Get Updates
Get notified of breaking news, exclusive insights, and must-see stories!

Land Documents: 100 ಕೋಟಿ ಭೂ ದಾಖಲೆ ಪುಟಗಳು ಡಿಜಿಟಲೀಕರಣ: ಕಂದಾಯ ಸಚಿವ

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಆಸ್ತಿ ದಾಖಲೆಗಳು ಡಿಜಿಟಲೀಕರಣಗೊಂಡಿದ್ದವು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಚಾಲನೆ ನೀಡಲಾಗಿದೆ. ಇದರಿಂದ ನಕಲಿ ಮಾಹಿತಿ ಸೇರಿಸುವುದು ಹಾಗೂ ಸುಳ್ಳು ದಾಖಲೆಗಳನ್ನು ತಡೆಯಲಾಗುತ್ತದೆ. ಇದು ಭವಿಷ್ಯದಲ್ಲಿ ಕೂತಲ್ಲೇ ಗ್ರಾಮೀಣ ಭಾಗದ ಭೂಮಿ ಮಾಲೀಕರು ದಾಖಲೆಗಳ ಖಚಿತ ಮಾಹಿತಿ ಪಡೆಯಬಹುದು. ಭೂಮಿ ಮಾರಾಟ ವೇಳೆ ಉಂಟಾಗುವ ಸಂಭವನೀಯ ತೊಂದರೆ ತಪ್ಪಲಿದೆ.

ರಾಜ್ಯದಲ್ಲಿ ಭೂ ದಾಖಲೆಗಳ ಸಂಪೂರ್ಣ ಡಿಜಿಟಲೀಕರಣ ಮಾಡುವ 'ಭೂ ಸುರಕ್ಷಾ ಯೋಜನೆ' ಭಾಗವಾಗಿ ಬೆಂಗಳೂರು ನಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯಕ್ಕೆ ಕಂದಾಯ ಸಚಿವರು ಚಾಲನೆ ನೀಡಿದರು. ಇದೇ ಯೋಜನೆಯಡಿ ಕಳೆದ ವರ್ಷ ಜನವರಿಯಲ್ಲಿ ತಾಲೂಕು ವ್ಯಾಪ್ತಿಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಕಾರ್ಯ ಆರಂಭಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ವ್ಯಾಪ್ತಿಯ ಭೂ ಎಲ್ಲ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಸುಮಾರು 100 ಕೋಟಿ ದಾಖಲೆಯ ಪುಟಗಳು ಡಿಜಿಟಲ್ ಸ್ವರೂಪ ಪಡೆಯಲಿವೆ.

Launch of digitization of Revenue Department land records of across Karnataka

100 ಕೋಟಿ ಪುಟಗಳು ಸ್ಕ್ಯಾನಿಂಗ್, ಡಿಜಿಟಲ್

ಒಟ್ಟು ಸುಮಾರು 150 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಈಗಾಗಲೇ 100 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ 70 ತಾಲೂಕುಗಳಲ್ಲಿ ಗಣಕೀಕರಣ ರ್ಪೂಗೊಂಡಿದೆ. ಇನ್ನೂ 100 ಕೋಟಿ ದಾಖಲೆಗಳ ಪುಟದಲ್ಲಿ 62 ಲಕ್ಷದಷ್ಟು ದಾಖಲೆಗಳು ಸ್ಕ್ಯಾನಿಂಗ್ ಮಾಡಿ ಡಿಜಿಟಲೀಕರಣಗೊಂಡಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.

ಬಾಕಿ ಉಳಿದ ಭೂ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಆನ್‌ಲೈನ್‌ಗೆ ತರಲು ಮುಂದಿನ 3-4 ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಸಚಿವರು ಗಣಕೀಕರಣಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ರಾಜ್ಯಾದ್ಯಂತ ಎಲ್ಲ ಎಸಿ, ಡಿಸಿ ಕಚೇರಿಗಳ ಕಂದಾಯ ದಾಖಲೆಗಳ ಗಣಕೀಕರಣ ಆರಂಭಿಸಲಾಗಿದೆ.

ನಕಲಿ ದಾಖಲೆ ಸೇರಿಸಲು ಯತ್ನ, ಎಫ್‌ಐಆರ್

ಈ ವೇಳೆ ಲಭ್ಯವಾದ ನಕಲಿ ದಾಖಲೆಗಳನ್ನು ಅಗತ್ಯವೆನಿಸಿದರೆ ವಿಧಿ ವಿಜ್ಞಾನ ಪ್ರಯೋಗಾಗಲಕ್ಕೆ ಕಳುಹಿಸಿ ಪರಿಶೀಲಿಸಲಾಗುತ್ತದೆ. ನೈಜತೆ ಪರಿಶೀಲಿಸಿ, ಸುಳ್ಳು ದಾಖಲೆಗಳ ವಿರುದ್ಧ ಕ್ರಮಕ್ಕೆ ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಗಣಕೀಕರಣ ವೇಳೆ ನಕಲಿ ದಾಖಲೆಗಳನ್ನು ಸ್ಕ್ಯಾನ್ ಮಾಡಿದ್ದ ಆನೇಕಲ್, ದೇವನಹಳ್ಳಿ ಸೇರಿ ವಿವಿಧ ಭಾಗದ 16 ಮಂದಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಮೂಲಕ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಅಕ್ರಮ ತಡೆಯಲು ಮುಂದಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+