಾರ್ಥ ಅವರ ಜೊತೆಗೆ ರಾಜ ಭಾಗಮನೆ ಸಹ ಈ ಒತ್ತುವರಿಯಲ್ಲಿ ಪಾಲುದಾರರಾಗಿದ್ದಾರೆ ಎಂದು ಹಿರೇಮಠ್ ಆರೋಪಿಸಿದ್ದಾರೆ. ಎಸ್.ಎಂ.ಕೃಷ್ಣ ಕರ್ನಾಟಕದ ಸಿಎಂ ಆಗಿದ್ದಾಗ ಈ ಭೂ ಒತ್ತುವರಿ ನಡೆದಿದೆ. ಅಂದಿನ ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸಹ ಇದಕ್ಕೆ ಸಹಕಾರ ನೀಡಿದ್ದಾರೆ ಎಂದು ಹಿರೇಮಠ್ ಗಂಭೀರ ಆರೋಪ ಮಾಡಿದ್ದಾರೆ.
ಅಂದು ಬಿಡಿಎ ಆಯುಕ್ತರಾಗಿದ್ದ ಜೈಕರ್ ಜರೋಮ್ ಸಹ ಈ ಒತ್ತುವರಿಗೆ ಸಹಾಯ ಮಾಡಿದ್ದು, ಅವರು ಎಸ್.ಎಂ.ಕೃಷ್ಣ ಅವರಿಗೆ ಆಪ್ತರಾಗಿದ್ದರು. ಇದಕ್ಕೆ ಪ್ರತಿಫಲವಾಗಿ ಕೃಷ್ಣ ಅವರು ವಿದೇಶಾಂಗ ಸಚಿವರಾದ ನಂತರ ಜೈರೋಮ್ ಅವರನ್ನು ವಿವಿಧ ದೇಶಗಳಿಗೆ ರಾಯಭಾರಿಯಾಗಿ ಕಳಿಸಿದ್ದರು ಎಂದು ಹಿರೇಮಠ್ ತಿಳಿಸಿದರು.
ಸರ್ಕಾರ ಈ ಒತ್ತುವರಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಾರ್ಥ ಅವರು ಭೂ ಒತ್ತುವರಿ ಮಾಡಿಕೊಂಡಿರುವುದಕ್ಕೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹಿರೇಮಠ್ ಹೇಳಿದ್ದರು ಅದರಂತೆ ದಾಖಲೆ ನೀಡಿ, ಹೋರಾಟ ಆರಂಭಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications