ಅ.19 ರಂದು ಬಿಜೆಪಿಯಿಂದ ರಾಜ್ಯಾದ್ಯಂತ ಧರಣಿ
ಬೆಂಗಳೂರು, ಅಕ್ಟೋಬರ್. 18 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ಅಕ್ಟೋಬರ್.19 ಬುಧವಾರ ರಾಜ್ಯಾದ್ಯಂತ ಒಂದು ದಿನದ ಧರಣಿ ನಡೆಸಲಿದೆ.
ಬೆಂಗಳೂರಿನಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಅವರು ಈ ಕುರಿತು ಮಾಹಿತಿ ನೀಡಿದರು. ಬುಧವಾರ ಬೆಳಗ್ಗೆ 11ರಿಂದ ಸಂಜೆ 5 ಗಂಟೆಯ ವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಧರಣಿ ನಡೆಯಲಿದೆ. ಆನಂದರಾವ್ ವೃತ್ತದ ಬಳಿ ಇರುವ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಯಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈ ಧರಣಿಯ ನೇತೃತ್ವ ವಹಿಸಲಿದ್ದಾರೆ ಎಂದರು.
ಅಕ್ಟೋಬರ್ 21ರಂದು ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಬಿಜೆಪಿ ನಾಯಕರು ದೂರು ನೀಡಲಿದ್ದಾರೆ.
'ಮೂಡಬಿದಿರೆಯ ಪ್ರಶಾಂತ್ ಪೂಜಾರಿ, ಮಡಿಕೇರಿಯ ಕುಟ್ಟಪ್ಪ, ಮೈಸೂರಿನ ರಾಜು, ಬೆಂಗಳೂರಿನ ರುದ್ರೇಶ್ ಹತ್ಯೆಗೆ ರಾಜ್ಯ ಸರ್ಕಾರವೇ ಕಾರಣ' ಎಂದು ದೂರಿದ ಅರವಿಂದ ಲಿಂಬಾವಳಿ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
BJP will organise protests in all district HQ's on 19th condemning the cold blooded murder of Sh.Rudresh,will be participating at Bengaluru
— B.S. Yeddyurappa (@BSYBJP) October 17, 2016
I urge the state government to give Rs 25 lakh to the family of Sri. Rudresh who has been killed: Su Sri. @ShobhaBJP #JusticeforRudresh
— BJP Karnataka (@BJP4Karnataka) October 18, 2016
Dharnas will be held in all the district headquarters tomorrow against the collapse of law and order in the state. #JusticeforRudresh
— BJP Karnataka (@BJP4Karnataka) October 18, 2016
ಈ ವೇಳೆ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು, 'ಆರ್ ಎಸ್ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಹತ್ಯೆಯ ಹಿಂದೆ ಪಾಪ್ಯುಲರ್ ಫ್ರಂಟ್ ಮತ್ತು ಕರ್ನಾಟಕ ಪೋರಂ ಫಾರ್ ಡಿಗ್ನಿಟಿ ಸಂಘಟನೆಗಳ ಕೈವಾಡವಿದೆ.
ಆದ್ದರಿಂದ, ಎರಡೂ ಸಂಘಟನೆಗಳನ್ನು ನಿಷೇಧಿಸಬೇಕು' ಎಂದು ಒತ್ತಾಯಿಸಿದರು. ಹಾಗೂ ರದ್ರೇಶ್ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರುಗಳನ್ನು ನೀಡಬೇಕೆಂದು ಆಗ್ರಹಿಸಿದರು.