"ಲೇ ಅಶೋಕ" ಅಂತ ಕ್ಲಾಸ್ ತೆಗೆದುಕೊಂಡ ಲಾಯರ್ ಜಗದೀಶ್...!
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿಯೊಬ್ಬರಿಗೆ ಕೆಟ್ಟ ಪದ ಬಳಸಿ ಬೈದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದೀಗ ಈ ಸಂಬಂಧ ಬಿಗ್ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ಆರ್. ಅಶೋಕ್ ಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಹೌದು ಇತ್ತೀಚಿನ ದಿನಗಳಲ್ಲಿ ಲಾಯರ್ ಜಗದೀಶ್ ಅವರು ವಿವಿಧ ವಿಷಯಗಳಿಗೆ ರಿಯಾಕ್ಟ್ ಮಾಡುತ್ತಿದ್ದಾರೆ. ಇದರ ನಡುವೆ ಸಿಟಿ ರವಿ ಸೇರಿದಂತೆ ವಿವಿಧ ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದ್ದಾರೆ. ಲೇ ಅಶೋಕ ಅಂತ ಏಕವಚನದಲ್ಲೇ ಮಾತು ಶುರು ಮಾಡಿರುವ ಲಾಯರ್ ಜಗದೀಶ್ ಅವರು ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ್ದಾರೆ. ಯಾರ ಬಗ್ಗೆ ಏನಂತ ಬೈದಿದ್ದಾರೆ ನೋಡೋಣ ಬನ್ನಿ..

ಲಾಯರ್ ಜಗದೀಶ್ ಬಿಜೆಪಿ ನಾಯಕರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದೀಗ ಲೇ ಅಶೋಕ ಅಂತಲೇ ಮಾತು ಶುರು ಮಾಡಿರುವ ಅವರು ನೀವು ವಿರೋಧ ಪಕ್ಷದ ನಾಯಕರಾದರೆ. ಯಾರ ಬಗ್ಗೆ ಏನು ಬೇಕಾದರೂ ಮಾತನಾಡಬಹುದಾ ಅಂತ ಕೇಳಿದ್ದಾರೆ. ಪ್ರತಿಭಟನೆ ಮಾಡುವಾಗ ಪೊಲೀಸ್ ಅಧಿಕಾರಿಗಳು ಬನ್ನಿ ಸರ್ ಅಂತ ಮನವಿ ಮಾಡಿದರೆ.
ಏ ನಾನು ಯಾರು ಗೊತ್ತೇನೋ ಅಂತ .. ಆಪೋಸಿಷನ್ ಲೀಡರ್ ನಾನು.. ಅಂತೇಳಿ ಪೊಲೀಸ್ ಅಧಿಕಾರಿಯ ಮೇಲೆ ಎಗರಾಡಿ, ಕೆಟ್ಟದಾಗಿ ಬೈಯಲಾಗಿದೆ. ಲೇ ಅಶೋಕ ಸಿಟಿ ರವಿ ನೋಡಿದರೆ, ಸಚಿವೆಗೆ ಕೆಟ್ಟ ಪದ ಬಳಸಿ ಬೈದಿದ್ದಾನೆ. ಇದೇ ನಾ ನಿಮ್ಮ ಸಂಸ್ಕಾರ, ಲೇ ಅಶೋಕಾ... ನೀನು ವಿರೋಧ ಪಕ್ಷದ ನಾಯಕನಾದರೆ ಏನುಬೇಕಾದರೂ ಮಾತನಾಡಬಹುದಾ ಅಂತ ಪ್ರಶ್ನೆ ಮಾಡಿದ್ದಾರೆ.

ಕೊಡಿಗೆಹಳ್ಳಿಯಲ್ಲಿ ನಿನ್ನ ಬಾಮೈದರು ಚಕ್ರಪಾಣಿಯೊಂದಿಗೆ ಸೇರಿಕೊಂಡು ಟ್ರಸ್ಟ್ ಮಾಡಿಕೊಂಡಿದ್ದಾರೆ. ಅಲ್ವೋ ಆ ಬಿಜೆಪಿ ಅವರು ನಿನ್ನನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಅಂತ ಬಾಯಿಗೆ ಬಂದತೆ.. ನಾಲಿಗೆ ಇದೆ ಅಂತ ಹೆಂಗಂದರೆ ಹಂಗೆ ಮಾತನಾಡೋದಾ. ಇದೇನಾ ನೀನು ಕಲಿತಿರುವ ಸಂಸ್ಕಾರ ಅಂತ ಪ್ರಶ್ನೆ ಮಾಡಲಾಗಿದೆ.
ಇದೇನಾ ತುರ್ತು ಪರಿಸ್ಥಿತಿಯಲ್ಲಿ ಪೊಲೀಸರು ಎತ್ತಿಹಾಕಿಕೊಂಡು ಹೋದಾಗ ಕಲಿತಿರುವುದು. ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಿಟಿ ರವಿ, ರಮೇಶ್ ಜಾರಕಿಹೊಳಿ ಹಾಗೂ ರೇಣುಕಾಚಾರ್ಯ ಅವರನ್ನು ಸಹ ತರಾಟೆಗೆ ತೆಗೆದುಕೊಂಡು ಬೈದಿರುವುದು ವಿಡಿಯೋದಲ್ಲಿ ಇದೆ.
ಏನ್ರೋ ನಿಮ್ದು ಬಾಳು: ಜಗದೀಶ್ ಬಿಜೆಪಿ ನಾಯಕರಿಗೆ ಏನ್ರೋ ನಿಮ್ದು ಬಾಳು ಅಂತ ಹೇಳಿರುವುದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಇದರೊಂದಿಗೆ ಜೆಡಿಎಸ್ನ ಬಗ್ಗೆಯೂ ಅವರು ತರಾಟೆಗೆ ತೆಗೆದುಕೊಂಡಿರುವುದು ವಿಡಿಯೋದಲ್ಲಿ ಇದೆ.
ಬಸ್ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಪೊಲೀಸ್ ಅಧಿಕಾರಿಯೊಬ್ಬರಿಗೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಇದಕ್ಕೆ ಲಾಯರ್ ಜಗದೀಶ್ ರಿಯಾಕ್ಟ್ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications