ಶಕ್ತಿ ಯೋಜನೆ ವಿರುದ್ಧ ಹೈಕೋರ್ಟ್ ಗೆ PIL ಸಲ್ಲಿಸಿದ ಕಾನೂನು ವಿದ್ಯಾರ್ಥಿಗಳು, ಕಾರಣ?
ಬೆಂಗಳೂರು, ಜುಲೈ 31: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರು ಸಂಚಾರ ಮಾಡುತ್ತಿದ್ದಾರೆ. ಆದರೆ ಈ ಯೋಜನೆ ವಿರುದ್ಧವಾಗಿ ಇದೀಗ ಕಾನೂನು ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕಾಂಗ್ರೆಸ್ ಒಂದೊಂದೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುತ್ತಿವೆ. ಕಳೆದ ಜೂನ್ 11ರಂದು ಶಕ್ತಿಯೋಜನೆ ಜಾರಿ ಆಯಿತು ಅಂದಿನಿಂದ ಈ ವರೆಗೆ ಕೋಟ್ಯಾಂತರ ಮಹಿಳೆಯರು ನಿತ್ಯ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ ಬಸ್ಗಾಗಿ ನೂಕು ನುಗ್ಗಲು, ಬಸ್ನಿಂದ ವಿದ್ಯಾರ್ಥಿಗಳು ಬಿದ್ದ್ ಘಟನೆತಗಳು ನಡೆದಿವೆ. ಇತರ ಪ್ರಯಾಣಿಕರಿಗೆ ಬಸ್ ಹತ್ತಲು ಸೂಕ್ತ ವ್ಯವಸ್ಥೆ ಮಾಡಲಾಗಿಲ್ಲ. ಈ ಸಂಬಂಧ ಕ್ರಮ ವಹಿಸುವಂತೆ ಕೋರಿ ಕಾನೂನು ವಿದ್ಯಾರ್ಥಿಗಳು ಹೈಕೋರ್ಟ್ ನಲ್ಲಿ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಶಕ್ತಿ ಯೋಜನೆಯ ಲಾಭ ಜೊತೆಗೆ ಜನರಿ ತೆರಿಗೆ ಹಣದ ನಷ್ಟವು ಅಷ್ಟೇ ಇದೆ. ಮಹಿಳೆಯರ ಉಚಿತ ಬಸ್ ಪ್ರಯಾಣದಿಂದಾಗಿ ವಿದ್ಯಾರ್ಥಿಗಳು, ವಯೋವೃದ್ಧರೂ ಸಮಸ್ಯೆ ಅನುಭವಿಸುವಂತಾಗಿದೆ. ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಪರಿಹಾರ ಕೈಗೊಳ್ಳಬೇಕು ಎಂದು ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸಮಸ್ಯೆ
ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ತಾಮುಂದು, ನಾಮುಂದೆ ಬಸ್ ಏರುತ್ತಿದ್ದಾರೆ. ಇದರಿಂದ ಬಸ್ಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ಸಾರಿಗೆ ಬಸ್ಗಳಲ್ಲಿ ಸೀಟಿಗಾಗಿ ಗಲಾಟೆಗಳು ಸಹ ನಡೆದಿವೆ. ಇದರಿಂದ ಹಿರಿಯ ನಾಗರಿಕರು, ಅನಾರೋಗ್ಯ ಪೀಡಿತರು, ವಿಶೇಷ ಚೇತನರು, ಮಕ್ಕಳು ಬಸ್ ಹತ್ತಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಶಾಲಾ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳು ತಲುಪಲು ಆಗುತ್ತಿಲ್ಲ. ಇನ್ನೂ ಕೆಲವೆಡೆ ತುಂಬಿದ ಬಸ್ ಹತ್ತಲಾಗದೆ ವಿದ್ಯಾರ್ಥಿಗಳು ಬಸ್ ನಿಂದ ಬಿದ್ದ ಘಟನೆ ನಡೆದಿವೆ. ಯೋಜನೆಗೆ ಒಂದೇ ವಾರದಲ್ಲಿ ಜನರ ತೆರಿಗೆ ಹಣದಿಂದ 100 ಕೋಟಿ ರೂ.ಹಣ ವೆಚ್ಚ ಭರಿಸಲಾಗಿದೆ ಎಂದು ಸರ್ಕಾರವೇ ತಿಳಿಸಿದೆ. ಅಂದರೆ ವಾರ್ಷಿಕವಾಗಿ ಇದೊಂದು ಯೋಜನೆಗೆ ಹಣವನ್ನು ಬಳಸಲಾಗಿದೆ. ಅಂದರೆ ವರ್ಷಕ್ಕೆ ಸಾವಿರಾರು ಕೋಟಿ ರೂಪಾಯಿ ಹಣ ಬೇಕಾಗಬಹುದು.
ಟಿಕೆಟ್ ಖರೀದಿಸಿ ಬಸ್ನಲ್ಲಿ ಪ್ರಯಾಣ ಮಾಡುವ ಪುರುಷರಿಗೆ ಎಲ್ಲ ಬಸ್ಗಳಲ್ಲಿ ಶೇಕಡಾ 50ರಷ್ಟು ಆಸನ ಮೀಡಲಿಡಬೇಕು.ಸಾರಿಗೆ ಬಸ್ನಲ್ಲಿ ಮಕ್ಕಳು, ವೃದ್ಧರು ಬಸ್ ಹತ್ತಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಹೈಕೋರ್ಟ್ಗೆ ಸಲ್ಲಿಕೆಯಾದ ಪಿಐಎಸ್ನಲ್ಲಿ ಕೋರಲಾಗಿದೆ.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ











Click it and Unblock the Notifications