Get Updates
Get notified of breaking news, exclusive insights, and must-see stories!

ಬೆಂಬಲ ಬೆಲೆ; ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌

ಬೆಂಗಳೂರು, ಮೇ17:ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಶಿವಾನಂದ ಪಾಟೀಲ ಅವರು ಹೇಳಿದರು.

Late season sunflower will be procured soon at support price Says Shivananda Patil

ಕೇಂದ್ರ ಸರ್ಕಾರ ನಾಫೆಡ್‌ ಹಾಗೂ ಎನ್‌ ಸಿ ಸಿ ಎಫ್‌ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿಯನ್ನು ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಿವೆ. ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಟಾಸ್ಕ್‌ ಪೋರ್ಸ್‌ ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿ ಎಕರೆಗೆ ನಾಲ್ಕು ಕ್ವಿಂಟಾಲ್‌ನಂತೆ (ಗರಿಷ್ಠ 20 ಕ್ವಿಂಟಾಲ್‌) ಖರೀದಿ ಮಾಡಲಿದ್ದು, ಖರೀದಿ ಪ್ರಕ್ರಿಯೆ ಆದೇಶ ಹೊರಡಿಸಿದ ದಿನದಿಂದ 90 ದಿನಗಳವರೆಗೆ ನಡೆಯಲಿದೆ. ರೈತರು ತಮ್ಮ ಸಮೀಪದ ಪ್ಯಾಕ್ಸ್‌, ಎಫ್‌ಪಿಒ ಮತ್ತು ಟಿಎಪಿಸಿಎಂಎಸ್‌ಗಳಲ್ಲಿ ರೈತರು ತಮ್ಮ FID ಸಂಖ್ಯೆ ನೀಡಿ ನೋಂದಣಿ ಮಾಡಿಸಿಕೊಂಡು ಸೂರ್ಯಕಾಂತಿ ಮಾರಾಟ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+