Lawyer Jagadish : ಆಮ್ ಆದ್ಮಿ ಪಕ್ಷಕ್ಕೆ ವಕೀಲ ಜಗದೀಶ್ ರಾಜೀನಾಮೆ
ಬೆಂಗಳೂರು, ಮಾರ್ಚ್ 24: ಕೆಲವು ತಿಂಗಳುಗಳ ಹಿಂದೆಯಷ್ಟೇ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ವಕೀಲ ಜಗದೀಶ್ ಕೆ.ಎನ್. ಇಂದು (ಗುರುವಾರ) ಪಕ್ಷಕ್ಕೆ ದಿಢೀರ್ ಆಗಿ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ವಕೀಲ ಜಗದೀಶ್ ಕೆ.ಎನ್, "ಆಮ್ ಆದ್ಮಿ ಪಕ್ಷಕ್ಕೆ ಸೇರಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಇಂದು ಅಧಿಕೃತವಾಗಿ ಆಮ್ ಆದ್ಮಿ ಪಕ್ಷ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಕರ್ನಾಟಕ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿಯವರಿಗೆ ತಲುಪಿಸಿದ್ದೇನೆ,'' ಎಂದರು.

"ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳಿಗೂ ಈ ವಿಷಯ ಹೇಳುತ್ತಿದ್ದೇನೆ. ನನ್ನ ರಾಜೀನಾಮೆ ತಕ್ಷಣದಿಂದ ಕಾರ್ಯರೂಪಕ್ಕೆ ಬರಲಿದ್ದು, ಇನ್ಮುಂದೆ ನನಗೂ, ಆದ್ಮಿ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿರುವುದಿಲ್ಲ," ಎಂದು ವಿಡಿಯೋ ಹೇಳಿಕೆಯಲ್ಲಿ ವಕೀಲ ಜಗದೀಶ್ ಕೆ.ಎನ್ ತಿಳಿಸಿದ್ದಾರೆ.
ಆಮ್ ಆದ್ಮಿ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ "ಅಭಿವೃದ್ಧಿಪರ ಆಡಳಿತ ನೀಡಲು ವಿಫಲವಾಗಿರುವ ಹಾಗೂ ಸದಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಂದ ರಾಜ್ಯವನ್ನು ಕಾಪಾಡಲು ಆಮ್ ಆದ್ಮಿ ಪಾರ್ಟಿಯ ಅವಶ್ಯಕತೆ ರಾಜ್ಯಕ್ಕಿದೆ,'' ಎಂದು ಖ್ಯಾತ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಎನ್. ಜಗದೀಶ್ ಮಹಾದೇವ್ ಹೇಳಿದ್ದರು.
Recommended Video

-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications