Lawyer Jagadish: ಲಾಯರ್ ಜಗದೀಶ್ಗೆ ದರ್ಶನ್ ಅಭಿಮಾನಿಗಳಿಂದ ಬಿತ್ತು ಗೂಸಾ ?!
ಎಲ್ಲಾ ವಿಷಯಗಳಿಗೂ ರಿಯಾಕ್ಟ್ ಮಾಡುತ್ತಿದ್ದ ಹಾಗೂ ವಿಡಿಯೋಗಳ ಮೂಲಕ ವೈರಲ್ ಆಗುತ್ತಿದ್ದ ಲಾಯರ್ ಜಗದೀಶ್ ಅವರಿಗೆ ನಟ ದರ್ಶನ್ ಅವರ ಅಭಿಮಾನಿಗಳು ಗೂಸಾ ಕೊಟ್ಟಿದ್ದಾರೆ ಎನ್ನಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ನಟ ದರ್ಶನ್ ಸೇರಿದಂತೆ ಹಲವರ ಬಗ್ಗೆ ಲಾಯರ್ ಜಗದೀಶ್ ಅವರು ಮಾತನಾಡಿದ್ದರು. ಇದೀಗ ಗುರುವಾರ ದರ್ಶನ್ ಅವರ ಅಭಿಮಾನಿಗಳು ಲಾಯರ್ ಜಗದೀಶ್ಗೆ ಹೊಡೆದಿದ್ದಾರೆ ಎನ್ನಲಾಗಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೊದಲ ದರ್ಶನ್ ಪರ ಮಾತನಾಡಿದ್ದ ಲಾಯರ್ ಜಗದೀಶ್ ಅವರು ಇತ್ತೀಚಿನ ದಿನಗಳಲ್ಲಿ ದರ್ಶನ್ ಅವರ ಅಭಿಮಾನಿಗಳು ಕೋಪಗೊಳ್ಳುವಂತೆ ಮಾತನಾಡಿದ್ದರು. ಇದೇ ಕಾರಣಕ್ಕೆ ಲಾಯರ್ ಜಗದೀಶ್ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಆದರೆ ಜಗದೀಶ್ ಅವರು ಹಲವು ವಿಷಯಗಳ ಬಗ್ಗೆ ಹೋರಾಟ ಮಾಡಿದ್ದೂ ಇದೆ.
ಕನ್ನಡ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಲಾಯರ್ ಜಗದೀಶ್ ಅವರಿಗೆ ಆರೇಳು ಜನ ಸೇರಿಕೊಂಡು ಗುರುವಾರ ಹೊಡೆದಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಲಾಯರ್ ಜಗದೀಶ್ ಹಾಗೂ ಅಪರಿಚಿತ ಗುಂಪಿನ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟವಾಗಿದೆ. ಕೆಲವರು ಈ ಸಂದರ್ಭದಲ್ಲಿ ಲಾಯರ್ ಜಗದೀಶ್ ಅವರನ್ನು ಹೊಡೆಯದಂತೆ ತಡೆಯುವುದಕ್ಕೂ ಪ್ರಯತ್ನಪಟ್ಟಿದ್ದಾರೆ. ಜಗದೀಶ್ ಅವರ ಟೀ ಶರ್ಟ್ ಹಿಡಿದು ತಳ್ಳಾಡಲಾಗಿದೆ. ಅಲ್ಲದೆ ಟೀ ಶರ್ಟ್ ಕಿತ್ತು ಹಾಕಲಾಗಿದ್ದು, ಕೆಲವರು ಜಗದೀಶ್ಗೆ ಏಟು ಕೊಟ್ಟಿದ್ದಾರೆ.

ದರ್ಶನ್ ಅಭಿಮಾನಿಗಳಿಂದ ಸಂಭ್ರಮ: ಈ ವಿಡಿಯೋವನ್ನು ನೋಡಿ ದರ್ಶನ್ ಅಭಿಮಾನಿಗಳು ಕಮೆಂಟ್ನ ಮೂಲಕ ಸಂತೋಷ ಹಂಚಿಕೊಳ್ಳುತ್ತಿದ್ದಾರೆ. ಹೌದು ಡಿ ಬಾಸ್ನ ಬಗ್ಗೆ ಮಾತನಾಡಿದ್ದಕ್ಕೆ ಸರಿಯಾಗಿಯೇ ಆಗಿದೆ. ಇನ್ಮುಂದೆಯಾದರೂ ಡಿ ಬಾಸ್ ಹಾಗೂ ಅವರ ಅಭಿಮಾನಿಗಳ ತಂಟೆಗೆ ಬರಬೇಡಿ ಅಂತ ದರ್ಶನ್ ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.
ವಿಡಿಯೋ ಮೂಲಕ ಲಾಯರ್ ಜಗದೀಶ್ ಸ್ಪಷ್ಟನೆ
ಇನ್ನು ಲಾಯರ್ ಜಗದೀಶ್ ಅವರಿಗೆ ಹಲ್ಲೆ ಮಾಡಲಾಗಿದೆ ಎನ್ನುವ ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಈ ಸಂಬಂಧ ವಿಡಿಯೋ ಮೂಲಕ ಲಾಯರ್ ಜಗದೀಶ್ ಅವರು ಸ್ಪಷ್ಟನೆ ಕೊಟ್ಟಿದ್ದಾರೆ ಎನ್ನಲಾಗಿರುವ ವಿಡಿಯೋ ಸಹ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಮಾತನಾಡಿರುವ ಅವರು ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ವಿರೂಪಾಕ್ಷಪುರ ಗೇಟ್ ಸಮೀಪದ ನಮ್ಮ ಮನೆಯ ಕಾಂಪ್ಲೆಕ್ಸ್ನ ಮುಂಭಾಗದಲ್ಲಿ ರೋಡ್ ಬ್ಲಾಕ್ ಆಗಿರುವ ಬಗ್ಗೆ ನಾನು ಪೊಲೀಸರಿಗೆ ದೂರು ನೀಡಿದ್ದೆ. ಈ ಭಾಗದಲ್ಲಿ ಅಣ್ಣಮ್ಮ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದರಿಂದ ನಾವು ಇರುವ ಏರಿಯಾದ ರಸ್ತೆ ಬ್ಲಾಕ್ ಆಗಿದೆ. ಇದರ ಬಗ್ಗೆ ಪೊಲೀಸರಿಗೆ ಕಂಪ್ಲೇಂಟ್ ಮಾಡಿದ್ದೆ.
ಬೆಳಗ್ಗೆ ವಾಕಿಂಗ್ ಹೋದಾಗ 40 ಜನ ಪುಂಡರು ನನ್ನ ಜೊತೆ ಜಗಳ ಮಾಡಿದ್ದಾರೆ. ಈ ಪುಂಡರನ್ನು ಪೊಲೀಸರೇ ಕಳೆಸಿದ್ದಾರೆ ಎನ್ನುವ ಬಗ್ಗೆ ನನಗೆ ಅನುಮಾನ ಇದೆ ಅಂತಲೂ ಅವರು ಆರೋಪ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications