ಚಿಕ್ಕಬಳ್ಳಾಪುರ ಬಂದ್: ಲಘು ಲಾಠಿ ಪ್ರಹಾರ, ಉದ್ವಿಘ್ನ ಪರಿಸ್ಥಿತಿ
ಚಿಕ್ಕಬಳ್ಳಾಪುರ, ಡಿಸೆಂಬರ್ 20: ಬೆಳಿಗ್ಗಿನಿಂದ ಶಾಂತಿಯುತವಾಗಿ ನಡೆಯುತ್ತಿದ್ದ ಎಚ್.ಎನ್. ವ್ಯಾಲಿ ಯೋಜನೆ ವಿರೋಧಿಸಿ ಕರೆ ನೀಡಿದ್ದ ಚಿಕ್ಕಬಳ್ಳಾಪುರ ಬಂದ್ ಮಧ್ಯಾಹ್ನದ ವೇಳೆಗೆ ಉದ್ವಿಘ್ನಗೊಂಡಿದೆ.
ಹೆಬ್ಬಾಳ, ನಾಗವಾರ ಕೆರೆಯ ಕಲುಷಿತ ನೀರನ್ನು ಎರಡು ಹಂತದಲ್ಲಿ ಶುದ್ಧೀಕರಣಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಸುವ ಎಚ್.ಎನ್.ವ್ಯಾಲಿ ಯೋಜನೆ ವಿರೋಧಿಸಿ ಚಿಕ್ಕಬಳ್ಳಾಪುರ ಬಂದ್ಗೆ ಕರೆ ನೀಡಲಾಗಿತ್ತು. ಶಾಶ್ವತ ನೀರಾವರಿ ಹೋರಾಟ ಸಮಿತಿ, ರೈತ ಸಂಘಗಳು, ಕನ್ನಡಪರ ಸಂಘಟನೆಗಳು, ಜೆಡಿಎಸ್, ಬಿಜೆಪಿ ಮತ್ತು ವಿವಿಧ ಸಂಘ ಸಂಸ್ಥೆಗಳು ಈ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದವು.

ಆದರೆ ಕಾಂಗ್ರೆಸ್ ಕಾರ್ಯಕರ್ತರು ಬಂದ್ ವಿರೋಧಿಸಿ ನಗರಾದ್ಯಂತ ಬೈಕ್ ರ್ಯಾಲಿ ನಡೆಸಿ ವರ್ತಕರಿಗೆ ಬಾಗಿಲು ತೆಗೆಯುವಂತೆ ಕರೆ ನೀಡುತ್ತ ಸಾಗಿದರು. ಇನ್ನೊಂದೆಡೆ ಬಿಜೆಪಿ ಕಾರ್ಯಕರ್ತರು ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಬೈಕ್ ರ್ಯಾಲಿ ನಡೆಸಿದರು. ಚಳವಳಿಗಾರರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ರ್ಯಾಲಿ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಂತೆ ಪರ-ವಿರೋಧದ ಘೋಷಣೆಗಳು ಮೊಳಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.

ಈ ವೇಳೆ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರ ಮನವೊಲಿಸಿ ಅಲ್ಲಿಂದ ಕಳುಹಿಸಲು ಮುಂದಾದರು. ಈ ವೇಳೆ ಘೋಷಣೆಗಳು ತಾರಕಕ್ಕೆ ಏರಿ, ನೂಕಾಟ ತಳ್ಳಾಟ ಕಾಣಿಸಿಕೊಂಡಿತು. ಪೊಲೀಸರೊಂದಿಗೆ ಪ್ರತಿಭಟನಾಕಾರರು ವಾಗ್ವಾದಕ್ಕೆ ಮುಂದಾದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ಈ ಸಮಯದಲ್ಲಿ ಕೆಲವರಿಗೆ ಗಾಯಗಳಾಗಿವೆ.
ಪರಿಸ್ಥಿತಿ ಸದ್ಯ ಬೂದಿ ಮುಚ್ಚಿದ ಕೆಂಡದಂತಿದ್ದು ಮುಂಜಾಗ್ರತೆ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications