3ದಿನ ಸಿಎಂ ಆಗಿದ್ದ ಯಡಿಯೂರಪ್ಪ, ಮೊದಲು ಮಾಡಿದ್ದ ಕೆಲಸವೇನು ಗೊತ್ತಾ?
ಬೆಂಗಳೂರು, ಜುಲೈ 26: ಒಂದು ವಾರದೊಳಗೆ ಬಹುಮತ ಸಾಬೀತು ಪಡಿಸಬೇಕು ಎನ್ನುವ ರಾಜ್ಯಪಾಲರ ಸೂಚನೆಯ ನಡುವೆ, ಯಡಿಯೂರಪ್ಪ ಆಷಾಢ ಶುಕ್ರವಾರ ಸಂಜೆ ಆರು ಗಂಟೆಗೆ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಳೆದ ವರ್ಷ ಅಸೆಂಬ್ಲಿ ಚುನಾವಣೆ ಮುಗಿದ ನಂತರ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿಗೆ ರಾಜ್ಯಪಾಲರು ಸರಕಾರ ರಚಿಸುವಂತೆ ಆಹ್ವಾನಿಸಿದ್ದರು. ಈಗಿನಂತೆ ಆಗಲೂ, ಬಿಜೆಪಿಗೆ ಸಂಖ್ಯಾಬಲದ ಕೊರತೆಯಿತ್ತು. ಆದರೂ, ಯಡಿಯೂರಪ್ಪ 17.05.2018ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿಯೇ ಬಿಟ್ಟಿದ್ದರು. ಮೂರೇ ದಿನದಲ್ಲಿ ಬಹುಮತ ಸಾಬೀತು ಮಾಡಲು ಸಾಧ್ಯವಾಗದೇ ಬಿಎಸ್ವೈ ರಾಜೀನಾಮೆ ನೀಡಿದ್ದರು.
ಆ ಮೂರು ದಿನಗಳಲ್ಲಿ, ಯಡಿಯೂರಪ್ಪ ಪ್ರತಿಜ್ಞಾವಿಧಿಗೆ ಸಹಿಹಾಕಿದ ಕೂಡಲೇ, ಮೊದಲು ಕೈಹಾಕಿದ್ದು IPS ಅಧಿಕಾರಿಗಳ ವರ್ಗಾವಣೆಗೆ. ಬಹುಮತ ಸಾಬೀತು ಪಡಿಸುವ ಮುನ್ನ, ಯಡಿಯೂರಪ್ಪನವರು ಅದು ಹೇಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆಂದು, ಪೊಲೀಸ್ ವರ್ಗಾವಣೆ ವಿಚಾರ ಭಾರೀ ಚರ್ಚೆ ಮತ್ತು ಟೀಕೆಗೊಳಗಾಗಿತ್ತು.

ಕಳೆದ ವರ್ಷ ಬಿಎಸ್ವೈ ಬಹುಮತ ಸಾಬೀತಿಗೆ ಮುನ್ನ, ಕಾಂಗ್ರೆಸ್ ತಮ್ಮ ಶಾಸಕರನ್ನು ಈಗಲ್ಟನ್ ರೆಸಾರ್ಟಿನಲ್ಲಿ ಇರಿಸಿತ್ತು, ಜೊತೆಗೆ ಭಾರೀ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಬಿಎಸ್ವೈ ಅಧಿಕಾರ ಸ್ವೀಕರಿಸಿದ ಕೂಡಲೇ, ರೆಸಾರ್ಟಿಗೆ ನೀಡಿದ್ದ ಭದ್ರತೆಯನ್ನು ವಾಪಸ್ ಪಡೆದಿದ್ದರು.
ಇದಲ್ಲದೇ, ದಕ್ಷ ಪೊಲೀಸ್ ಅಧಿಕಾರಿಯೆಂದೇ ಹೆಸರಾಗಿದ್ದ ಅಣ್ಣಾಮಲೈ ಅವರು ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರನ್ನು ಚಿಕ್ಕಮಗಳೂರಿನಿಂದ ರಾಮನಗರಕ್ಕೆ ಯಡಿಯೂರಪ್ಪ ವರ್ಗಾವಣೆ ಮಾಡಿದ್ದರು.
ಬೀದರ್ ಜಿಲ್ಲೆಯ ಎಸ್ಪಿಯಾಗಿದ್ದ ಡಿ ದೇವರಾಜ್ ಅವರನ್ನು ಬೆಂಗಳೂರು ಕೇಂದ್ರ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಜೂತೆಗೆ, ಬೆಂಗಳೂರು ಸಿಟಿ ಎಸಿಬಿ ಮುಖ್ಯಸ್ಥರಾಗಿದ್ದ ಎಸ್ ಗಿರೀಶ್ ಅವರನ್ನು ಬೆಂಗಳೂರು ಈಶಾನ್ಯ ಡಿಸಿಪಿಯಾಗಿ ಟ್ರಾನ್ಸ್ ಫರ್ ಮಾಡಲಾಗಿತ್ತು.
ರೈಲ್ವೆ ಎಡಿಜಿಪಿಯಾಗಿದ್ದ ಅಮರ್ ಪಾಂಡೆಯವರನ್ನು ಗುಪ್ತಚರದಳದ ಎಡಿಜಿಪಿ, ಕೆಎಸ್ಆರ್ಪಿ ಡಿಐಜಿಯಾಗಿದ್ದ ಸಂದೀಪ್ ಪಾಟೀಲ್ ಅವರನ್ನು ಗುಪ್ತಚರದಳದ ಡಿಐಜಿಯನ್ನಾಗಿ ಯಡಿಯೂರಪ್ಪ ನೇಮಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದಾಗಿದೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?











Click it and Unblock the Notifications