ತಿಮ್ಮಣ್ಣ ಹಟ್ಟಿ ಶವದ ತುಣುಕಿಗೆ ಅಂತ್ಯ ಸಂಸ್ಕಾರ
ಬಾಗಲಕೋಟೆ, ಆ.11 : ಬಾದಾಮಿ ತಾಲೂಕಿನ ಸೂಳಿಕೇರಿಯಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ತಿಮ್ಮಣ್ಣ ಹಟ್ಟಿಯ ಶವದ ಕೆಲವು ಭಾಗಗಳನ್ನು ಹೊರತೆಗೆದು ಭಾನುವಾರ ರಾತ್ರಿ ಕುಟುಂಬ ವರ್ಗದವರಿಗೆ ಹಸ್ತಾಂತರಿಸಲಾಗಿದ್ದು, ಮುಂಜಾನೆ 2.30ರ ವೇಳೆಗೆ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ಆ.3ರಂದು ಕೊಳವೆ ಬಾವಿಗೆ ಬಿದ್ದಿದ್ದ ತಿಮ್ಮಣ್ಣ ಹಟ್ಟಿಯನ್ನು ಅಲ್ಲಿಯೇ ಮಣ್ಣು ಮಾಡುವುದಕ್ಕೆ ಕಾನೂನಿನ ತೊಡಕಿದೆ. ಆದ್ದರಿಂದ ಇಡೀ ದೇಹವಲ್ಲದಿದ್ದರೂ ದೇಹದ ಭಾಗವನ್ನಾದರೂ ಹೊರತೆಗೆದು ಶವಪರೀಕ್ಷೆ ನಡೆಸಲೇಬೇಕು ಎಂದು ಅಡ್ವೋಕೇಟ್ ಜನರಲ್ ಸಲಹೆ ನೀಡಿರುವುದರಿಂದ ಶವದ ಕೆಲವು ಭಾಗಗಳನ್ನು ಹೊರತೆಗೆಯಲಾಯಿತು.

ಆ.10ರ ಭಾನುವಾರ ಮಧ್ಯಾಹ್ನ ಕೊಳವೆ ಬಾವಿಗೆ ಗಾಳಿ ಹಾಯಿಸಿ ಬಾಲಕನ ದೇಹ ತೆಗೆಯುವ ಕಾರ್ಯಾಚರಣೆ ವಿಫಲವಾಯಿತು. ನಂತರ ಬೋರ್ ವೆಲ್ ರಿಗ್ಗಿಂಗ್ ಮೂಲಕ ಕಾರ್ಯಾಚರಣೆ ನಡೆಸಿ, ಶವದ ಕೆಲವು ಭಾಗಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಜಿಲ್ಲಾಡಳಿತ ಶವವನ್ನು ಹಸ್ತಾಂತರ ಮಾಡಿತು. [ತಿಮ್ಮಣ್ಣ ರಕ್ಷಣೆ ಕಾರ್ಯಾಚರಣೆ ಸಂಪೂರ್ಣ ಸ್ಥಗಿತ]
ಸೋಮವಾರ ಮುಂಜಾನೆ 2.30ರ ಸುಮಾರಿಗೆ ಶವದ ತುಣುಕಿರುವ ಪೆಟ್ಟಿಗೆ ತಿಮ್ಮಣ್ಣ ಹಟ್ಟಿ ಕುಟುಂಬದವರ ಕೈ ಸೇರಿದ ಬಳಿಕ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು. ತಕ್ಷಣವೇ ಜಿಲ್ಲಾಡಳಿತ ಮತ್ತು ತಿಮ್ಮಣ್ಣ ಹಟ್ಟಿ ಕುಟುಂಬದವರು ಸೇರಿ ಜಮೀನಿನ ಪಕ್ಕದಲ್ಲಿರುವ ಬನ್ನಿ ಮರದ ಕೆಳಗೆ ಶವದ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. [ತಿಮ್ಮಣ್ಣ ಹಟ್ಟಿ ಕಾರ್ಯಾಚರಣೆ ವಿವರಗಳು]
ತಿಮ್ಮಣ್ಣನ ತಂದೆ ಹನುಮಂತ ಹಟ್ಟಿ ಶವದ ಚಿತೆಗೆ ಅಗ್ನಿ ಸ್ವರ್ಶ ಮಾಡುವ ಮೂಲಕ ಅಂತಿಮ ಸಂಸ್ಕಾರವನ್ನು ನೆರವೇರಿಸಿದರು. ಇದರಿಂದಾಗಿ ಕಳೆದ 180 ಗಂಟೆಗಳಿಂದ ನಡೆಸುತ್ತಿದ್ದ ಕಾರ್ಯಾಚರಣೆ ಅಂತ್ಯಗೊಂಡಿತು. ಕೊಳವೆ ಬಾವಿಗೆ ಬಿದ್ದ ಬಾಲಕ ತಿಮ್ಮಣ್ಣ ಶವವಾಗಿ ಪತ್ತೆಯಾದ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications